ಹೊಸದಿಲ್ಲಿ ರಿಪಬ್ಲಿಕ್‌ ಪೆರೇಡ್‌ನ‌ಲ್ಲಿ ಕರಾವಳಿ ಕಲಾವಿದರ ಕೈಚಳಕ


Team Udayavani, Jan 26, 2019, 5:14 AM IST

26-january-32.jpg

ಮಹಾನಗರ : ಈ ಬಾರಿಯ ಗಣರಾಜ್ಯೋತ್ಸವದಂದು ಹೊಸದಿಲ್ಲಿಯ ರಾಜ್‌ಪಥ್‌ ಪೆರೇಡ್‌ನ‌ಲ್ಲಿ ‘ಮಹಾತ್ಮ ಗಾಂಧೀಜಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನ’ದ ಕರ್ನಾಟಕ ರಾಜ್ಯದ ಸ್ತಬ್ಧಚಿತ್ರ ಸಾಗಲಿದ್ದು, ಇದರ ನಿರ್ಮಾಣದ ಹಿಂದೆ ಕರಾವಳಿ ಕಲಾವಿದರ ಕೈಚಳಕವಿದೆ.

ದ.ಕ. ಜಿಲ್ಲೆಯ ಮುಚ್ಚಾರು ಮೂಲದ ಅಂತಾರಾಷ್ಟ್ರೀಯ ಕಲಾವಿನ್ಯಾಸಕ ಶಶಿಧರ ಅಡಪ ಮತ್ತು ತಂಡದವರು ಈ ಸ್ತಬ್ಧಚಿತ್ರ ನಿರ್ಮಾಣ ಮಾಡಿದ್ದು, ಈ ತಂಡದಲ್ಲಿ ಸುಳ್ಯ ಮೂಲದ ವಿನೋದ್‌ ಎಂಬ ಕಲಾವಿದ ಸಹಿತ 50 ಮಂದಿ ಕೈ ಜೋಡಿಸಿದ್ದಾರೆ. ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆಯನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಎಲ್ಲ ರಾಜ್ಯಗಳು ಗಾಂಧೀಜಿ ಅವರ ಜೀವನಾಧಾರಿತ ಸ್ತಬ್ಧಚಿತ್ರದ ಪರಿಕಲ್ಪನೆ ಮಾಡುವಂತೆ ಕೇಂದ್ರ ಸರಕಾರ ಸೂಚಿಸಿತ್ತು.

ಪ್ರತಿ ವರ್ಷವು ಸ್ತಬ್ಧಚಿತ್ರ ನಿರ್ಮಾಣಕ್ಕೆ ಸಂಬಂಧಿತ ಮೂರು ಪರಿಕಲ್ಪನೆಯನ್ನು ಆಯಾ ರಾಜ್ಯಗಳಿಂದ ಕೇಂದ್ರಕ್ಕೆ ನೀಡಬೇಕು. ಆದರೆ ಈ ಬಾರಿ ಕೇಂದ್ರವೇ ಸೂಚಿಸಿತ್ತು. ಜ. 7ರಿಂದ ಸ್ತಬ್ಧಚಿತ್ರದ ಕಾರ್ಯದಲ್ಲಿ ಶಶಿಧರ ಅವರ ತಂಡ ತೊಡಗಿದೆ. 1924ರ ಮಹಾತ್ಮ ಗಾಂಧೀಜಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದಲ್ಲಿ ಏನೆಲ್ಲಾ ನಡೆಯಿತು? ಯಾರೆಲ್ಲ ಭಾಗವಹಿಸಿದ್ದರು ಎಂಬ ನಿಖರ ಮಾಹಿತಿಯನ್ನು ಸಂಗ್ರಹಿಸಿ, ಆ ವೇಳೆಯ ಫೋಟೋಗಳನ್ನು ಗಮನಿಸಿ ಸ್ತಬ್ಧಚಿತ್ರಕ್ಕೆ ಮತ್ತಷ್ಟು ಮೆರುಗು ನೀಡಿದ್ದಾರೆ. ಶಶಿಧರ ಅವರ ಒಂದು ತಂಡ ಹೊಸದಿಲ್ಲಿಯಲ್ಲಿ ಸ್ತಬ್ಧಚಿತ್ರ ಮಾಡುತ್ತಿದ್ದರೆ, ಮತ್ತೂಂದು ತಂಡ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿತ್ತು.

