ನಿರ್ವಹಣೆಯಿಲ್ಲದ ಬಾವಿಯ ಸ್ವಚ್ಛತೆ ಕಾರ್ಯ


Team Udayavani, May 23, 2018, 11:34 AM IST

23-may-6.jpg

ತೋಕೂರು: ಸುಮಾರು 30 ಅಡಿ ಆಳದ ಕುಡಿಯುವ ನೀರಿನ ಬಾವಿ ಸೂಕ್ತ ನಿರ್ವಹಣೆ ಇಲ್ಲದೇ ಸೊರಗಿತ್ತು. ನೀರೆಲ್ಲ ಹಳದಿಯಾಗಿ, ಬಾವಿಯ ಒಳ, ಹೊರಗೆ ಗಿಡ ಗಂಟಿಗಳು ಬೆಳೆದಿದ್ದು, ಪಾಳು ಬಾವಿಯಂತಿತ್ತು. ಸಾರ್ವಜನಿಕರಿಗೆ ನೀರಿನ ತಾತ್ವಾರ ಇರುವಾಗ ಸಂಜೀವಿನಿಯಾಗಿರುವ ಈ ಬಾವಿಯನ್ನು ಪಕ್ಷಿಕೆರೆಯ ಶ್ರೀ ವಿನಾಯಕ ಮಿತ್ರ ಮಂಡಳಿಯ ಸುಮಾರು 40 ಮಂದಿ ಶ್ರಮ ದಾನ ಮಾಡಿ ಸ್ವಚ್ಛಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಿದ್ದಾರೆ.

ಕಳೆದ ವರ್ಷವಷ್ಟೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗೆ ತೋಕೂರಿನ ನಾರಾಯಣ ಆಚಾರ್ಯ ಅವರು ತಮ್ಮ ಮನೆಯ ಆವರಣದಲ್ಲಿದ್ದ ಬಾವಿಯನ್ನು ನೀಡಿದ್ದರು. ಇದು ಸುತ್ತಮುತ್ತಲಿನ ಹಲವು ಮನೆಗಳಿಗೆ ನೀರು ಒದಗಿಸುತ್ತಿತ್ತಾದರೂ ಸೂಕ್ತ ನಿರ್ವಹಣೆಯ ಕೊರತೆ ಇತ್ತು. ಮೇ 20ರಂದು ವಿನಾಯಕ ಮಿತ್ರ ಮಂಡಳಿಯವರು ಬೆಳಗ್ಗೆ 7ರಿಂದ ಮಧ್ಯಾಹ್ನ 1ರ ವರೆಗೆ ಬಿಡುವಿಲ್ಲದೇ ದುಡಿದು ಬಾವಿಯನ್ನು ಸ್ವಚ್ಛಗೊಳಿಸಿದ್ದಾರೆ.

ಪಕ್ಷಿಕೆರೆಯ ಶ್ರೀ ವಿನಾಯಕ ಮಿತ್ರ ಮಂಡಳಿಯು ಮಂಗಳೂರಿನ ಯುವ ಕಾರ್ಯ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರದ ಜಂಟಿಯಾಗಿ ಕಾರ್ಯಕ್ರಮವನ್ನು ಸ್ವಚ್ಛತಾ ಅಭಿಯಾನದ ರೀತಿಯಲ್ಲಿ ಹಮ್ಮಿಕೊಂಡಿತ್ತು. ಪಡುಪಣಂಬೂರು ಪಂಚಾಯತ್‌ ಅಧ್ಯಕ್ಷ ಮೋಹನ್‌ದಾಸ್‌, ಸಂಘ ಪರಿವಾರದ ಎಚ್‌.ರಾಮಚಂದ್ರ ಶೆಣೈ, ಯೋಗ ಗುರು ಜಗದೀಶ್‌ ಮಂಗಲ್ಪಾಡಿ ಮೊದಲಾದವರು ಮಾರ್ಗದರ್ಶನ ನೀಡಿ ಸಹಕಾರ ನೀಡಿದ್ದರು.

ಪಕ್ಷಿಕೆರೆ ವ್ಯಾಪ್ತಿಯಲ್ಲಿ ಹಲವು ಸೇವಾ ಚಟುವಟಿಕೆಯನ್ನು ಮಾಡುತ್ತಿದ್ದೇವೆ, ಸಾರ್ವಜನಿಕವಾಗಿ ಬಳಸಲ್ಪಡುವ ಆರ್‌ಎಸ್‌ಎಸ್‌ ಸಂಘದ ಮನೆಯ ಕುಡಿಯುವ ನೀರಿನ ಬಾವಿಯನ್ನು ಸ್ವಚ್ಛಗೊಳಿಸಲು ಕೇಳಿಕೊಂಡಾಗ ನಮ್ಮ ಮಂಡಳಿಯ ಎಲ್ಲ ಸದಸ್ಯರು ಒಟ್ಟು ಸೇರಿಕೊಂಡು ಬಾವಿಯನ್ನು ಸ್ವಚ್ಛಗೊಳಿಸಿ ಕುಡಿಯಲು ಯೋಗ್ಯವಾಗುವಂತೆ ಮಾಡಿದ್ದೇವೆ ಇದು ನಮ್ಮ ಸಂಘಟನಾತ್ಮಕ ಶಕ್ತಿಗೆ ಈ ಕಾರ್ಯ ಉತ್ತಮ ವೇದಿಕೆಯಾಗಿದೆ ಎನ್ನುತ್ತಾರೆ ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿಯ ಸ್ಥಾಪಕಾಧ್ಯಕ್ಷರಾದ ರಾಜೇಶ್‌ ದಾಸ್‌.

ನೀರಿನ ಬವಣೆ ನೀಗಿಸಲು ಸಹಕಾರಿ
ಗ್ರಾಮ ಪಂಚಾಯತ್‌ಗೆ ಹಲವು ಸಂಘ ಸಂಸ್ಥೆಗಳು ಮುಕ್ತವಾಗಿ ನೆರವು ನೀಡುತ್ತಿರುವುದರಿಂದ ಸ್ವಚ್ಛತೆ ಮತ್ತು ಜಲಕ್ಷಾಮವನ್ನು ನಿಭಾಯಿಸಲು ಸಹಕಾರಿಯಾಗಿದೆ. ಕುಡಿಯುವ ನೀರಿನ ಬಾವಿಗಳನ್ನು ಸ್ವಚ್ಛವಾಗಿಡಲು ಹಾಗೂ ಸುತ್ತಮುತ್ತ ಸ್ವಚ್ಛ ಪರಿಸರದ ಜಾಗೃತಿಗೆ ಮಿತ್ರ ಮಂಡಳಿ ಪಂಚಾಯತ್‌ನೊಂದಿಗೆ ಕೈ ಜೋಡಿಸಿದೆ. ಇಂತಹ ಸೇವಾ ಮನೋಭಾವನೆಯಿಂದ ಪಂಚಾಯತ್‌ಗೂ ಆಧಾರವಾಗಿದೆ.
-ಮೋಹನ್‌ದಾಸ್‌
ಅಧ್ಯಕ್ಷರು, ಪಡುಪಣಂಬೂರು ಗ್ರಾ.ಪಂ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.