ಕರಾವಳಿಯ ಬ್ಯಾಂಕ್‌ ವಿಲೀನ; ಪೂರ್ಣ ಅನುಷ್ಠಾನಕ್ಕೆ ಬೇಕಿದೆ ವರ್ಷ!


Team Udayavani, Sep 23, 2019, 5:34 AM IST

CANRAR

ಮಂಗಳೂರು: ಕರಾವಳಿಯ ಹೆಮ್ಮೆಯ ಸಿಂಡಿಕೇಟ್‌ ಮತ್ತು ಕಾರ್ಪೊರೇಶನ್‌ ಬ್ಯಾಂಕ್‌ಗಳು ಕೆನರಾ ಮತ್ತು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಜತೆ ವಿಲೀನವಾಗುವ ಘೋಷಣೆ ಆಗಿದ್ದರೂ ಈ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಸುಮಾರು ಒಂದು ವರ್ಷ ಬೇಕಾಗಿದೆ.

ವಿಲೀನ ಘೋಷಣೆಯ ಬಳಿಕ ಈ ಬ್ಯಾಂಕ್‌ಗಳ ನಿರ್ದೇಶಕರ ಮಂಡಳಿಯ ಸಭೆ ನಡೆದಿದ್ದು, ವಿಲೀನ ನಿರ್ಣಯ ಕೈಗೆತ್ತಿಕೊಳ್ಳಲಾಗಿದೆ. ಅದರ ಪ್ರತಿಯನ್ನು ಸೆಬಿ ಮೂಲಕ ಆರ್‌ಬಿಐಗೆ ಸಲ್ಲಿಸುವ ಪ್ರಕ್ರಿಯೆ ಸದ್ಯ ನಡೆಯುತ್ತಿದೆ. ಬಳಿಕ ಇದು ಅಧಿಸೂಚನೆ ಆಗಲಿದೆ. ಈ ಆರ್ಥಿಕ ವರ್ಷ ಮುಗಿಯುವ ಮಾ. 31ರೊಳಗೆ ಇತರ ಪ್ರಕ್ರಿಯೆ ಪೂರ್ಣಗೊಳಿಸಿ ಎ. 1ರಿಂದ ಅಧಿಕೃತವಾಗಿ ಬ್ಯಾಂಕ್‌ ವಿಲೀನ ಪ್ರಕ್ರಿಯೆ ಆರಂಭವಾಗಲಿದೆ.

ಬ್ಯಾಂಕ್‌ಗಳ ವಾರ್ಷಿಕ ವಿತ್ತೀಯ ಫಲಿತಾಂಶ ಪರಿಶೀಲಿಸಿದ ಬಳಿಕವೇ ವಿಲೀನೀಕರಣದ ಅಧಿಕೃತ ಕಾರ್ಯ ಆರಂಭವಾಗಲಿವೆ. ಬ್ಯಾಂಕ್‌ಗಳು ಭಿನ್ನ ಮಾದರಿಯ ಸಾಫ್ಟ್‌ವೇರ್‌ ವ್ಯವಸ್ಥೆ ಹೊಂದಿರುವುದರಿಂದ ಅವುಗಳನ್ನು ವಿಲೀನವಾಗುವ ಬ್ಯಾಂಕ್‌ನ ಸಾಫ್ಟ್‌ವೇರ್‌ಗೆ ಅಪ್‌ಡೇಟ್‌ ಮಾಡಬೇಕಾಗುತ್ತದೆ. ಸಾಲ, ಉಳಿತಾಯ ಯೋಜನೆಗಳ ಹೊಂದಾಣಿಕೆ, ಸಾಲದ ಬಡ್ಡಿ ಮತ್ತಿತರ ಕೆಲವು ವಿಚಾರಗಳನ್ನೂ ಪರಿಹರಿಸಬೇಕಿದೆ. ಎಚ್‌ಆರ್‌ಎಂಎಸ್‌ ಸೇರಿದಂತೆ ಬ್ಯಾಂಕ್‌ಗಳ ದಾಖಲೆಗಳನ್ನು ವಿಲೀನ ಮಾಡುವ ಹಂತದಲ್ಲಿ ಅತ್ಯಂತ ಎಚ್ಚಕ ವಹಿಸುವುದು ಅಗತ್ಯ. ಇವೆಲ್ಲ ಸಮಯಾವಕಾಶ ಬೇಡುವ ಪ್ರಕ್ರಿಯೆಗಳು.

ಜತೆಗೆ, ವಿಲೀನವಾಗುತ್ತಿರುವ ಬ್ಯಾಂಕ್‌ಗಳ ಶಾಖೆಗಳ ಸಂಖ್ಯೆ ಕಡಿತ; ಹೆಸರು ಕೂಡ ಬದಲಾವಣೆ ಆಗುವ ಸಾಧ್ಯತೆಯಿದೆ. ಪಾಸ್‌ಪುಸ್ತಕ ಸೇರಿದಂತೆ ಎಲ್ಲ ಹಂತಗಳಲ್ಲಿಯೂ ಬದಲಾವಣೆಯಾಗಲಿದೆ. ಸಿಬಂದಿ ವರ್ಗವೂ ನಡೆಯಬಹುದು.

