ಸ್ವಚ್ಛತೆ ನಮ್ಮೆಲ್ಲರ ಆದ್ಯ ಕರ್ತವ್ಯ: ಡಾ| ಶಿವಾನಂದ ಮೂರ್ತಿ

ಕ್ಯಾಂಪಸ್‌ ಸ್ವಚ್ಛತೆ;ಸಿಬಂದಿ,ವಿದ್ಯಾರ್ಥಿಗಳಿಂದ ಶ್ರಮದಾನ

Team Udayavani, Apr 9, 2019, 6:30 AM IST

0804mlr2

ಮಹಾನಗರ: ನಗರದ ಎಕ್ಕೂರಿನ ಮೀನುಗಾರಿಕಾ ಕಾಲೇಜಿನ ಎನ್ನೆಸ್ಸೆಸ್‌ ಘಟಕ ಮತ್ತು ಸ್ಟಾಫ್‌ ಕ್ಲಬ್‌ಗಳ ಸಹಯೋಗದಲ್ಲಿ ಕ್ಯಾಂಪಸ್‌ ಸ್ವಚ್ಛತೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಶ್ರಮದಾನದಲ್ಲಿ ಕಾಲೇಜಿನ ಡೀನ್‌ ಮತ್ತು ಜಲಕೃಷಿ, ಜಲಪರಿಸರ ನಿರ್ವ ಹಣೆ, ಮತ್ಸ್ಯ ಸಂಪನ್ಮೂಲ ನಿರ್ವಹಣೆ, ಜಲಚರ ಪ್ರಾಣಿಗಳ ಆರೋಗ್ಯ ನಿರ್ವಹಣೆ, ಮೀನು ಸಂಸ್ಕರಣ ತಾಂತ್ರಿ ಕತೆ, ಮೀನುಗಾರಿಕಾ ತಾಂತ್ರಿಕತೆ ಎಂಜಿ ನಿಯರ್‌, ದೈಹಿಕ ಶಿಕ್ಷಣ, ಆಸ್ತಿ ಶಾಖೆ, ಆಡಳಿತ, ಗ್ರಂಥಾಲಯ ವಿಭಾಗಗಳು, ವಿದ್ಯಾರ್ಥಿ- ವಿದ್ಯಾರ್ಥಿನಿಯರ ನಿಲಯ, ಬೋಧಕ-ಬೋಧಕೇತರ ಸಿಬಂದಿ, ಸಂಶೋಧನಾ ವರ್ಗ ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಕಾಲೇಜಿನ ಡೀನ್‌ ಡಾ| ಎಚ್‌. ಶಿವಾನಂದ ಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ, ಸ್ವಚ್ಛತೆ ಎಂಬುದು ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ. ನಾವು ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟರೆ ಮಾತ್ರ ನಮಗೆ ಸ್ವಚ್ಛ ಗಾಳಿ, ನೀರು, ಪರಿಸರ ಇತ್ಯಾದಿಗಳನ್ನು ದೊರಕಿಸಿಕೊಳ್ಳಲು ಸಾಧ್ಯ ಹಾಗೂ ಸ್ವಚ್ಛ ವಾತಾವರಣ ಕಾಪಾಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಪ್ರತಿಯೊಬ್ಬ ನಾಗರಿಕನು ಭೇದ- ಭಾವವಿಲ್ಲದೇ ಸ್ವ- ಇಚ್ಛೆಯಿಂದ ತಾನು ವಾಸಿಸುವ ಪರಿಸರವನ್ನು ಶುದ್ಧವಾಗಿ ಇರಿಸುವ ಜವಾಬ್ದಾರಿಯನ್ನು ನಿರ್ವಹಿ ಸಬೇಕು. ಬೇರೆಯವರಿಗೆ ದಾರಿದೀಪ ಆಗಬೇಕಾಗಿದೆ ಎಂದು ಹೇಳಿದರು. ಜಾಗತಿಕ ತಾಪಮಾನದಲ್ಲಿ ವ್ಯತ್ಯಾಸ ಕಂಡು ಬರುತ್ತಿರುವ ಇಂದಿನ ಯುಗದಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಮತ್ತು ಆದ್ಯ ಕರ್ತವ್ಯ ಎಂದರು.