ಸ್ತಬ್ಧಚಿತ್ರದಲ್ಲೇನಿದೆ?
ಮಹಾತ್ಮ ಗಾಂಧೀಜಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಸ್ತಬ್ಧಚಿತ್ರದಲ್ಲಿ ಸ್ವಾತಂತ್ರ್ಯ ಪರ ಹೋರಾಟದಲ್ಲಿ ದೇಸಿ ಪ್ರತಿಮೆಗಳನ್ನು ಬಳಕೆ ಮಾಡಲಾಗಿದೆ. ಅಧಿವೇಶನ ನಡೆದ ಜಾಗವನ್ನು ‘ವಿಜಯನಗರ’ ಎಂದು ಹೆಸರಿಡಲಾಗಿದೆ. ಪ್ರವೇಶ ದ್ವಾರದಲ್ಲಿ ಹಂಪಿ ವಿರೂಪಾಕ್ಷ ಗೋಪುರದ ಮಹಾದ್ವಾರವಿದ್ದು, ಸುತ್ತಮುತ್ತಲು ಜನಸಾಮಾನ್ಯರು ಓಡಾಡುತ್ತಿದ್ದಾರೆ. ಅಧಿವೇಶಕ್ಕೆ ಆಗಮಿಸಿದವರು ತಂಗಲು ಕುಟೀರಗಳನ್ನು ನಿರ್ಮಿಸಲಾಗಿದೆ. ಪಕ್ಕದಲ್ಲಿಯೇ ರೈಲು ನಿಲ್ದಾಣವಿದೆ. ಕುಡಿಯು ನೀರಿಗಾಗಿ ಪಂಪಾಸಾಗರವಿದೆ. ಅಧಿವೇಶನದಲ್ಲಿ ಗಾಂಧೀಜಿ ಭಾಷಣ ಮಾಡುವ ವೇದಿಕೆ ಇದ್ದು, ಅವರ ಹಿಂದೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್‌, ಬಸವೇಶ್ವರ, ವಿದ್ಯಾರಣ್ಯ, ಬಾಲ ಗಂಗಾಧರ ತಿಲಕರ ಫೋಟೋ ಇಡಲಾಗಿದೆ. 1921ರಲ್ಲಿ ಧ್ವಜವಂದನೆ ಮಾಡುತ್ತಿರುವ ಚಿತ್ರ ಬಿಂಬಿಸಲಾಗಿದ್ದು, ಅಂದಿನ ಕೆಂಪು, ಹಸಿರು, ಬಿಳಿ ಬಣ್ಣ ಧ್ವಜವಿದೆ. ಪಕ್ಕದಲ್ಲಿಯೇ ಸ್ವಾತಂತ್ರ್ಯ ಹೋರಾಟಗಾರ ಗಂಗಾಧರ ದೇಶಪಾಂಡೆ ಅವರು ಚರಕ ತಿರುಗಿಸುತ್ತಿದ್ದಾರೆ.

ಅಡಪರ ಚಿತ್ರಕ್ಕೆ ನಾಲ್ಕು ಬಾರಿ ಪ್ರಶಸ್ತಿ
ಗಣರಾಜ್ಯೋತ್ಸವ ಪೆರೇಡ್‌ನ‌ಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಶಶಿಧರ ಅಡಪ ಅವರು 12 ವರ್ಷಗಳಿಂದ ಸ್ತಬ್ಧಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸಿದ್ಧಪಡಿಸಿದ ಸ್ತಬ್ದಚಿತ್ರಗಳ ಪೈಕಿ ಇಲ್ಲಿಯವೆರೆಗ 4 ಬಾರಿ ಪ್ರಶಸ್ತಿ ಸಂದಿದೆ. 2008 ಸಾಲಿನ ಹೊಯ್ಸಳ ವಾಸ್ತುಶಿಲ್ಪ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ, 2011 ಸಾಲಿನ ಬಿದರಿ ಕಲೆ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ, 2012 ಸಾಲಿನ ಭೂತಾರಾಧನೆ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ, 2015ನೇ ಸಾಲಿನ ಚೆನ್ನಪಟ್ಟಣದ ಆಟಿಕೆಗಳು ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ಲಭಿಸಿತ್ತು.

ಬಹುಮಾನದ ನಿರೀಕ್ಷೆ
ಗಣರಾಜ್ಯೋತ್ಸವ ಪೆರೇಡ್‌ನ‌ಲ್ಲಿ ಕರ್ನಾಟಕ ರಾಜ್ಯಕ್ಕೆ ಸ್ತಬ್ಧಚಿತ್ರ ನಿರ್ಮಿಸಿದ್ದು, ಗೌರವದ ಕೆಲಸ. ನಮ್ಮ ರಾಜ್ಯದ ಸ್ತಬ್ಧಚಿತ್ರವು ಈ ಬಾರಿಯೂ ಬಹುಮಾನಗಳಿಸುತ್ತದೆ ಎಂಬ ನಿರೀಕ್ಷೆ ಇದೆ.
 – ಶಶಿಧರ ಅಡಪ,
ಕಲಾವಿನ್ಯಾಸಕ

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.