ತಂದೆ ಮಗನ ನಡುವೆ ಘರ್ಷಣೆ: ಗಂಭೀರ ಗಾಯಗೊಂಡ ತಂದೆ ಸಾವು
Team Udayavani, Aug 17, 2020, 10:39 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪುತ್ತೂರು: ತಂದೆ ಮತ್ತು ಮಗನ ನಡುವೆ ಕಾಳಗ ನಡೆದು ಗಂಭೀರ ಗಾಯಗೊಂಡ ತಂದೆ ಆಸ್ಪತ್ರೆ ದಾರಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಕೆದಂಬಾಡಿ ಗ್ರಾಮದ ತಿಂಗಳಾಡಿ ಬಾಲಯ ಬಳಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಸೋಮವಾರ ರಾತ್ರಿ ಗಂಗಾಧರ್ ನಾಯ್ಕ್ ಹಾಗೂ ಅವರ ಪುತ್ರ ಶಶಿಧರ್ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಘರ್ಷಣೆ ಸಂಭವಿಸಿದೆ.
ಈ ಸಂದರ್ಭದಲ್ಲಿ ಗಂಗಾಧರ್ ನಾಯ್ಕ್ ಗಂಭೀರವಾಗಿ ಗಾಯಗೊಂಡರು. ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಘರ್ಷಣೆಯಲ್ಲಿ ಪುತ್ರ ಶಶಿಧರ್ ಅವರಿಗೂ ಗಾಯಗಳಾಗಿದ್ದು ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.