ಕಡಲ ಸಂಪನ್ಮೂಲ ಅನ್ವೇಷಣೆಗೆ ಕರಾವಳಿಯಲ್ಲಿ ಕೇಂದ್ರ

ತಿಂಗಳ ಒಳಗೆ ಕಾರ್ಯಾರಂಭ ನಿರೀಕ್ಷೆ ; ಸ್ಟಾರ್ಟ್‌ ಅಪ್‌ ಸ್ಥಾಪನೆಗೆ ಉತ್ತೇಜನ

Team Udayavani, Dec 13, 2022, 7:00 AM IST

ಕಡಲ ಸಂಪನ್ಮೂಲ ಅನ್ವೇಷಣೆಗೆ ಕರಾವಳಿಯಲ್ಲಿ ಕೇಂದ್ರ

ಮಂಗಳೂರು: ಕರಾವಳಿಯನ್ನು ನೀಲಿ ಆರ್ಥಿಕತೆ (ಬ್ಲೂ ಎಕಾನಮಿ) ಮಾಡುವ ಸಂಕಲ್ಪದ ಬಗ್ಗೆ ಪ್ರಧಾನಿ ಮೋದಿ ಘೋಷಿಸಿದ ಕೆಲವೇ ತಿಂಗಳ ಅಂತರದಲ್ಲಿ ಈಗ ಕಡಲ ಜೈವಿಕ ಸಂಪನ್ಮೂಲ ಕೇಂದ್ರ ಸ್ಥಾಪನೆಗೆ ಮಂಗಳೂರಿನ ಮೀನುಗಾರಿಕೆ ಕಾಲೇಜು ಮುಂದಡಿ ಇರಿಸಿದೆ.

ಕಡಲಾಳದಲ್ಲಿನ ಮೀನು ಮತ್ತು ಸಾಗರ ಸಸ್ಯಗಳ ಜೈವಿಕ ಸಂಯುಕ್ತಗಳಿಂದ ಹೊಸ ಆಹಾರ ಉತ್ಪನ್ನ ತಯಾರಿಸಲು ಸಾಧ್ಯವೇ ಎಂದು ಸಂಶೋಧನೆ ಕೈಗೊಳ್ಳಲು ಕಾಲೇಜು ನಿರ್ಧರಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಒಂದು ತಿಂಗಳ ಒಳಗೆ ಈ ಕೇಂದ್ರ ಕಾರ್ಯರೂಪಕ್ಕೆ ಬರಲಿದೆ. ವಿದೇಶಗಳಲ್ಲಿ ಕಡಲಿನ ಜೈವಿಕ ಅಂಶಗಳನ್ನು ಸಂಶೋಧಿಸಿ ಹೊಸ ಉತ್ಪನ್ನ ತಯಾರಿಸಲಾಗುತ್ತಿದೆ. ಅಲ್ಲಿ ಔಷಧ ಮತ್ತಿತರ ಕ್ಷೇತ್ರಗಳಲ್ಲಿ ಸಮುದ್ರ ಉತ್ಪನ್ನಗಳ ಪಾಲು ಗಮನಾರ್ಹವಾಗಿದೆ. ಆದರೆ ಭಾರತದಲ್ಲಿ ಸಂಶೋಧನೆ ಅಷ್ಟಾಗಿ ನಡೆದಿಲ್ಲ.

