ಪಾಂಡೇಶ್ವರದ ನೆಹರೂ ವೃತ್ತದ ಸುತ್ತಮುತ್ತ ಸ್ವಚ್ಛತೆ 


Team Udayavani, Jan 22, 2018, 11:43 AM IST

22-Jan-9.jpg

ಮಹಾನಗರ: ರಾಮಕೃಷ್ಣ ಮಿಷನ್‌ಸ್ವಚ್ಛತಾ ಅಭಿಯಾನದ 12ನೇ ವಾರದ ಸ್ವಚ್ಛತಾ ಕಾರ್ಯಕ್ರಮ ರವಿವಾರ ಪಾಂಡೇಶ್ವರದ ನೆಹರೂ ವೃತ್ತದ ಸುತ್ತಮುತ್ತ ಹಮ್ಮಿಕೊಳ್ಳಲಾಯಿತು. ಬೆಂಗಳೂರು ರಾಮಕೃಷ್ಣ ಮಠದ ಸ್ವಾಮಿ ರಘುರಾಮಾನಂದಜಿ ಹಾಗೂ ಕಾರ್ಪೊರೇಶನ್‌ ಬ್ಯಾಂಕ್‌ ಎಂ.ಡಿ. ಜಯಕುಮಾರ್‌ ಗರ್ಗ್‌ ಅವರು ಐಜಿಪಿ ಕಚೇರಿ ಮುಂಭಾಗ ಚಾಲನೆ ನೀಡಿದರು. ಸ್ವಾಮಿ ಧರ್ಮವ್ರತಾನಂದಜಿ, ಕಾರ್ಪೊರೇಶನ್‌ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ್‌ ಮುರಳಿ ಭಗತ್‌ ಹಾಗೂ ಸ್ವದೇಶಿ ಸೇವಾ ತಂಡದ ಸದಸ್ಯರು ಉಪಸ್ಥಿತರಿದ್ದರು.

ಹತ್ತು ತಂಡಗಳಿಂದ ಶ್ರಮದಾನ
ಸ್ವಚ್ಛ ಮಂಗಳೂರು ಸ್ವಯಂ ಸೇವಕರು ಹಾಗೂ ಕಾರ್ಪೊರೇಶನ್‌ ಬ್ಯಾಂಕ್‌ ಮುಖ್ಯ ಕಚೇರಿಯ ಸುಮಾರು 300 ಸದಸ್ಯರು ಸುಮಾರು ಹತ್ತು ತಂಡಗಳನ್ನಾಗಿ ವಿಂಗಡಿಸಿಕೊಂಡು ಶ್ರಮದಾನ ಮಾಡಿದರು. ಕಾರ್ಪೊರೇಶನ್‌ ಬ್ಯಾಂಕಿನ ಮಹಾ ಪ್ರಬಂಧಕ ಗುರು ಹರಿನಾಥ್‌ ರಾವ್‌, ಎಸ್‌. ಕುಮಾರ್‌ ಹಾಗೂ ಎಂ.ಎನ್‌.ಕೆ. ವಿಶ್ವನಾಥ್‌ ನೇತೃತ್ವದಲ್ಲಿ ರೋಸಾರಿಯೋ ರಸ್ತೆ, ಪ್ರಧಾನ ಅಂಚೆ ಕಚೇರಿಯತ್ತ ಸಾಗುವ ಮಾರ್ಗ, ಎ ಬಿ ಶೆಟ್ಟಿ ವೃತ್ತ, ಪಾಂಡೇಶ್ವರ ಕಟ್ಟೆ ಕಡೆ ಸಾಗುವ ದಾರಿ ಹೀಗೆ ತಲಾ ಎರಡೆರಡು ಬದಿಗಳಲ್ಲಿ ಒಂದೊಂದು ತಂಡ ತೆರಳಿ ಸ್ವಚ್ಛತೆಯ ಕಾರ್ಯಕೈಗೊಂಡರು. ಹಲವರು ತೋಡುಗಳಲ್ಲಿ ಸಂಗ್ರಹವಾಗಿದ್ದ ತ್ಯಾಜ್ಯವನ್ನು ತೆಗೆದರೆ ಒಂದಿಷ್ಟು ಜನ ಕಾರ್ಯಕರ್ತರು ಮಾರ್ಗವಿಭಾಜಕಗಳನ್ನು ಸ್ವಚ್ಛಗೊಳಿಸಿದರು.