ಕಾರ್ಪ್‌ ಬ್ಯಾಂಕ್‌; ಕೇಂದ್ರ ಕಚೇರಿಯ ಭವಿಷ್ಯವೇನು?
ಕಾರ್ಪೊರೇಶನ್‌ ಬ್ಯಾಂಕ್‌ ಕೇಂದ್ರ ಕಚೇರಿಯು ಮಂಗಳೂರಿನ ಪಾಂಡೇಶ್ವರದಲ್ಲಿದ್ದು, ಅದರ ಭವಿಷ್ಯ ಏನು ಎಂಬ ಪ್ರಶ್ನೆ ಎದುರಾಗಿದೆ. ಈ ಹಿಂದೆ ಈ ಕೇಂದ್ರ ಕಚೇರಿಯನ್ನು ಮುಂಬಯಿ ಅಥವಾ ಬೆಂಗಳೂರಿಗೆ ಸ್ಥಳಾಂತರ ಮಾಡುವ ಬಗ್ಗೆ 3 ಬಾರಿ ಪ್ರಯತ್ನ ನಡೆದಿತ್ತು. ಆದರೆ ಸ್ಥಳೀಯರು, ಹೋರಾಟಗಾರರು ಮತ್ತು ಜನಪ್ರತಿನಿಧಿ ಗಳ ಕಾರಣದಿಂದ ಈ ನಿರ್ಧಾರ ಕೈ ಬಿಡ ಲಾಗಿತ್ತು. ಆದರೆ ಈಗ ಕಾರ್ಪ್‌ ಬ್ಯಾಂಕ್‌ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಲಿದ್ದು, ಕೇಂದ್ರ ಕಚೇರಿಯ ಭವಿಷ್ಯವೂ ಅತಂತ್ರವಾಗಿದೆ.

ವಿಜಯ ಬ್ಯಾಂಕ್‌ ವಿಲೀನ ಚಾಲ್ತಿಯಲ್ಲಿ
ಬ್ಯಾಂಕ್‌ ಆಫ್ ಬರೋಡಾದೊಂದಿಗೆ ವಿಜಯ ಬ್ಯಾಂಕ್‌ ವಿಲೀನ ಘೋಷಣೆ ಈ ಹಿಂದೆಯೇ ಆಗಿದ್ದರೂ ಪೂರ್ಣ ಅನುಷ್ಠಾನ ಆಗಿಲ್ಲ. ಯಾವುದೇ ಶಾಖೆ ಮುಚ್ಚಿರುವ ಮಾಹಿತಿಯಿಲ್ಲ. ಬರೋಡಾ ಬ್ಯಾಂಕ್‌ ಆಗಿ ಬದಲಾದ ಬಳಿಕ ಸಿಬಂದಿಗೆ ಬರೋಡಾ, ಮುಂಬಯಿ, ಬೆಂಗಳೂರುಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಬೋರ್ಡ್‌ಗಳಲ್ಲಿ ವಿಜಯ ಬ್ಯಾಂಕ್‌ ಲಾಂಛನ ಇನ್ನೂ ಇದೆ. ವಿಜಯ ಬ್ಯಾಂಕ್‌ ಫ‌ಲಕದ ಕೆಳಗೆ “ನೌ ಬ್ಯಾಂಕ್‌ ಆಫ್ ಬರೋಡಾ’ ಎಂಬ ಚಿಕ್ಕ ಅಕ್ಷರದ ಒಕ್ಕಣೆ ಮಾತ್ರ ಸೇರಿಕೊಂಡಿದೆ. ಇದು ಎಷ್ಟು ಸಮಯದವರೆಗೆ ಇರಲಿದೆ ಎಂಬುದಕ್ಕೆ ಉತ್ತರ ಯಾರಲ್ಲೂ ಇಲ್ಲ.

ಅಧಿಕಾರಿಗಳಿಗೆ ಮಾಹಿತಿ ಇಲ್ಲ;
ಜನಪ್ರತಿನಿಧಿಗಳು ಮೌನ!
ಬ್ಯಾಂಕ್‌ ವಿಲೀನ ಘೋಷಣೆಯಾದ ಬಳಿಕ ಆಗುವ ಯಾವುದೇ ಬೆಳವಣಿಗೆಗಳ ಬಗ್ಗೆ ಜಿಲ್ಲೆಯ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಮಾತ್ರವಲ್ಲದೇ ಕರಾವಳಿಯ ಜನಪ್ರತಿನಿಧಿಗಳು ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದಿರುವುದೂ ಕುತೂಹಲ ತರಿಸಿದೆ.

ಈ ಮಧ್ಯೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಕರಾವಳಿಯ ಎರಡು ಅಸ್ಮಿತೆಯಾಗಿರುವ ಕಾರ್ಪೊರೇಶನ್‌ ಹಾಗೂ ಸಿಂಡಿಕೇಟ್‌ ಬ್ಯಾಂಕ್‌ಗಳನ್ನು ಬೇರೆ ಬ್ಯಾಂಕ್‌ಗಳ ಜತೆಗೆ ವಿಲೀನಗೊಳಿಸದಿರಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಕೇಂದ್ರ ಸರಕಾರವು ಯಾವ ರೀತಿ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.