ಕರಾವಳಿಯಲ್ಲಿ ತಗ್ಗಿದ ಮಳೆಯ ಬಿರುಸು: ಕುಕ್ಕೆ: ಸ್ನಾನ ಘಟ್ಟ ಭಾಗಶಃ ಮುಳುಗಡೆ


Team Udayavani, Jul 3, 2022, 12:24 AM IST

ಕರಾವಳಿಯಲ್ಲಿ ತಗ್ಗಿದ ಮಳೆಯ ಬಿರುಸು: ಕುಕ್ಕೆ: ಸ್ನಾನ ಘಟ್ಟ ಭಾಗಶಃ ಮುಳುಗಡೆ

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಬಿರುಸು ಪಡೆದಿದ್ದ ಮಳೆಯ ಅಬ್ಬರ ಕಡಿಮೆಯಾಗಿದೆ. ದ.ಕ., ಉಡುಪಿ ಜಿಲ್ಲೆಯಾದ್ಯಂತ ಶನಿವಾರ ಬೆಳಗ್ಗಿನಿಂದ ಬಿಟ್ಟು ಬಿಟ್ಟು ಮಳೆಯಾಗಿದೆ.
ಮಂಗಳೂರು ನಗರ ಸೇರಿದಂತೆ ವಿವಿಧೆಡೆ ಬೆಳಗ್ಗಿನಿಂದ ಸಂಜೆಯವರೆಗೆ ಸಾಧಾರಣ ಮಳೆಯಾಗಿದೆ. ಸಂಜೆ ಬಳಿಕ ಮಳೆಯ ಬಿರುಸು ತುಸು ಹೆಚ್ಚಿತ್ತು. ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಕಾರ್ಕಳ, ಕಾಪು, ಹೆಬ್ರಿ, ಬ್ರಹ್ಮಾವರ, ಅಜೆಕಾರು ಭಾಗದಲ್ಲಿ ಮಳೆ ಸುರಿದಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿದ್ದ ಮಳೆಯ ಪರಿಣಾಮ ಗರಿಷ್ಠ ಉಷ್ಣಾಂಶ ಕಡಿಮೆಯಾಗಿದೆ. ಮಂಗಳೂರಿನಲ್ಲಿ 28.9 ಡಿ.ಸೆ. ಗರಿಷ್ಠ ಮತ್ತು 23.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

ಎಲ್ಲೋ ಅಲರ್ಟ್‌
ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಜು. 3ರಿಂದ 6ರ ವರೆಗೆ ಎಲ್ಲೋ ಅಲರ್ಟ್‌ ಘೊಷಿಸಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಕೂಡ ಹೆಚ್ಚಿರುವ ಸಾಧ್ಯತೆ ಇದೆ.

ಕುಕ್ಕೆ: ಸ್ನಾನ ಘಟ್ಟ ಭಾಗಶಃ ಮುಳುಗಡೆ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಭಾಗಶಃ ಜಲಾವೃತಗೊಂಡಿದೆ.
ಕುಕ್ಕೆ ಸುಬ್ರಹ್ಮಣ್ಯ ಸಮೀಪ ಕುಮಾರಧಾರೆಯಲ್ಲಿ ಶನಿವಾರ ನೀರು ಭಾರೀ ಪ್ರಮಾಣದಲ್ಲಿ ಬಂದು ಕಿಂಡಿ ಅಣೆಕಟ್ಟು, ಸ್ನಾನಘಟ್ಟ ಮುಳುಗಡೆಯಾಗಿದೆ. ದೇವರ ಕಟ್ಟೆ ವರೆಗೆ ನೀರು ಆವರಿಸಿದ್ದು, ಭಕ್ತರು ದಡದಲ್ಲಿ ನಿಂತು ತೀರ್ಥ ಸ್ನಾನ ನೆರವೇರಿಸಿದರು. ಸ್ಥಳದಲ್ಲಿ ಸೂಕ್ತ ರೀತಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಸುಬ್ರಹ್ಮಣ್ಯ, ಐನೆಕಿದು, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಳ್ಪ, ಪಂಜ, ಬಿಳಿನೆಲೆ, ಕಮಿಲ ವ್ಯಾಪ್ತಿಯಲ್ಲೂ ಶನಿವಾರ ಮಳೆ ಮುಂದಿವರಿದಿದೆ.

