Surathkal ಕೊಟ್ಟಾರ ಚೌಕಿ ಸರ್ಕಲ್ಗೆ ಕ್ಯಾ| ಪ್ರಾಂಜಲ್ ಹೆಸರು ?
Team Udayavani, Nov 27, 2023, 12:06 AM IST
ಸುರತ್ಕಲ್: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಪ್ರಮುಖವಾದ ಕೊಟ್ಟಾರ ಚೌಕಿ ಜಂಕ್ಷನ್ ಸರ್ಕಲ್ ಗೆ ಹೆಸರು ಇಡಲಾಗುವುದು ಎಂದು ಶಾಸಕ ಡಾ| ಭರತ್ ಶೆಟ್ಟಿ ವೈ. ಹೇಳಿದ್ದಾರೆ.
ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜತೆಗೆ ಸರ್ಕಲ್ಗೆ ಮಂಗಳೂರಿನಲ್ಲಿ ಕಲಿತು, ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ| ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೈನ್ಯ ಸೇರಿ ದೇಶ ಸೇವೆ ಮಾಡುವ ಕ್ಯಾ| ಪ್ರಾಂಜಲ್ ಅವರ ನಿರ್ಧಾರ, ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ. ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿದಾಯಕ್ಕೆ ಜನಸಾಗರ
ಕುಟುಂಬದಿಂದ ಕೃತಜ್ಞತೆ
ಸುರತ್ಕಲ್: ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಕ್ಯಾ|ಪ್ರಾಂಜಲ್ ಅವರು ಹುತಾತ್ಮರಾಗಿದ್ದು, ಅವರ ಭಾವಪೂರ್ಣ ವಿದಾಯದ ವೇಳೆ ಭಾರೀ ಜನಸ್ತೋಮ ಸೇರಿ ಪ್ರೀತಿ ಅಭಿಮಾನ, ಗೌರವ ತೋರಿದ್ದು, ಮನತುಂಬಿ ಬಂದಿದೆ. ಪ್ರಾಂಜಲ್ ಕುಟುಂಬವು ಪ್ರತೀ ಭಾರತೀಯರಿಗೂ ಆಭಾರಿಯಾಗಿದೆ ಪ್ರಾಂಜಲ್ ಅವರ ತಂದೆ ಎಂ. ವೆಂಕಟೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