ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ: ಕರಾವಳಿಯಲ್ಲಿ ಗರಿಗೆದರಿದೆ ಕುತೂಹಲ!‌


Team Udayavani, Jul 29, 2021, 8:00 AM IST

ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ: ಕರಾವಳಿಯಲ್ಲಿ ಗರಿಗೆದರಿದೆ ಕುತೂಹಲ!‌

ಮಂಗಳೂರು/ಉಡುಪಿ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕರಾವಳಿಯ ಬಿಜೆಪಿ ಪಾಳಯದಲ್ಲಿಯೂ ಸಚಿವ ಸ್ಥಾನ ಯಾರ ಪಾಲಿಗೆ ಒಲಿಯಬಹುದು ಎನ್ನುವ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿದ್ದು, ಆಕಾಂಕ್ಷಿ ಗಳಲ್ಲೂ ನಿರೀಕ್ಷೆ ಗರಿಗೆದರಿದೆ.

ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಅವಧಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ತಲಾ ಒಂದು ಸ್ಥಾನ ದೊರಕಿತ್ತು. ಈ ಪೈಕಿ ಕೋಟ ಶ್ರೀನಿವಾಸ ಪೂಜಾರಿ ಅವರು ಆರಂಭದಲ್ಲೇ ಸಚಿವರಾಗಿದ್ದರೆ, ಸುಳ್ಯ ಶಾಸಕ ಎಸ್‌. ಅಂಗಾರ ಸಂಪುಟಕ್ಕೆ ಸೇರಿ 7 ತಿಂಗಳಾಗಿವೆ.  ಆದರೆ ಈಗ ಹೊಸ ಸಂಪುಟದಲ್ಲಿ ಇವರು ಮುಂದು ವರಿಯುವರೇ? ಅಥವಾ ಹೊಸಬರಿಗೆ ಅವಕಾಶವಿದೆಯೇ? ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ.

ಬಿಜೆಪಿ ಮೂಲಗಳ ಪ್ರಕಾರ ಕೆಲವೇ ತಿಂಗಳ ಹಿಂದೆ ಸಚಿವ ಸ್ಥಾನ ಪಡೆದ ಹಾಗೂ ದ.ಕ. ಜಿಲ್ಲೆಯ ಹಿರಿಯ ಶಾಸಕ ಎಸ್‌. ಅಂಗಾರ ಅವರು ಸಂಪುಟದಲ್ಲಿ ಮುಂದುವರಿ ಯುವುದು ಬಹುತೇಕ ಖಚಿತ‌. ಆದರೆ ಕೋಟ ಶ್ರೀನಿವಾಸ ಪೂಜಾರಿ ಅವರ ಬದಲಾವಣೆ ಬಗ್ಗೆ ಸುದ್ದಿ ಇದ್ದರೂ ನ್ನೂ ಖಚಿತವಾಗಿಲ್ಲ.

ಯಾರು ಆದಾರು ಮಂತ್ರಿ?:

ಉಡುಪಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್‌ ಸದಸ್ಯರು ಅರ್ಹರಿದ್ದಾರೆ. ಯಡಿ ಯೂರಪ್ಪ ಅವಧಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಚಿವರಾದರು. ಹಿಂದಿನ ಮಂತ್ರಿಗಳಿಗೆ ಮತ್ತೆ ಅವಕಾಶ ದೊರಕಿದರೆ ಪೂಜಾರಿ ಅವರು ಮುಂದುವರಿಯಲೂ ಬಹುದು. ವಿಧಾನಸಭೆ ಸದಸ್ಯರಿಗೇ ಅವಕಾಶ ನೀಡುವುದಾದರೆ  ಐವರೊಳಗೆ ಒಬ್ಬರಿಗೆ ಸಿಗಬಹುದು. ಬಿಲ್ಲವ ಕೋಟಾದಡಿ ಚುನಾಯಿತರಿಗೆ ಅವಕಾಶ ಕಲ್ಪಿಸುವುದಾದರೆ ಸುನಿಲ್‌ ಕುಮಾರ್‌ಗೆ ಅವಕಾಶ ಸಿಗಬಹುದು. ಆದರೆ ಶಿವಮೊಗ್ಗ ಮತ್ತಿತರ ಪ್ರದೇಶದ ಈಡಿಗ ಸಮುದಾಯದ ಶಾಸಕರಿಗೆ ಸಚಿವ ಹುದ್ದೆ ಸಿಗುವುದಾದರೆ  ಸುನಿಲ್‌ ಆವರಿಗೆ ಅವಕಾಶ ತಪ್ಪಬಹುದು. ಆಗ ಅತಿ ಹೆಚ್ಚು ಬಾರಿ ಕುಂದಾಪುರದಿಂದ ಶಾಸಕರಾದ  ಹಾಲಾಡಿ ಶ್ರೀನಿವಾಸ ಶೆಟ್ಟಿ ಸಚಿವರಾಗಬಹುದು. ಉಡುಪಿ ವಿಧಾನಸಭಾ ಕ್ಷೇತ್ರದ ರಘುಪತಿ ಭಟ್‌ ಮತ್ತು ಲಾಲಾಜಿ ಮೆಂಡನ್‌ ಸಹ ಅರ್ಹರ ಪಟ್ಟಿಯಲ್ಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕೋಟ ಶ್ರೀನಿವಾಸ ಪೂಜಾರಿ ಅವರನ್ನೇ ಉಳಿಸಿಕೊಂಡರೆ, ಉಡುಪಿ ಜಿಲ್ಲೆಯಲ್ಲಿ ಬಿಲ್ಲವ ಅಥವಾ ಬಂಟ ಸಮುದಾಯಕ್ಕೆ ಅವಕಾಶ ಸಿಗಲೂ ಬಹುದು.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಉತ್ತಮ ಆಡಳಿತ ನೀಡಬೇಕೆಂಬ ಹೊಣೆಗಾರಿಕೆ ಇದೆ. ಇದರೊಂದಿಗೆ ಬೊಮ್ಮಾಯಿ ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಶಾಸಕರಲ್ಲಿ ಯಾರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಹೆಚ್ಚು ಜನಪರ ಕೆಲಸಗಳನ್ನು ಮಾಡಲು ಸಾಧ್ಯ ಎಂಬುದು ತಿಳಿದಿದ್ದು,  ಯೋಚಿಸಿ ನಿರ್ಧರಿಸುವ ಸಾಧ್ಯತೆ ಹೆಚ್ಚಿದೆ.

ಬೊಮ್ಮಾಯಿ ಅವರು ಮತ್ತು  ಹೈಕಮಾಂಡ್‌ ಇಬ್ಬರೂ ಸೇರಿ ಸಚಿವ ಸಂಪುಟವನ್ನು ನಿರ್ಧರಿಸುವ ಸಾಧ್ಯತೆಯೇ ಹೆಚ್ಚು. ಹಾಗಾಗಿ ಕರಾವಳಿಯಿಂದ ಯಾರಿಗೆ ಅವಕಾಶ ಸಿಗುತ್ತದೆ ಎಂಬ ಸಂಗತಿ ಕುತೂಹಲ ಮೂಡಿಸಿದೆ.  ಈ ಮಧ್ಯೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ನೇಮಕವಾದ ವಿವಿಧ ನಿಗಮ -ಮಂಡಳಿಗಳ ಲ್ಲಿರುವ ಕರಾವಳಿ ನಾಯಕರ ಹುದ್ದೆ ಬದಲಾವಣೆ ಆಗಲಿ ದೆಯೇ ಎಂಬ ಬಗ್ಗೆಯೂ ಚರ್ಚೆ ಆರಂಭವಾಗಿದೆ.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.