ಕಲ್ಲಪಳ್ಳಿ: ರಸ್ತೆಗೆ ಕುಸಿದ ಬರೆ
ಅರಂತೋಡು: ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆ ಯಲ್ಲಿ ಮತ್ತೆ ಕೆಲವೆಡೆ ಬರೆ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.

ಸುಳ್ಯ-ಪಾಣತ್ತೂರು ರಸ್ತೆ ಯಲ್ಲಿ ಗಡಿ ಪ್ರದೇಶ ಕೇರಳದ ಭಾಗದ ಕಲ್ಲಪಳ್ಳಿ ಸಮೀಪದ ಬಾಟೋಳಿಯ ಹಲವು ಕಡೆಗಳಲ್ಲಿ ಭೂ ಕುಸಿತ ಆಗಿ ಮಣ್ಣು, ಕಲ್ಲು ರಸ್ತೆಯ ಮೇಲೆ ಬಿದ್ದಿತ್ತು. ಜನಪ್ರತಿನಿಧಿಗಳು ಮತ್ತು ಸ್ಥಳೀಯ ಯುವಕರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಅರ್ಧಕ್ಕೆ ನಿಂತಿದೆ. ಇದರಿಂದ ಮಳೆಗಾಲ ಪ್ರಾರಂಭ ವಾದಾಗ ಪದೇಪದೆ ಗುಡ್ಡ ಕುಸಿದು ಸಮಸ್ಯೆಯಾಗುತ್ತಿದೆ. ಎರಡು ದಿನಗಳ ಹಿಂದೆ ಇಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿತ್ತು.

ಉಳ್ಳಾಲ: 3 ದಿನಗಳಲ್ಲಿ 66 ಮನೆಗಳಿಗೆ ಹಾನಿ
ಉಳ್ಳಾಲ ಗಾಳಿ-ಮಳೆಯಿಂದಾಗಿ ಕಳೆದ ಮೂರು ದಿನಗಳಲ್ಲಿ ಉಳ್ಳಾಲ ತಾಲೂಕಿನಲ್ಲಿ ಸುಮಾರು 66 ಮನೆಗಳಿಗೆ ಹಾನಿಯಾಗಿದೆ.

ಕಡಲ್ಕೊರೆತ ಸೇರಿದಂತೆ ಗುಡ್ಡ ಕುಸಿತದಿಂದ ಸುಮಾರು 50ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. 60 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.

ಉಳ್ಳಾಲ ತಾಲೂಕು ರಚನೆಯಾದ ಬಳಿಕ ಅಕಾಲಿಕ ಮಳೆ ಮತ್ತು ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಯಿಂದ 8 ಮನೆಗಳು ತೀವ್ರ ಹಾನಿಯಾಗಿದ್ದು, ಸುಮಾರು 26 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ತಾಲೂಕಿನಾದ್ಯಂತ 58 ಮನೆಗಳು ಭಾಗಶಃ ಹಾನಿಗೀಡಾಗಿ 24.9 ಲಕ್ಷ ನಷ್ಟ ಅಂದಾಜಿಸಲಾಗಿದೆ.
ಉಳ್ಳಾಲ ಸೀಗ್ರೌಂಡ್‌ ಮತ್ತು ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತದಿಂದ 30ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿದ್ದರೆ, ಗುಡ್ಡ ಕುಸಿತದಿಂದ 20ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ.

ಬೀಚ್‌ ರಸ್ತೆ ಕುಸಿದು ಎರಡು ವರುಷ
ಬಟ್ಟಪ್ಪಾಡಿಯಿಂದ ಉಚ್ಚಿಲ ಎಂಡ್‌ ಪಾಯಿಂಟ್‌ ಸಂಪರ್ಕಿಸುವ ಬೀಚ್‌ ರಸ್ತೆ ಕುಸಿತಗೊಂಡು ಈ ಮಳೆಗಾಲಕ್ಕೆ ಎರಡು ವರ್ಷವಾದರೂ ಜಿಲ್ಲಾಡಳಿತವಾಗಲಿ ಸಂಬಂಧಿತ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಶಾಶ್ವತ ಕಾಮಗಾರಿ ಸಂದರ್ಭ ಉಚ್ಚಿಲ ಎಂಡ್‌ ಪಾಯಿಂಟ್‌ವೆರೆಗೆ ಕಾಮಗಾರಿ ನಡೆಸದೆ ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತಕ್ಕೆ ಕಾರಣವಾಗಿದ್ದು, ಸುಮಾರು 15ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. ಕೆಲವು ಮನೆಗಳಿಗೆ ಸಂಪರ್ಕ ರಸ್ತೆ ಇಲ್ಲದಂತಾಗಿದೆ. ಉಳ್ಳಾಲ ಸೀಗ್ರೌಂಡ್‌ನ‌ಲ್ಲಿ 500 ಮೀಟರ್‌ ಕಾಮಗಾರಿ ಬಾಕಿ ಉಳಿದಿದ್ದು, 15ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ.