ನವೋದ್ಯಮಕ್ಕೆ ಉತ್ತೇಜನ ನೀಡುವ ರಾಜ್ಯ ಸರಕಾರದ ಕರ್ನಾಟಕ ಇನ್ನೋವೇಶನ್‌ ಆ್ಯಂಡ್‌ ಟೆಕ್ನಾಲಜಿ ಸೊಸೈಟಿ (ಕಿಟ್ಸ್‌) ಮೂಲಕ ದೊರೆಯುವ 6 ಕೋ.ರೂ. ಅನುದಾನದಲ್ಲಿ ಕೇಂದ್ರವನ್ನು ಆರಂಭಿಸಲಾಗುತ್ತದೆ. ಕೇಂದ್ರ ಸರಕಾರದ ಭೂವಿಜ್ಞಾನ ಸಚಿವಾಲಯ ಈ ಹಿಂದೆ ಪ್ರಕಟಿಸಿದ ಬ್ಲೂ ಎಕಾನಮಿ ನೀತಿಯಲ್ಲಿ ಪ್ರಸ್ತಾವವಾಗಿರುವ “ಮರೈನ್‌ ಬಯೋಟೆಕ್‌ ಕೇಂದ್ರ’ದ ಮಾದರಿಯಲ್ಲಿ ಈ ಕೇಂದ್ರ ನಿರ್ಮಾಣವಾಗಬೇಕಿದೆ.

ಕೇಂದ್ರದಲ್ಲಿ ಏನಿರಲಿದೆ?
4,200 ಚದರಡಿ ವಿಸ್ತೀರ್ಣದ ಇನ್‌ಕುಬೇಶನ್‌ ಸೆಂಟರ್‌ನಲ್ಲಿ ಪ್ರಯೋಗಾಲಯ, ತರಬೇತಿ ಕೇಂದ್ರ ಮತ್ತು ಕಚೇರಿ ಇರಲಿದೆ. 3 ವರ್ಷಗಳಲ್ಲಿ 100 ಸ್ಟಾರ್ಟ್‌ಅಪ್‌ಗ್ಳು ತಲೆಯೆತ್ತಲಿವೆ. ಸ್ಟಾರ್ಟ್‌ ಅಪ್‌ಗ್ಳಿಗೆ ಸಹಾಯಧನವೂ ಸಿಗಲಿದೆ.

ಕೊಚ್ಚಿಯ ಕೇಂದ್ರೀಯ ಮೀನುಗಾರಿಕೆ ತಂತ್ರಜ್ಞಾನ ಸಂಸ್ಥೆ ಸಹಿತ ಹಲವು ಸಂಸ್ಥೆಗಳ ಪಾಲ್ಗೊಳ್ಳುವಿಕೆಯ ಮೂಲಕ ಕಡಲ ಜೈವಿಕ ಸಂಪನ್ಮೂಲ ಕೇಂದ್ರವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ನಿರ್ಧಾರ ಈಗ ಸರಕಾರದ ಅಂತಿಮ ಹಂತದಲ್ಲಿದೆ. ಕಡಲಿನ ಜೈವಿಕ ಸಂಯುಕ್ತಗಳಿಂದ ಹೊಸ ಆಹಾರ ತಯಾರಿ ಸಂಶೋಧನೆ, ಸ್ಟಾರ್ಟ್‌ ಅಪ್‌ ಸ್ಥಾಪಿಸಲು ಅವಕಾಶವಿದೆ.
– ಡಾ| ಶಿವಕುಮಾರ್‌ ಮಗದ, ಡೀನ್‌, ಮೀನುಗಾರಿಕೆ ಕಾಲೇಜು

ಕೇಂದ್ರದಿಂದ
ಆಗುವ ಲಾಭವೇನು?
-ಕರಾವಳಿ ತಟದಲ್ಲಿರುವ ಸೀವೀಡ್‌ (ಸಮುದ್ರ ಕಳೆ) ಮೂಲಕ ಹೊಸ ಉತ್ಪನ್ನ ಸೃಷ್ಟಿ ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ
-ಕೈಗಾರಿಕೆಗಳಿಗೆ ಬಳಸುವ ಹಲವು ರಾಸಾಯನಿಕಗಳ ಸಂಶೋಧನೆ
-ಪ್ರಾಣಿ ಆಹಾರ ಸಂಶೋಧನೆ-ಉತ್ಪಾದನೆ
-ಬಯೋ ಇಂಧನ ಕುರಿತ ಸಂಶೋಧನೆ
-ಉಪ್ಪು ನೀರು ಸಂಸ್ಕರಣೆ

-  ದಿನೇಶ್‌ ಇರಾ

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.