ವಾತಾವರಣದಲ್ಲಿ ಬದಲಾವಣೆ: ಹೆಚ್ಚುತ್ತಿದೆ ವೈರಲ್‌ ಜ್ವರ

ಆತಂಕ ಬೇಡ; ನಿರ್ಲಕ್ಷಿಸದೆ ವೈದ್ಯರ ಸಲಹೆಯಂತೆ ಔಷಧ ಪಡೆಯಿರಿ

Team Udayavani, Mar 6, 2020, 1:54 AM IST

ವಾತಾವರಣದಲ್ಲಿ  ಬದಲಾವಣೆ: ಹೆಚ್ಚುತ್ತಿದೆ ವೈರಲ್‌ ಜ್ವರ

ಸಾಂದರ್ಭಿಕ ಚಿತ್ರ

ಮಹಾನಗರ: ವಾರದಿಂದ ನಗರದಲ್ಲಿ ಶೀತ, ಜ್ವರ, ಕೆಮ್ಮು, ತಲೆನೋವು ಸಮಸ್ಯೆ ಹೆಚ್ಚುತ್ತಿದ್ದು, ವೈದ್ಯರ ಕ್ಲಿನಿಕ್‌ಗಳ ಮುಂದೆ ಜನ ಸಾಲು ಕಂಡು ಬರುತ್ತಿದೆ. ವಾತಾವರಣದಲ್ಲಾಗುತ್ತಿರುವ ಬದಲಾವಣೆಗಳೇ ವೈರಲ್‌ ಜ್ವರ ಹರಡಲು ಕಾರಣವಾಗುತ್ತಿದೆ.

ಚಳಿಗಾಲ ಕಳೆದು ಬೇಸಗೆ ಶುರುವಾಗಿರುವುದು ಮತ್ತು ಕಳೆದೊಂದು ವಾರದ ಹಿಂದೆ ಮೋಡ, ಬಿಸಿಲಿನ ನಡುವೆ ಅನಿರೀಕ್ಷಿತ ಮಳೆ ಸುರಿದ ಕಾರಣ ವೈರಲ್‌ ಜ್ವರ ಹರಡುತ್ತಿದೆ. ಈ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಶೀತ, ತಲೆನೋವು, ಕೆಮ್ಮು, ಜ್ವರವನ್ನು ನಿರ್ಲಕ್ಷಿಸದೆ ವೈದ್ಯರ ಸಲಹೆಯಂತೆ ಸೂಕ್ತ ಔಷಧ ಪಡೆದುಕೊಳ್ಳಬೇಕು. ವೈದ್ಯರ ಸಲಹೆಯಿಲ್ಲದೆ, ಮೆಡಿಕಲ್‌ ಶಾಪ್‌ಗ್ಳಿಂದ ಔಷಧ ಖರೀದಿಸಿ ಸೇವಿಸಬಾರದು ಎಂದು ವೈದ್ಯರು ತಿಳಿಸಿದ್ದಾರೆ.

ಕೆಮ್ಮಿದಾಗ ಹಳದಿ ಕಫ ಹೋಗುವುದು, ಶೀತದಿಂದ ಹಳದಿ ಸಿಂಬಳ ಬಂದಲ್ಲಿ ಬ್ಯಾಕ್ಟೀರಿಯಲ್‌ ಇನ್‌ಫೆಕ್ಷನ್‌ ಖಚಿತವಾಗುತ್ತದೆ. ಆಗ ಆ್ಯಂಟಿ ಬಯೋಟಿಕ್‌ ಔಷಧ ಅಗತ್ಯವಾಗಿರುತ್ತದೆ ಎನ್ನುತ್ತಾರೆ ವೈದ್ಯಾಧಿಕಾರಿಗಳು. ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಪ್ರತಿದಿನ ಸುಮಾರು 100ಕ್ಕೂ ಹೆಚ್ಚು ಮಂದಿ ವೈರಲ್‌ ಜ್ವರದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಆಗಮಿಸುತ್ತಾರೆ.

ಬಿಸಿ ನೀರು ಕುಡಿಯಿರಿ
ಸಾರ್ವಜನಿಕರು ಕುದಿಸಿ ಆರಿಸಿದ ಉಗುರು ಬೆಚ್ಚಗಿನ ನೀರನ್ನೇ ಕುಡಿಯಬೇಕು. ಜ್ವರ ಬಾಧಿಸಿದ ಯಾರೂ ಕೂಡ ತಣ್ಣೀರನ್ನು ಕುಡಿಯಲೇ ಬಾರದು. ಸ್ನಾನಕ್ಕೂ ಬಿಸಿನೀರನ್ನು ಉಪಯೋಗಿಸಬೇಕು. ತಲೆ ಮೇಲೆ ನೀರು ಹಾಕಿಕೊಂಡಾಗ ಶೀತ ಅಧಿಕವಾಗಿ ಜ್ವರ, ತಲೆನೋವು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ನಿತ್ರಾಣ ನಿಯಂತ್ರಿಸಲು ಸರಿಯಾದ ರೀತಿಯಲ್ಲಿ ಆಹಾರ ಸೇವಿಸಬೇಕು. ತಂಪು ಪಾನೀಯ ಸೇವಿಸಲೇ ಬಾರದು.

