ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ


Team Udayavani, Nov 19, 2022, 11:59 AM IST

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ

ಮಂಗಳೂರು : ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಸಿರು ಯೋಜನೆ
ಉತ್ಪಾದನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ತಯಾರಿ ನಡೆಸಲಾಗಿದೆ. ಈಗಾಗಲೇ ಮೂರು ನವೀಕರಿಸಬಹುದಾದ ಇಂಧನ ಕಂಪೆನಿಗಳೊಂದಿಗೆ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಯಲ್ಲಿ ಅನುಮೋದನೆ ನೀಡಲಾಗಿದೆ. ಬಹಳ ವೇಗದಲ್ಲಿ ಕೆಲಸಗಳಾಗುತ್ತಿದ್ದು, ಮಾರ್ಚ್ ಏಪ್ರಿಲ್ ವೇಳೆಗೆ ಕೆಲಸ ಪ್ರಾರಂಭ ಮಾಡುವುದಾಗಿ 2-3 ಕಂಪನಿಗಳು ಹೇಳಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರಾವಳಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಖ್ಯ ಪಾತ್ರ ವಹಿಸಿದೆ. ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಬರಲಿದ್ದು, ಗಲ್ಫ್ ದೇಶದಲ್ಲಿ ಮತ್ತು ಮಂಗಳೂರಿನಲ್ಲಿ ತಲೆ ಎತ್ತಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಕಡಲ ನೀರಿನಿಂದ ಅಮೋನಿಯಾ ತಯಾರು ಮಾಡುವ ಪ್ರಮುಖ ಘಟ್ಟ ಬರಲಿದೆ. ನವೀಕರಿಸಬಹುದಾದ ಇಂಧನ ಘಟಕ್ಕೆ ಅಗತ್ಯ ವಿರುವ ಇಂಧವನ್ನೂ ನವೀಕರಿಸಬಹುದಾದ ಇಂಧನ ಮೂಲಗಳಾದ ಸೋಲಾರ್, ವಿಂಡ್ ಮಿಲ್ ಗಳಿಂದಲೇ ಪಡೆಯಲಾಗುವುದು. ಸಂಪೂರ್ಣವಾಗಿ ಹಸಿರು ಯೋಜನೆಯಾಗಲಿದೆ ಎಂದರು.

ಉದ್ಯೋಗ ಸೃಜನೆ
ನೇರ ಹಾಗೂ ಪರೋಕ್ಷವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಜನೆಯಾಗಿ ಈ ಭಾಗದ ಯುವಕರಿಗೆ ಅವಕಾಶಗಳ ಬಾಗಿಲು ತೆರೆಯಲಿದೆ ಎಂದರು.

ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿ ನಿರಂತರವಾಗಿ ಮಳೆ ಬಂದಿದ್ದರಿಂದ ತಡವಾಗಿದೆ. ಮುಂದಿನ ವಾರ ದೆಹಲಿಗೆ ತೆರಳಲಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಬೇಕಿದೆ. ಈ ವಾರದಲ್ಲಿ ಅದಕ್ಕೆ ಪೂರಕವಾಗಿ ಇಡೀ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಸಭೆ ಕರೆಯಲಾಗುವುದು. ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ ಕೆಲಸಗಳಾದ ಸುರಂಗ ಮಾರ್ಗ, ವೈಟ್ ಟಾಪಿಂಗ್ ಮುಂತಾದ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಅಲ್ಪಾವಧಿ ಕಾಮಗಾರಿಯಲ್ಲಿ ರಸ್ತೆಯಲನ್ನು ಬಳಕೆಗೆ ಯೋಗ್ಯವಾಗಿಸುವುದು ಹಾಗೂ ದೀರ್ಘಾವಧಿ ಕಾಮಗಾರಿ ಗಳಲ್ಲಿ ಸುರಂಗ ಮಾರ್ಗ ನಿರ್ಮಾಣ ಕೈಗೊಳ್ಳಲಾಗುವುದು ಎಂದರು.

ಮತದಾರರ ಪರಿಷ್ಕರಣೆ
ಮತದಾರರ ಪರಿಷ್ಕರಣೆ ಪ್ರತಿ ವರ್ಷ ಹಾಗೂ ಚುನಾವಣೆ ಸಂದರ್ಭದಲ್ಲಿ ಮಾಡಲಾಗುತ್ತದೆ. ಚುನಾವಣಾ ಆಯೋಗದ ನಿರಂತರ ಪ್ರಕ್ರಿಯೆಯಾಗಿದೆ ಎಂದರು.

ತೀವ್ರಗತಿಯಲ್ಲಿ ಪೊಲೀಸ್ ತನಿಖೆ

ವಿರೋಧ ಪಕ್ಷದವರು ನ್ಯಾಯಮೂರ್ತಿಗಳಿಂದ ತನಿಖೆಗೆ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಎಲ್ಲದ್ದಕ್ಕೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಬಿಡಿಎ ವಿಚಾರದಲ್ಲಿ ನ್ಯಾಯಾಂಗ ತನಿಖೆಯಾದಾಗ ಅದರಿಂದ ಪಾರಾಗಲು ಅನುಕೂಲವಾಯಿತು. ಶೀಘ್ರವಾಗಿ ಅಪರಾಧದ ವಿರುದ್ಧ ಪೊಲೀಸ್ ಕೆಲಸ ಮಾಡುತ್ತದೆ. ಈಗಾಗಲೇ ಬಂಧವವೂ ಆಗಿದೆ. ತೀವ್ರಗತಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

Shashi Taroor

ವಿಪಕ್ಷ ಮೈತ್ರಿಕೂಟದ ಸಂಚಾಲಕರಾಗಲು ಸಣ್ಣ ಪಕ್ಷವನ್ನು ಪ್ರೋತ್ಸಾಹಿಸುತ್ತೇನೆ: ತರೂರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

police siren

ನ್ಯಾಯವಾದಿ,ಅವರ ಗರ್ಭಿಣಿ ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ

missing

ಔಷಧ ಅಂಗಡಿಗೆಂದು ಹೋದ ವಿವಾಹಿತೆ ನಾಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