ಕೊಡಗಿನಲ್ಲಿ ಧಾರಾಕಾರ ಮಳೆ; ವಿವಿಧೆಡೆ ಹಾನಿ
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆೆಯಾಗುತ್ತಿದ್ದು, ಅಲ್ಲಲ್ಲಿ ಕುಸಿದ ಬರೆ, ಧರೆಗುರುಳಿದ ಮರಗಳಿಂದ ಸಂಚಾರಕ್ಕೆ ತೊಡಕಾಗಿದೆ. ಜೀವನದಿ ಕಾವೇರಿಯ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ.

ಕಾವೇರಿಯ ಕ್ಷೇತ್ರ ಭಾಗಮಂಡಲ ಮತ್ತು ತಲಕಾವೇರಿ ವಿಭಾಗದಲ್ಲಿ ಒಂದು ದಿನದ ಅವಧಿಯಲ್ಲಿ ಸರಾಸರಿ ನಾಲ್ಕು ಇಂಚಿಗೂ ಹೆಚ್ಚಿನ ಮಳೆಯಾಗಿದ್ದು, ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲೂ ಎಡೆಬಿಡದೆ ಮಳೆಯಾಗುತ್ತಿದೆ.
ಭಾಗಮಂಡಲದಿಂದ ಕರಿಕೆಗೆ ತೆರಳುವ ರಸ್ತೆಯಲ್ಲಿ ಅಲ್ಪ ಪ್ರಮಾಣದ ಬರೆ ಕುಸಿತವಾಗಿದ್ದು, ಸ್ವಲ್ಪಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಮಡಿಕೇರಿಯಿಂದ ಭಾಗಮಂಡಲಕ್ಕೆ ತೆರಳುವ ಮುಖ್ಯ ರಸ್ತೆಯ ಬೆಟ್ಟಗೇರಿ ಬಕ್ಕ ಗ್ರಾಮದಲ್ಲಿ ರಸ್ತೆಗಡ್ಡಲಾಗಿ ಭಾರೀ ಗಾತ್ರದ ಮರವುರುಳಿ ಸಂಚಾರಕ್ಕೆ ತೊಡಕುಂಟಾಗಿದೆ.

ಮಡಿಕೇರಿ-ಮಂಗಳೂರು ರಸ್ತೆಯ ಜೋಡು ಪಾಲದ ಬಳಿ ಮುಖ್ಯ ರಸ್ತೆಯ ಮೇಲೆ ಬರೆ ಕುಸಿದು ವಾಹನ ಸಂಚಾರಕ್ಕೆ ತೊಡಕುಂಟಾಯಿತು.

ಕರಿಕೆ: 6 ಮನೆಗಳಿಗೆ ಹಾನಿ
ಗಡಿ ಭಾಗವಾದ ಕರಿಕೆ ಗ್ರಾ.ಪಂ. ವ್ಯಾಪ್ತಿಯ ವಾರ್ಡ್‌ ಸಂಖ್ಯೆ 3 ಮತ್ತು 4ರಲ್ಲಿ ಭಾರೀ ಪ್ರಮಾಣದ ಬರೆ ಕುಸಿತವಾಗಿದೆ. 6 ಮನೆಗಳಿಗೆ ಹಾನಿಯಾಗಿದೆ. ಇದೇ ಭಾಗದಲ್ಲಿ ಭಾರೀ ಮಳೆೆಯಿಂದ ಎರಡು ಬಂಡೆಗಲ್ಲುಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ಇವುಗಳು ಕೆಳಕ್ಕೆ ಜಾರಿದಲ್ಲಿ ಮತ್ತಷ್ಟು ಹಾನಿ ಸಂಭವಿಸುವ ಅಪಾಯವಿರುವುದಾಗಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಕ‌ರಿಕೆ ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ ಬಿದ್ದಿದ್ದು, ವಿದ್ಯುತ್‌ ಸರಬರಾಜು ಕಡಿತಗೊಂಡಿದೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.