ಮೈಕೈ ನೋವು: ಹೆದರದಿರಿ
ವೈರಲ್‌ ಜ್ವರಕ್ಕೆ ಒಳಗಾದ ಮಂದಿಗೆ ಚಳಿ ಜ್ವರದೊಂದಿಗೆ ಮೈಕೈ ನೋವು ಸಾಮಾನ್ಯವಾಗಿ ಇರುತ್ತದೆ. ಆದರೆ ಇದನ್ನು ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳೆಂದು ತಿಳಿದು ಭಯ ಬೀಳುವ ಅಗತ್ಯವಿಲ್ಲ. ಆದಷ್ಟು ವಿಶ್ರಾಂತಿ ಮತ್ತು ನಿದ್ದೆಗೆ ಗಮನ ಕೊಡಿ.

ಇರಲಿ ಮುನ್ನೆಚ್ಚರಿಕೆ
ಸಾಮಾನ್ಯ ಜ್ವರವು ವೈರಲ್‌ ಫಿವರ್‌ ಆಗಿರುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಸುಲಭವಾಗಿ ಹರಡುತ್ತದೆ. ಜ್ವರ ಮತ್ತು ಶೀತ ಬಾಧಿತ ವ್ಯಕ್ತಿಗಳನ್ನು ಮುಟ್ಟಬಾರದು, ಕೈ ಕುಲುಕಬಾರದು. ರೋಗಿ ಬಳಸಿದ ಕರವಸ್ತ್ರವನ್ನು ಬಳಕೆ ಮಾಡಬಾರದು. ಅವರು ಮುಟ್ಟಿದ ವಸ್ತುಗಳನ್ನು ಮತ್ತೂಬ್ಬ ಮುಟ್ಟಿದ್ದಲ್ಲಿ ಸಾಬೂನಿನಿಂದ ಕೈ ತೊಳೆದುಕೊಳ್ಳಬೇಕು. ಕೆಮ್ಮುವಾಗ, ಸೀನುವಾಗ ಆದಷ್ಟು ಕರವಸ್ತ್ರವನ್ನು ಮುಚ್ಚಿಕೊಳ್ಳಬೇಕು.

ವೈರಲ್‌ ಫಿವರ್‌ ಕೊರೊನಾವಲ್ಲ
ಜಗತ್ತಿನಾದ್ಯಂತ ಹರಡಿರುವ ಕೊರೊನಾ ವೈರಸ್‌ನಿಂದ ಆತಂಕಕ್ಕೊಳಗಾದ ನಗರದ ಜನತೆ ವೈರಲ್‌ ಜ್ವರವನ್ನೂ ಕೊರೊನಾ ಎಂದು ಭಾವಿಸಿ ತಪಾಸಣೆಗೆ ತೆರಳುತ್ತಿರುವುದು ಹೆಚ್ಚುತ್ತಿದೆ. ಶಾಲೆಗಳಲ್ಲಿಯೂ ವೈರಲ್‌ ಜ್ವರ ಬಾಧಿತ ವಿದ್ಯಾರ್ಥಿಗಳನ್ನು ಕೊರೊನಾ ವೈರಸ್‌ ತಪಾಸಣೆ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿರುವುದು ಜಿಲ್ಲಾಡಳಿತ ಗಮನಕ್ಕೆ ಬಂದಿದ್ದು, ಈ ರೀತಿ ಮಾಡ ದಂತೆ ಡಿಸಿ ಸಿಂಧೂ ಬಿ. ರೂಪೇಶ್‌ ಸೂಚಿ ಸಿದ್ದಾರೆ. ವೈರಲ್‌ ಜ್ವರ ವಾತಾವರಣ ಬದಲಾವಣೆ ವೇಳೆ ಸಾಮಾನ್ಯವಾಗಿದ್ದು, ಅದನ್ನು ಕೊರೊನಾ ಎಂದು ತಿಳಿದು ಆತಂಕಿತರಾಗಬಾರದು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾಮಾನ್ಯ ಜ್ವರ
ಹವಾಮಾನದಲ್ಲಿ ಉಂಟಾದ ಬದಲಾವಣೆ ಕಾರಣದಿಂದಾಗಿ ಈ ಸಮಯದಲ್ಲಿ ಜ್ವರ, ಶೀತ, ತಲೆನೋವು ಸಾಮಾನ್ಯವಾಗಿರುತ್ತದೆ. ಇದರ ಬಗ್ಗೆ ಜನ ಭಯ ಪಡುವ ಅಗತ್ಯವಿಲ್ಲ. ಆದರೆ ಯಾವುದೇ ಜ್ವರವನ್ನು ನಿರ್ಲಕ್ಷಿಸದೆ ವೈದ್ಯರ ಬಳಿ ತೆರಳಿ ಔಷಧ ಪಡೆದು ಕೊಳ್ಳಬೇಕು.
 - ಡಾ| ರಾಜೇಶ್ವರಿ ದೇವಿ,ವೈದ್ಯಕೀಯ ಅಧೀಕ್ಷಕಿ, ವೆನ್ಲಾಕ್ ಸರಕಾರಿ ಆಸ್ಪತ್ರೆ, ಮಂಗಳೂರು

ಟಾಪ್ ನ್ಯೂಸ್

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.