ಎನ್ನೆಸ್ಸೆಸ್‌ ಕಾರ್ಯಕ್ರಮ ಅಧಿಕಾರಿ ಡಾ| ಎ.ಟಿ. ರಾಮಚಂದ್ರ ನಾಯ್ಕ ಸ್ವಾಗತಿಸಿ, ಪ್ರಸ್ತಾವನೆಗೈದು ಶ್ರಮದಾನದ ಉದ್ದೇಶ ವಿವರಿಸಿದರು. ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್‌)ಯು ದೇಶದಲ್ಲಿ ಪ್ರಾರಂಭಗೊಂಡು 50 ವರ್ಷಗಳು ಕಳೆದಿವೆ. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ 1969 ಸೆಪ್ಟಂಬರ್‌ 24ರಂದು ಇದನ್ನು ಕಾರ್ಯರೂಪಕ್ಕೆ ತರಲಾಗಿತ್ತು. ಈ ವರ್ಷ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದೆ ಎಂದು ಹೇಳಿದರು.

ಕಾಲೇಜಿನ ಎನ್‌.ಎಸ್‌.ಎಸ್‌. ಘಟಕವು ಪ್ರತಿ ತಿಂಗಳು ಒಂದಲ್ಲ ಒಂದು ಕ್ಯಾಂಪಸ್‌ ಸ್ವ‌ತ್ಛತಾ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದೆ ಎಂದು ವಿವರಿಸಿದರು.

ವಿವಿಧೆಡೆ ದುರಸ್ತಿ
ಶಿಬಿರಾರ್ಥಿಗ‌ಳು ವಿವಿಧ ಗುಂಪುಗಳಾಗಿ ಶ್ರಮದಾನದಲ್ಲಿ ಪಾಲ್ಗೊಂಡರು. ಪ್ಲಾಸ್ಟಿಕ್‌, ಒಣಗಿದ ಎಲೆ, ಹಳೆ ಬಟ್ಟೆ- ಸಾಮಾನುಗಳ ಸಂಗ್ರಹ, ಒಣಗಿದ ಪೊದೆಗಳು, ಒಳದಾರಿಗಳ ದುರಸ್ತಿ, ಹೂ- ಗಿಡಗಳಿಗೆ ನೀರು ಪೂರೈಕೆ, ಒಳ ಚರಂಡಿಗಳ ದುರಸ್ತಿ ಮುಂತಾದ ಕೆಲಸಗಳನ್ನು ನಿರ್ವಹಿಸಿದರು. ಸ್ಟಾಫ್‌ ಕ್ಲಬ್‌ ಕಾರ್ಯದರ್ಶಿ ಡಾ| ಗಿರೀಶ್‌ ಎಸ್‌.ಕೆ. ವಂದಿಸಿದರು.

ಪ್ಲಾಸ್ಟಿಕ್‌ ಮುಕ್ತ ಕ್ಯಾಂಪಸ್‌
ಮೀನುಗಾರಿಕಾ ಕಾಲೇಜಿನಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ಹತೋಟಿಯಲ್ಲಿದ್ದು, ಬಹುತೇಕ ಪ್ಲಾಸ್ಟಿಕ್‌ ಮುಕ್ತ ಕ್ಯಾಂಪಸ್‌ ಆಗಿದೆ. ಇದಕ್ಕೆ ಎಲ್ಲ ಸಿಬಂದಿ ಮತ್ತು ವಿದ್ಯಾರ್ಥಿಗಳು ಕಾರಣಕರ್ತರು ಎಂದು ಎನ್ನೆಸ್ಸೆಸ್‌ ಕಾರ್ಯಕ್ರಮ ಅಧಿಕಾರಿ ಡಾ| ಎ.ಟಿ. ರಾಮಚಂದ್ರ ನಾಯ್ಕ ಸಮಾರೋಪದಲ್ಲಿ ಹೇಳಿದರು.

ಟಾಪ್ ನ್ಯೂಸ್

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.