ವಿಶೇಷ ಕಾರ್ಯ
ಫಿಜಾ ಮಾಲ್‌ ಎದುರಿನ ರಸ್ತೆಯಲ್ಲಿ ಹಲವು ವರ್ಷಗಳಿಂದ ಬೃಹತ್‌ ಮರದ ದಿಮ್ಮಿಯೊಂದು ಮಾರ್ಗದಲ್ಲಿ ಬಿದ್ದುಕೊಂಡು ರಸ್ತೆಯ ಉಪಯುಕ್ತ ಜಾಗೆಯನ್ನು ಆವರಿಸಿಕೊಂಡಿತ್ತು. ಇಂದು ಸ್ವಚ್ಛ ಮಂಗಳೂರಿನ ಕಾರ್ಯಕರ್ತರಾದ ಮೆಹಬೂಬ್‌, ದಿನೇಶ್‌ ಕರ್ಕೇರ ಮೊದಲಾದವರು ಜೇಸಿಬಿ ಸಹಾಯದಿಂದ ಅದನ್ನು ಎತ್ತಿ ಟಿಪ್ಪರಗೆ ಹಾಕಿ, ಸಾಗಿಸಿದರು. ಅನಂತರ ಆ ಜಾಗವನ್ನು ಶುಭ್ರಗೊಳಿಸಿದರು. ಮತ್ತೂಂದೆಡೆ ಸೌರಜ್‌ ಮಂಗಳೂರು, ಕಾವ್ಯಾ ಕೋಡಿಕಲ್‌ ಹಾಗೂ ಹಿಂದೂ ವಾರಿಯರ್ಸ್‌ ಸದಸ್ಯರು ಸರ್ವೀಸ್‌ ಬಸ್‌ ನಿಲ್ದಾಣದ ಬಳಿಯ ಆವರಣ ಗೋಡೆಗೆ ಅಂಟಿಸಿದ್ದ ಪೋಸ್ಟರ್‌ ಕಿತ್ತು ಹಾಕಿದರು. ಅನಂತರ ನೀರಿನ ಟ್ಯಾಂಕರ್‌ ತರಿಸಿಕೊಂಡು ದುರ್ವಾಸನೆಯಿಂದ ಕೂಡಿದ ಅಲ್ಲಿನ ಸ್ಥಳವನ್ನು ನೀರಿನಿಂದ ತೊಳೆದು, ಬಸ್‌ ಚಾಲಕ ನಿರ್ವಾಹಕರಿಗೆ ಸ್ವತ್ಛತೆಯ ಕುರಿತು ತಿಳಿಹೇಳಿ ಶೌಚಾಲಯವನ್ನೇ ಬಳಸುವಂತೆ ಮನವಿ ಮಾಡಿದರು.

