ಟೀಮ್ ಸ್ವಚ್ಛ ಪುತ್ತೂರಿನಿಂದ ಸ್ವಚ್ಛತಾ ಅಭಿಯಾನ
Team Udayavani, May 15, 2018, 12:20 PM IST
ನಗರ: ಟೀಮ್ ಸ್ವಚ್ಛ ಪುತ್ತೂರು ತಂಡದಿಂದ ರವಿವಾರ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪರಿಸರದಲ್ಲಿ ಸ್ವಚ್ಛತೆ ಅಭಿಯಾನ ನಡೆಯಿತು. ಸ್ವಚ್ಛತೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿತು. ಸ್ವಚ್ಛತಾ ಅಭಿಯಾನವನ್ನು ನಾಗರಿಕರಾದ ಉದಯ ಕುಮಾರ್ ಮತ್ತು ರಾಧಾಕೃಷ್ಣ ಭಟ್ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.
ರಾಧಾಕೃಷ್ಣ ಭಟ್ ಮಾತನಾಡಿ, ಸಾರ್ವಜನಿಕರು ಕೇವಲ ಸ್ವಚ್ಛತೆ ಮಾಡುವುದನ್ನು ನಿಂತು ನೋಡಿದರೆ ಸಾಲದು. ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಂಡು ಸ್ವಚ್ಛ ಪುತ್ತೂರಿನ ಕಲ್ಪನೆಯನ್ನು ಸಾಕಾರಗೊಳಿಸಬೇಕು. ಇದರಿಂದ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಪರಿಕಲ್ಪನೆಗೆ ನಾವು ಕೈಜೋಡಿಸಲು ಸಾಧ್ಯ ಎಂದರು.
ಜಾಗೃತಿ
ಬಸ್ ನಿಲ್ದಾಣ ಪರಿಸರದ ಹೊಟೇಲ್, ಅಂಗಡಿ, ತಂಪು ಪಾನೀಯ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿದ ಅಭಿಯಾನ ತಂಡವು ತಮ್ಮ ಉದ್ಯಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ತ್ಯಾಜ್ಯಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಕಸವನ್ನು ಪರಿಸರದಲ್ಲಿ ಎಸೆಯದಂತೆ ಜಾಗೃತಿ ಮೂಡಿಸಬೇಕು ಎಂದು ಕರಪತ್ರಗಳನ್ನು ವಿತರಿಸಿ ಸ್ವಚ್ಛತಾ ಜಾಗೃತಿಯನ್ನು ಮೂಡಿಸಿತು.
ಅಭಿಯಾನದಲ್ಲಿ ಟೀಮ್ ಸ್ವಚ್ಛ ಪುತ್ತೂರು ಸಂಚಾಲಕ ಶ್ರೀಕೃಷ್ಣ ಉಪಾಧ್ಯಾಯ, ಜಿ. ಕೃಷ್ಣ, ಸಂದೀಪ್ ಲೋಬೋ, ಕೃಷ್ಣ ಮೋಹನ್, ಡಾ| ಸದಾಶಿವ ಭಟ್, ಯುವ ಕಾರ್ಯಕರ್ತೆ ವಿಜೇತಾ ಬಲ್ಲಾಳ್, ಸುರೇಶ್ ಕಲ್ಲಾರೆ, ಜಯಪ್ರಕಾಶ್ ಆಚಾರ್ಯ, ಶಂಕರ್ ಮಲ್ಯ ಸೇರಿದಂತೆ ಮೊದಲಾದವರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