ಸಿ.ಎಂ. ಭೇಟಿ ಹಿನ್ನೆಲೆ, ಜಿಲ್ಲಾಧಿಕಾರಿ ಪರಿಶೀಲನೆ
Team Udayavani, Dec 31, 2017, 10:10 AM IST
ಮೂಡಬಿದಿರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.7ರಂದು ಮೂಡಬಿದಿರೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ
ಧಿಕಾರಿ ಸಸಿಕಾಂತ್ ಸೆಂಥಿಲ್ ಎಸ್. ಅವರು ಶನಿವಾರ ಅಪರಾಹ್ನ ಮೂಡಬಿದಿರೆಗೆ ಆಗಮಿಸಿ ಸ್ಥಳ ಪರಿಶೀಲನೆಗೈದು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಹೆಲಿಪ್ಯಾಡ್ ರಚಿಸಲಾಗಿರುವ ಮಹಾವೀರ ಕಾಲೇಜು ಕ್ರೀಡಾಂಗಣ, ನೂತನ ಮೆಸ್ಕಾಂ ಕಚೇರಿ ಆವರಣಕ್ಕೆ ತೆರಳಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಫಲಾನುಭವಿಗಳು, ಅಗತ್ಯವಿರುವ ಶಾಲಾ ಮಕ್ಕಳು ಹೀಗೆ ವಿವಿಧ ಯೋಜನೆಗಳಿಗೆ ಸಂಬಂಧಿಸಿದವರು ಕಾರ್ಯಕ್ರಮದಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಮೂರು ದಿನಗಳ ಬಳಿಕ ಮತ್ತೂಮ್ಮೆ ಆಗಮಿಸಿ ಅಂತಿಮ ಹಂತದ ಪರಿಶೀಲನೆಯನ್ನು ನಡೆಸುವುದಾಗಿ ಸೂಚಿಸಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಮೂಡಬಿದಿರೆಯಲ್ಲಿ
ಸ್ಥಳ ಪರಿಶೀಲನೆ ಮಾಡಿದ್ದು , ಸಿದ್ಧತೆಗಳು ಉತ್ತಮವಾಗಿವೆ. ಮೂಡಬಿದಿರೆ ದ.ಕ. ಜಿಲ್ಲೆಯ ಹೆಮ್ಮೆಯ ಪಾರಂಪರಿಕ ತಾಣವಾಗಿದ್ದು, ಈ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಸಾಕಷ್ಟು ಅವಕಾಶಗಳಿವೆ. ಒಂದಷ್ಟು ಸಮಸ್ಯೆಗಳೂ ಇವೆ. ತಾಲೂಕು ಕೇಂದ್ರವಾಗುತ್ತಿರುವ ಕಾರಣಕ್ಕಾಗಿ ಮೂಲ ಸೌಕರ್ಯಗಳನ್ನು ತ್ವರಿತವಾಗಿ ಒದಗಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕುಮಾರ್, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್, ಸಹಾಯಕ ಕಮಿಷನರ್ ರೇಣುಕಾ ಪ್ರಸಾದ್, ಯೋಜನಾ ನಿರ್ದೇಶಕ ಪ್ರಸನ್ನ ಕುಮಾರ್, ತಹಶೀಲ್ದಾರ್ ಮಹಮ್ಮದ್ ಇಸಾಕ್ ಮತ್ತಿತರರು ಉಪಸ್ಥಿತರಿದ್ದರು.
ಅಧಿಕಾರಿಗಳಿಗೆ ಸೂಚನೆ
ಮುಖ್ಯಮಂತ್ರಿ ಮೂಡಬಿದಿರೆಗೆ ಆಗಮಿಸುತ್ತಿರುವುದ ರಿಂದ ಬೆಳಕು, ವೇದಿಕೆ, ಆಸನಗಳು, ಕುಡಿ ಯುವ ನೀರಿನ ವ್ಯವಸ್ಥೆಯಲ್ಲಿ ಗೊಂದಲಗಳಾಗದಂತೆ ಸೂಕ್ತ ಮುನ್ನೆ ಚ್ಚರಿಕೆ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