ಹವಾಮಾನ ವೈಪರೀತ್ಯ: ಮಲೇರಿಯಾ, ಡೆಂಗ್ಯೂ ಭೀತಿ


Team Udayavani, Nov 25, 2021, 6:24 AM IST

ಹವಾಮಾನ ವೈಪರೀತ್ಯ: ಮಲೇರಿಯಾ, ಡೆಂಗ್ಯೂ ಭೀತಿ

ಮಂಗಳೂರು/ಉಡುಪಿ: ಹವಾಮಾನ ವೈಪರೀತ್ಯದಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆಗಾಗ್ಗೆ ಬಿಸಿಲು ಮತ್ತು ಮಳೆಯ ವಾತಾವರಣ ಇರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿವೆ.

ಕೊರೊನಾದಿಂದ ಜನರು ನಿಧಾನವಾಗಿ ಚೇತರಿಸುತ್ತಿದ್ದು, ಈಗ ಬಿಟ್ಟು ಬಿಟ್ಟು ಮಳೆ ಬರುವುದರಿಂದ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಆಗಿ ಮಲೇರಿಯಾ, ಡೆಂಗ್ಯೂ, ನೋರಾ ಮತ್ತು ಇತರ ವೈರಲ್‌ ಜ್ವರದ ಭೀತಿ ಇದೆ.

ಜಿಲ್ಲೆಯ ಗ್ರಾಮಾಂತರ ಭಾಗದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ ತಾ|ಗಳಲ್ಲಿ ಡೆಂಗ್ಯೂ ಜಾಸ್ತಿ ಇದ್ದರೆ, ಮಂಗಳೂರು ನಗರದಲ್ಲಿ ಮಲೇರಿಯಾ ಜಾಸ್ತಿ ಇದೆ.

2021ರಲ್ಲಿ ಜಿಲ್ಲೆಯಲ್ಲಿ ಕಳೆದ 10 ತಿಂಗಳಲ್ಲಿ (ಅಕ್ಟೋಬರ್‌ ಅಂತ್ಯಕ್ಕೆ) 665 ಮಲೇರಿಯಾ ಮತ್ತು 247 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

ಶೇ. 85 ಮಲೇರಿಯಾ ಪ್ರಕರಣಗಳು ಮಂಗಳೂರು ನಗರದಲ್ಲಿ ಹಾಗೂ ಶೇ. 85 ಡೆಂಗ್ಯೂ ಜ್ವರ ಗ್ರಾಮಾಂತರ ತಾಲೂಕುಗಳಲ್ಲಿ ಕಂಡು ಬರುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿ ಮೂಲಗಳು ತಿಳಿಸಿವೆ.

ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಲೇಯಾ ಪ್ರಮಾಣ ಶೇ. 30ರಷ್ಟು ಕಡಿಮೆ. ಡೆಂಗ್ಯೂ ಪ್ರಕರಣಗಳು ಕಳೆದ ವರ್ಷದಷ್ಟೇ ಇವೆ. ರಾಜ್ಯ ಮಟ್ಟದಲ್ಲಿ ಈ ವರ್ಷ ಡೆಂಗ್ಯೂ ಜಾಸ್ತಿ ಆಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ .

ಈ ವರ್ಷ ಡೆಂಗ್ಯೂ ಮಂಗಳೂರು ನಗರದಲ್ಲಿ 54, ಮಂಗಳೂರು ಗ್ರಾಮಾಂತರ 56, ಬಂಟ್ವಾಳ 58, ಪುತ್ತೂರು 32, ಸುಳ್ಯ 26, ಬೆಳ್ತಂಗಡಿ 20 ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ:ಸಿಂಹದೊಂದಿಗೆ ಕುಚೇಷ್ಟೆ ಮಾಡಲು ಹೋಗಿ ಪೇಚಿಗೆ ಸಿಲುಕಿದ ಯುವಕ-ವಿಡಿಯೋ ವೈರಲ್‌