ಕರಪತ್ರ ವಿತರಣೆ
ಶ್ರಮದಾನದ ಜೊತೆಗೆ ಪಾಂಡೇಶ್ವರ ಹಾಗೂ ಓಲ್ಡ್‌ ಕೆಂಟ್‌ ರಸ್ತೆಯ ನೂರಾರು ಮನೆಗಳಿಗೆ ತೆರಳಿ ಕರಪತ್ರ ಹಂಚಿ, ಪರಿಸರದ ಸ್ವಚ್ಛತೆಯನ್ನು ಕಾಪಾಡುವಂತೆ ಮನವಿ ಮಾಡಲಾಯಿತು. ಸತ್ಯನಾರಾಯಣ ಕೆ, ಕಾರ್ಪೊರೇಶನ್‌ ಬ್ಯಾಂಕಿನ ಸಿಬಂದಿ ಹಾಗೂ ಎಂ.ಎಸ್‌. ಕುಶೆ ಶಾಲಾ ವಿದ್ಯಾರ್ಥಿಗಳು ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈ ಹಿಂದೆ ತಾ.ಪಂ. ಮುಂಭಾಗದಲ್ಲಿ ಸ್ವಚ್ಛತೆಯನ್ನು ಕೈಗೊಂಡು ಶುಚಿಗೊಳಿಸಿ ಆವರಣ ಗೋಡೆಯನ್ನು ಶುಚಿಗೊಳಿಸಲಾಗಿತ್ತು. ಈ ಬಾರಿ ಅದಕ್ಕೆ ಸುಣ್ಣ ಬಣ್ಣಗಳನ್ನು ಹಚ್ಚಿ ಚೆಂದಗೊಳಿಸಲಾಗಿದೆ.

ಕಾರ್ಪೊರೇಶನ್‌ ಬ್ಯಾಂಕಿನ್‌ ಡಿಜಿಎಂ ಎಸ್‌ ಸಾತು, ಎಜಿಎಂ ಎ.ಎನ್‌. ರವಿ ಶಂಕರ್‌ ಅಭಿಯಾನವನ್ನು ಸಂಯೋಜನೆ ಮಾಡಿದರು. ಡಾ| ಸತೀಶ್‌ ರಾವ್‌, ಡಾ| ಶಶಿಕಿರಣ, ಬಾಲಕೃಷ್ಣ ಭಟ್‌ ಸೇರಿದಂತೆ ಹಲವು ಜಪಾನಿ ನಾಗರಿಕರು ಅಭಿಯಾನದಲ್ಲಿ ಭಾಗವಹಿಸಿರುವುದು ವಿಶೇಷ. ಕಾರ್ಪೊರೇಶನ್‌ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಶ್ರಮದಾನದ ಬಳಿಕ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಈ ಅಭಿಯಾನಗಳಿಗೆ ಎಂಆರ್‌ಪಿಎಲ್‌ ಪ್ರಾಯೋಜಕತ್ವ ನೀಡುತ್ತಿದೆ.

ಸ್ವಚ್ಛ ಮನಸ್ಸು
ಮಂಗಳೂರು ನಗರ ಕೇಂದ್ರಿತ ಸುಮಾರು 108 ಪ್ರೌಢಶಾಲೆಗಳ ಸುಮಾರು 11 ಸಾವಿರ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಜಾಗೃತಿ ಮೂಡಿಸುವ ಸಲುವಾಗಿ ಕಳೆದ ಸುಮಾರು ಮೂರು ತಿಂಗಳಿಂದ ಸ್ವಚ್ಛ  ಮನಸ್ಸು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. ಈ ತಿಂಗಳಲ್ಲಿ ‘ಸ್ವಚ್ಛತಾ ದಿವಸ್‌’ ಎಂಬ ಶೀರ್ಷಿಕೆಯೊಂದಿಗೆ ಸುಮಾರು 7,800 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಸುಮಾರು 60 ಜನ ಸಂಪನ್ಮೂಲ ವ್ಯಕ್ತಿಗಳು ಆಯಾ ಶಾಲೆಗಳಿಗೆ ತೆರಳಿ ಪ್ರತಿನಿತ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಸ್ವಚ್ಛಗ್ರಾಮ
ರಾಮಕೃಷ್ಣ ಮಿಷನ್‌ ನೇತೃತ್ವದಲ್ಲಿ ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ವಚ್ಛ ಗ್ರಾಮ ಅಭಿಯಾನ ಇಂದು ಸುಮಾರು ಮೂವತ್ತು ಗ್ರಾಮಗಳಲ್ಲಿ ಜರಗಿದೆ. ಇಲ್ಲಿಯ ತನಕ ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನಲ್ಲಿ 170 ಕಾರ್ಯಕ್ರಮಗಳು ನಡೆದಿವೆ. ದ.ಕ. ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಈ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. 

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.