ಮುಚ್ಚಿ ಹೋಗಿದೆ ಚರಂಡಿ; ಕೃತಕ ನೆರೆ ಸಂಭವ

ಮಳೆಗಾಲದ ಪೂರ್ವ ತಯಾರಿ: ಮುನ್ನೆಚ್ಚರಿಕೆ ವಹಿಸದ ಲೋಕೋಪಯೋಗಿ ಇಲಾಖೆ

Team Udayavani, May 21, 2019, 10:40 AM IST

sud-6

ಈಶ್ವರಮಂಗಲ : ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು, ಈಶ್ವರಮಂಗಲ ಪೇಟೆಯಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆಯ ಇಕ್ಕೆಲಗಳ ಚರಂಡಿಯಲ್ಲಿ ಹೂಳು ತುಂಬಿ ಕೃತಕ ನೆರೆಯ ಭೀತಿ ಕಾಡುತ್ತಿದೆ. ಮಳೆಗಾಲದ ಪೂರ್ವ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಿಡಬ್ಲ್ಯೂಡಿ ಕೈಗೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಪೇಟೆಯಲ್ಲಿ ಕೃತಕ ನೆರೆಯ ಭೀತಿ ಕಾಡುತ್ತಿದೆ. ಕಳೆದ ಬಾರಿ ಮುಂಗಾರು ಮಳೆಯ ಸಂದರ್ಭ ಪೇಟೆಯಲ್ಲಿ ಕೃತಕ ನೆರೆಯಿಂದ ಸಾರ್ವಜನಿಕರ ಸಹಿತ ವಾಹನ ಸವಾರರು ಹಲವು ರೀತಿಯ ತೊಂದರೆ ಎದುರಿಸಿದ್ದರು. ಇದಾಗಿ ಒಂದು ವರ್ಷ ಉರುಳಿ ಹೋದರೂ ಇಲಾಖೆ ಸ್ಪಂದಿಸಿಲ್ಲ. ತುರ್ತು ಕಾಮಗಾರಿ ನಡೆಸಲು ಅವಕಾಶಗಳು ಇದ್ದರೂ ಅಧಿಕಾರಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ.

ಪೇಟೆಯ ಮುತುವರ್ಜಿ

ಸ್ಥಳೀಯ ಗ್ರಾ.ಪಂ. ಕಳೆದ ಹಲವು ವರ್ಷಗಳಿಂದ ಪೇಟೆ ಭಾಗದಲ್ಲಿ ಚರಂಡಿ ದುರಸ್ತಿ ಕಾರ್ಯ ನಡೆಸುತ್ತಿದೆ. ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಕೃತಕ ನೆರೆ ಉಂಟಾದ ಸಂದರ್ಭ ತಾತ್ಕಾಲಿಕ ದುರಸ್ತಿ ಕಾರ್ಯ ನಡೆಸಿದೆ. ಇಲಾಖೆ ಮಾಡಬೇಕಾಗುವ ಕೆಲಸವನ್ನು ಪಂಚಾಯತ್‌ ಮಾಡುತ್ತಿದೆ.

ಬದಲಾಗುತ್ತಿರುವ ಅಧಿಕಾರಿಗಳು

ಇಲಾಖೆಯ ಅಧಿಕಾರಿಗಳು ಬದಲಾಗುತ್ತಿರುವುದರಿಂದ ಪೇಟೆಯ ಸಮಸ್ಯೆಗಳು ಹಾಗೆಯೇ ಉಳಿದು ಕೊಂಡಿವೆೆ. ಕಳೆದ ವರ್ಷ ನೆಟ್ಟಣಿಗೆ ಮುಟ್ನೂರು ಗ್ರಾ.ಪಂ. ವ್ಯಾಪ್ತಿಗೆ ಇದ್ದ ಪಿಡಬ್ಲ್ಯೂಡಿ ಅಧಿಕಾರಿ ವರ್ಗಾವಣೆ ಗೊಂಡಿದ್ದಾರೆ. ಬೇರೆ ಅಧಿಕಾರಿಗಳು ಈ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಮಳೆ ಗಾಲದಲ್ಲಿ ಈ ಸಮಸ್ಯೆ ಅವರ ಗಮನಕ್ಕೆ ಬರುತ್ತದೆ. ಮುಂದಿನ ವರ್ಷ ಮಳೆಗಾಲದ ಒಳಗಡೆ ವರ್ಗಾವಣೆಗೊಳ್ಳುತ್ತಾರೆ.ಹೀಗೆ ಅಧಿಕಾರಿಗಳು ವರ್ಗಾವಣೆಗೊಳ್ಳುತ್ತಾ ಇರುವುದರಿಂದ ಪೇಟೆ ಸಮಸ್ಯೆ ಹೀಗೆ ಉಳಿದುಕೊಂಡಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

ಜನಪ್ರತಿನಿಧಿಗಳು ಸ್ಪಂದಿಸಲಿ

ಈಶ್ವರಮಂಗಲ ಪೇಟೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಮಳೆಗಾಲ ಸದ್ಯದಲ್ಲೇ ಆರಂಭವಾಗಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಚರಂಡಿ ಹೂಳು ತೆಗೆಯುವ ಕೆಲಸವಾಗಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು ಎಂದು ಈಶ್ವರಮಂಗಲ ನವಚೇತನ ಮಿತ್ರ ವೃಂದದ ಅಧ್ಯಕ್ಷ ಪ್ರಶಾಂತ್‌ ನಾಯರ್‌ ಕುಂಟಾಪು ಅವರು ಹೇಳಿದರು.

