ಕೃಷಿ ಬದುಕು ಮೇಳೈಸಿದ ಸಹಕಾರ ಜಾಥಾ
Team Udayavani, Nov 16, 2017, 9:44 AM IST
ಕೊಡಿಯಾಲ್ಬೈಲ್: ಗ್ರಾಮ್ಯ ಕೃಷಿ ಬದುಕು, ಹೊಲಗದ್ದೆಗಳ ಚಿತ್ರಣ, ಸಾಂಪ್ರದಾಯಿಕ- ಪಾರಂಪರಿಕ ಕುಲಕಸುಬು, ಬುಟ್ಟಿ ಹೆಣೆಯುವುದರ ಪ್ರದರ್ಶನ, ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಪರಿಕಲ್ಪನೆ…
ಇವೆಲ್ಲ ಕಂಡುಬಂದದ್ದು ನೆಹರೂ ಮೈದಾನದಲ್ಲಿ ಬುಧವಾರ ಜರಗಿದ 64ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆಗೂ ಮುನ್ನ ಜರಗಿದ ಸಮುದಾಯದತ್ತ ಸಹಕಾರ ಜಾಥಾದ ಸ್ತಬ್ಧಚಿತ್ರಗಳ ರೂಪದಲ್ಲಿ. ಕೊಡಿಯಾಲ್ಬೈಲ್ನ ಎಸ್ಸಿಡಿಸಿಸಿ ಬ್ಯಾಂಕ್ ಆವರಣದಿಂದ ನೆಹರೂ ಮೈದಾನದವರೆಗೆ ಜಾಥಾ ನಡೆದಿದ್ದು, ಜಿಲ್ಲೆಯ ವಿವಿಧ ಸಹಕಾರ ಸಂಘಗಳು ಜಾಥಾದಲ್ಲಿ ಪಾಲ್ಗೊಂಡವು.
ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಪ್ರತಿಮೆಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಎಸ್ಸಿಡಿಸಿಸಿ ಬ್ಯಾಂಕಿನ ವಿವಿಧ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿತ್ತು. ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದಿಂದ ನಂದಿನಿ ಉತ್ಪನ್ನಗಳ ಬಗ್ಗೆ ಪ್ರಾತ್ಯಕ್ಷಿಕೆ, ದ.ಕ. ಮತ್ತು ಉಡುಪಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಡಕೆ, ಭತ್ತ ಕೃಷಿ ಸಾರುವ ಮತ್ತು ಹೊಲಗದ್ದೆಗಳಲ್ಲಿ ಉಳುಮೆ ಮಾಡುವ ಸ್ತಬ್ಧಚಿತ್ರಗಳು ಆಕರ್ಷಕವಾಗಿದ್ದವು. ದ.ಕ., ಉಡುಪಿ ಸಹಕಾರಿ ಮೀನು ಮಾರಾಟ ಫೆಡರೇಶನ್ನವರ ಸಾಂಪ್ರದಾಯಿಕ ಮೀನುಗಾರಿಕೆ ಚಿತ್ರಣ ನೀಡುವ ದೋಣಿ ಮತ್ತು ಬಲೆ ಬೀಸಿ ಮೀನು ಹಿಡಿಯುವ ಸ್ತಬ್ಧಚಿತ್ರವೂ ಮೆರವಣಿಗೆಗೆ ಕಳೆಯೇರಿಸಿತ್ತು.
ಆಕರ್ಷಕ ಗೊಂಬೆ ಕುಣಿತ ಸುಮಾರು ನಾಲ್ಕಕ್ಕೂ ಹೆಚ್ಚು ತಂಡಗಳಿಂದ ಆಕರ್ಷಕ ಶೈಲಿಯ ಚೆಂಡೆವಾದನ ಗಮನ ಸೆಳೆಯಿತು. ಕಲ್ಲಡ್ಕ ಗೊಂಬೆಗಳ ಪ್ರದರ್ಶನವೂ ಕಳೆಗಟ್ಟಿತ್ತು. ಜಾಥಾದಲ್ಲಿ ಸುಮಾರು 1,000ಕ್ಕೂ ಹೆಚ್ಚು ಮಂದಿ ನವೋದಯ ಸಂಘದ ಸದಸ್ಯೆಯರು ಮತ್ತಿತರರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