ಕರ್ತವ್ಯ ನಿರತ ಸಿಬಂದಿ
ಜಿಲ್ಲೆಯಲ್ಲಿ ಕೇವಲ ಮಲೇರಿಯಾ ನಿಯಂತ್ರಣಕ್ಕಾಗಿ 46 ಮಂದಿ ಸಿಬಂದಿ ನಿಯೋಜಿಸಲಾಗಿದ್ದು, ಅವರಿಗೆ ಮಲೇ ರಿಯಾ ಹೊರತು ಪಡಿಸಿ ಬೇರೆ ಯಾವುದೇ ಕರ್ತವ್ಯದ ಹೊರೆ ವಹಿಸಲಾಗುತ್ತಿಲ್ಲ. 3 ವರ್ಷಗಳ ಹಿಂದೆ 30ರಷ್ಟಿದ್ದ ಸಿಬಂದಿ ಈಗ 46ಕ್ಕೇರಿದೆ. ಅವರ ಸತತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಲೇರಿಯಾ ಬಾಧಿತ ಪ್ರದೇಶಗಳಾದ ಬಂದರು, ಕುದ್ರೋಳಿ, ಕಸ್ಬಾ ಬೆಂಗ್ರೆ, ಮಣ್ಣಗುಡ್ಡೆ ಮುಂತಾದ ಕಡೆ ಈಗ ಈ ಕಾಯಿಲೆ ಬಹಳಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದೆ ಎನ್ನುತ್ತಾರೆ ದ.ಕ. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್‌.

ಉಡುಪಿ: ಡೆಂಗ್ಯೂ ಏರಿಕೆ
ಆಗಸ್ಟ್‌ನಿಂದ ಅಕ್ಟೋಬರ್‌ ತಿಂಗಳವರೆಗೆ ಮಲೇರಿಯಾ ಉಡುಪಿ ಜಿಲ್ಲೆಯಲ್ಲಿ ಇಳಿಕೆ ಕಂಡಿದ್ದರೂ ಡೆಂಗ್ಯೂ ಮಾತ್ರ ಏರುತ್ತಿದೆ. ಆಗಸ್ಟ್‌ ತಿಂಗಳಲ್ಲಿ ಮಲೇರಿಯಾ 6, ಸೆಪ್ಟಂಬರ್‌ನಲ್ಲಿ 2, ಅಕ್ಟೋಬರ್‌ನಲ್ಲಿ 3 ದಾಖಲಾಗಿದೆ.

ಡೆಂಗ್ಯೂ ಆಗಸ್ಟ್‌ ನಲ್ಲಿ 20, ಸೆಪ್ಟಂಬರ್‌ನಲ್ಲಿ 20, ಅಕ್ಟೋಬರ್‌ನಲ್ಲಿ ಇದುವರೆಗೆ 22 ಪ್ರಕರಣಗಳು ವರದಿಯಾಗಿವೆ. ಜಿಲ್ಲೆ ಯಾದ್ಯಂತ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಬಗ್ಗೆ ಸರ್ವೆ ಮಾಡಲಾಗುತ್ತಿದೆ. ಐಇಸಿ ಮೂಲಕ ಈಗಾಗಲೇ ಹಲವಾರು ಕಡೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ.

ಸಾಂಕ್ರಾಮಿಕ ಕಾಯಿಲೆಗಳ ವಿರುದ್ಧ ಆರೋಗ್ಯ ಇಲಾಖೆ ತನ್ನ ಕಾರ್ಯವನ್ನು ಮಾಡುತ್ತಿದೆ. ಆದರೆ ಮುಂದೆ ಇದು ಹೆಚ್ಚಳವಾಗದಂತೆ ನೋಡಿ ಕೊಳ್ಳುವುದು ಜನರ ಜವಾಬ್ದಾರಿ. ಸೊಳ್ಳೆಗಳ ನಿಯಂತ್ರಣದಲ್ಲಿ ಜನ ಸಹಕರಿಸಬೇಕು; ಮನೆ, ಕಟ್ಟಡಗಳ ಸುತ್ತ ನೀರು ನಿಲ್ಲದಂತೆ ನೋಡಿ ಕೊಳ್ಳಬೇಕು.
– ಡಾ| ನವೀನ್‌ ಚಂದ್ರ ಕುಲಾಲ್‌,
ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ, ದ.ಕ. ಜಿಲ್ಲೆ

ಉಡುಪಿ ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಸದ್ಯದ ಮಳೆಯಿಂದ ಸಾಂಕ್ರಾಮಿಕ ರೋಗ ಹರಡುವುದಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಸ್ಥಳದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ನಗರ, ಗ್ರಾಮೀಣ ಭಾಗದಲ್ಲಿ ಪ್ರತಿ ವಾರ್ಡ್‌ಗಳು, ಗ್ರಾ.ಪಂ.ವ್ಯಾಪ್ತಿಯಲ್ಲಿ ಕಾಲಕಾಲಕ್ಕೆ ಘನತ್ಯಾಜ್ಯ ವಿಲೇವಾರಿ ಮಾಡಿ ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡಬಾರದು.
-ಡಾ| ಪ್ರಶಾಂತ್‌ ಭಟ್‌,
ಜಿಲ್ಲಾ ಮಲೇರಿಯಾ ರೋಗ ನಿಯಂತ್ರಣಾಧಿಕಾರಿ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.