ಬೆಳೆಯುತ್ತಿರುವ ಪೇಟೆಯಲ್ಲಿ ನೆಟ್ಟಣಿಗೆಮುಟ್ನೂರು ಗ್ರಾ.ಪಂ. ಕಸ ವಿಲೇವಾರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದೇ ಇರುವುದರಿಂದ ಪೇಟೆಯ ಸುತ್ತಮುತ್ತದ ಚರಂಡಿಗಳಲ್ಲಿ ಕಸಕಡ್ಡಿಗಳು ತುಂಬಿ ಹೋಗಿವೆ.

ಕಳೆದ ಮಳೆಗಾಲದಲ್ಲಿ ಈಶ್ವರಮಂಗಲ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿಯ ಮೋರಿಯಲ್ಲಿ ಹೂಳು ತುಂಬಿ ಕೃತಕ ನೆರೆ ಉಂಟಾಗಿತ್ತು. ಇದನ್ನು ಇನ್ನೂ ದುರಸ್ತಿ ಮಾಡಿಲ್ಲ.

ಚರಂಡಿಯಲ್ಲಿ ಕಸಕಡ್ಡಿಗಳು
ಅನುದಾನ ಬಂದೊಡನೆ ಕಾಮಗಾರಿ ಪೇಟೆಯಲ್ಲಿ ಹೊಸ ಮೋರಿ ಮತ್ತು ಚರಂಡಿ ದುರಸ್ತಿಗೆ ಕಳೆದ ಬಾರಿ 20 ಲಕ್ಷ ರೂ. ಕ್ರಿಯಾಯೋಜನೆಯನ್ನು ಸರಕಾರಕ್ಕೆ ಕಳಿಸಲಾಗಿತ್ತು. ಅನುದಾನ ಬಂದಿಲ್ಲ. ಅನುದಾನ ಬಂದ ತತ್‌ಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು. ಕೃತಕ ನೆರೆ ಸಂಭವಿಸಿದಲ್ಲಿ ಇಲಾಖೆ ವತಿಯಿಂದ ತಾತ್ಕಾಲಿಕ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.
– ಸಿಕ್ವೇರಾ, ಕಿರಿಯ ಎಂಜಿನಿಯರ್‌, ಪಿಬ್ಲ್ಯೂಡಿ, ಪುತ್ತೂರು
ಚರಂಡಿ ದುರಸ್ತಿ ಕಾರ್ಯ

ಪೇಟೆ ನಮ್ಮ ಪಂಚಾಯತ್‌ ವ್ಯಾಪ್ತಿಗೆ ಬರುವುದರಿಂದ ಪಿಡಬ್ಲ್ಯೂಡಿ ಇಲಾಖೆ ಮಾಡಬೇಕಾಗುವ ಕೆಲಸ ನಾವು ಮಾಡುತ್ತಿದ್ದೇವೆ. ಸಾವಿರಾರು ರೂಪಾಯಿ ಖರ್ಚು ಮಾಡುತ್ತಿದ್ದೇವೆ. ಮೇ 30ರ ಒಳಗಡೆ ಚರಂಡಿ ಕಾರ್ಯ ನಡೆಸುತ್ತೇವೆ.
– ಎಚ್.ಟಿ. ಸುನೀಲ್, ಪಿಡಿಒ, ನೆಟ್ಟಣಿಗೆಮುಟ್ನೂರು ಗ್ರಾ.ಪಂ.
ಈಶ್ವರಮಂಗಲ: ಪೇಟೆಯಲ್ಲಿ ರಸ್ತೆಗಳ ಬದಿಯಲ್ಲಿ ಚರಂಡಿಗೆ ಸ್ಲ್ಯಾಬ್‌ ಅಳವಡಿಸಿಲ್ಲ, ಕಲ್ಲುಗಳು ಅಸ್ತವ್ಯಸ್ತವಾಗಿ ಬಿದ್ದಿವೆ. ಪೇಟೆಯ ಚರಂಡಿಗಳಲ್ಲಿ ಕಸಕಡ್ಡಿಗಳು ತುಂಬಿದ್ದು, ಮಳೆನೀರು ಹರಿಯಲು ಕಷ್ಟವಾಗಲಿದೆ.
ಬೆಳೆಯುತ್ತಿರುವ ಪೇಟೆಯಲ್ಲಿ ನೆಟ್ಟಣಿಗೆಮುಟ್ನೂರು ಗ್ರಾ.ಪಂ. ಕಸ ವಿಲೇವಾರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದೇ ಇರುವುದರಿಂದ ಪೇಟೆಯ ಸುತ್ತಮುತ್ತದ ಚರಂಡಿಗಳಲ್ಲಿ ಕಸಕಡ್ಡಿಗಳು ತುಂಬಿ ಹೋಗಿವೆ. ಕಳೆದ ಮಳೆಗಾಲದಲ್ಲಿ ಈಶ್ವರಮಂಗಲ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿಯ ಮೋರಿಯಲ್ಲಿ ಹೂಳು ತುಂಬಿ ಕೃತಕ ನೆರೆ ಉಂಟಾಗಿತ್ತು. ಇದನ್ನು ಇನ್ನೂ ದುರಸ್ತಿ ಮಾಡಿಲ್ಲ.
•ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.