“ಸಾಮಾಜಿಕ ಹೊಣೆಗಾರಿಕೆ’ ಪ್ರದರ್ಶಿಸಿದ ಕರಾವಳಿಯ ಕೈಗಾರಿಕೆಗಳು


Team Udayavani, May 7, 2021, 8:00 AM IST

“ಸಾಮಾಜಿಕ ಹೊಣೆಗಾರಿಕೆ’ ಪ್ರದರ್ಶಿಸಿದ ಕರಾವಳಿಯ ಕೈಗಾರಿಕೆಗಳು

ಮಹಾನಗರ: ಕೋವಿಡ್ ಹಿನ್ನೆಲೆಯಲ್ಲಿ ಇಡೀ ದೇಶವೇ ಆರೋಗ್ಯದ ತುರ್ತು ಪರಿಸ್ಥಿತಿ ಎದುರಿಸುತ್ತಿರಬೇಕಾದರೆ, ಜನರ ಪ್ರಾಣ ರಕ್ಷಣೆಗೆ ತುರ್ತಾಗಿ ಸ್ಪಂದಿಸುವಲ್ಲಿ ಮುಂಚೂಣಿಯಲ್ಲಿರುವ ಕರಾವಳಿ ಭಾಗದ ಕೆಲವು ಪ್ರತಿಷ್ಠಿತ ಕೈಗಾರಿಕೆಗಳು ಇದೀಗ ಇತರರಿಗೆ ಸ್ಫೂರ್ತಿಯಾಗುವ ಜತೆಗೆ ಮಾದರಿ ಎನಿಸಿಕೊಳ್ಳುತ್ತಿವೆ.

ಏಕೆಂದರೆ, ಕೋವಿಡ್ ಸೋಂಕು ವ್ಯಾಪಕಗೊಳ್ಳುತ್ತಿರುವುದರಿಂದ ಆಕ್ಸಿಜನ್‌ ಸಹಿತ ನಾನಾ ರೀತಿಯ ವೈದ್ಯಕೀಯ ಸವಲತ್ತು-ಸಾಧನಗಳಿಗೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಭಾವದ ಸವಾಲು ಎದುರಾಗುತ್ತಿದೆ. ಹೀಗಿರುವಾಗ, ಜಿಲ್ಲೆಯ ವಿವಿಧ ಕಂಪೆನಿಗಳು ತುರ್ತಾಗಿ ಜಿಲ್ಲಾಡಳಿತದ ಜತೆ ಕೈಜೋಡಿಸಿಕೊಂಡು ವೈದ್ಯಕೀಯ ಕ್ಷೇತ್ರದಲ್ಲಿ ಆಗಬೇಕಾದ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಶೀಘ್ರ ಅನುಷ್ಠಾನಕ್ಕೆ ಮುಂದಡಿ ಇಟ್ಟಿರುವುದು ಗಮನಾರ್ಹ. ಆ ಮೂಲಕ, ಈ ಕಂಪೆನಿಗಳು ಜಿಲ್ಲೆಯ ಜನರಿಗಾಗಿ ಅಕ್ಷರಶಃ ತಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸುತ್ತಿವೆ.

ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿಯೂ ಎಂಆರ್‌ಪಿಎಎಲ್‌ ಸಹಿತ ಜಿಲ್ಲೆಯಲ್ಲಿರುವ ಕೆಲವು ಬೃಹತ್‌ ಕೈಗಾರಿಕೆಗಳು ಆಕ್ಸಿಜನ್‌ ಬೆಡ್‌, ಆ್ಯಂಬುಲೆನ್ಸ್‌ ಮತ್ತಿತರ ಸೌಲಭ್ಯಗಳನ್ನು ಒದಗಿಸಿತ್ತು. ಆದರೆ ಈ ಬಾರಿ ಜಿಲ್ಲೆಯ ಎಲ್ಲ ಬೃಹತ್‌ ಸಂಸ್ಥೆಗಳು ಮಹತ್ವದ ಕೊಡುಗೆ ನೀಡಲು ಮುಂದೆ ಬಂದಿವೆ. ಅದರಲ್ಲಿಯೂ ವಿಶೇಷವೆಂದರೆ, ಎಂಆರ್‌ಪಿಎಲ್‌ನಂಥ ಕಂಪೆನಿಗಳು ಈಗಾಗಲೇ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಉತ್ಪಾದನ ಘಟಕ ಸ್ಥಾಪನೆಗೆ ಕಾರ್ಯೋನ್ಮುಖವಾಗಿದೆ.

ಪ್ರತೀದಿನ 8,670 ಲೀ ಆಕ್ಸಿಜನ್‌ ಲಭ್ಯ :

ವಿವಿಧ ಕಂಪೆನಿಗಳ ನೆರವಿನಿಂದ ಮುಂದಿನ 2 ತಿಂಗಳೊಳಗೆ ಪ್ರತೀದಿನ 8,670 ಲೀ. ಆಕ್ಸಿಜನ್‌ ಉತ್ಪಾದನೆಗೆ ಉದ್ದೇಶಿಸಲಾಗಿದೆ. ವೆನ್ಲಾಕ್‌ ಆಸ್ಪತ್ರೆಯಲ್ಲಿ ಎಂಆರ್‌ಪಿಎಲ್‌ ವತಿಯಿಂದ ಪ್ರತೀದಿನ 7 ಸಾವಿರ ಲೀ. ಸಾಮರ್ಥ್ಯದ (192 ಜಂಬೋ ಸಿಲಿಂಡರ್‌) ಆಕ್ಸಿಜನ್‌ ಘಟಕ ನಿರ್ಮಾಣ ಆರಂಭವಾಗಿದೆ. ಜಿಲ್ಲೆಯ ವಿವಿಧೆಡೆ ಎಂಸಿಎಫ್‌ ವತಿಯಿಂದ ತಲಾ 80 ಲೀಟರ್‌ ಸಾಮರ್ಥ್ಯದ (ತಲಾ 17 ಜಂಬೋ ಸಿಲಿಂಡರ್‌)ಘಟಕ,  ಗೈಲ್‌ ಸಂಸ್ಥೆಯ ವತಿಯಿಂದ 560 ಲೀ. ಸಾಮರ್ಥ್ಯ (51 ಜಂಬೋ ಸಿಲಿಂಡರ್‌), ಕೆಐಒಸಿಎಲ್‌ ವತಿಯಿಂದ 560 ಲೀಟರ್‌ ಸಾಮರ್ಥ್ಯದ (51 ಜಂಬೋ ಸಿಲಿಂಡರ್‌) ಘಟಕ ನಿರ್ಮಾಣಕ್ಕೆ ಸಿದ್ಧತೆ ಆರಂಭವಾಗಿದೆ. ಇದರ ಜತೆಗೆ ಸುಳ್ಯದಲ್ಲಿ ಸರಕಾರದ ವತಿಯಿಂದ 85 ಲಕ್ಷ ರೂ. ವೆಚ್ಚದಲ್ಲಿ 85 ಜಂಬೋ ಸಿಲಿಂಡರ್‌ ಸಾಮರ್ಥ್ಯದ ಘಟಕ ನಿರ್ಮಾಣವಾಗಲಿದೆ.

ಜಿಲ್ಲೆಯಲ್ಲಿ ಕೋವಿಡ್‌ನ‌ ಮುಂದಿನ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಸಂಸದ ನಳಿನ್‌ ಕುಮಾರ್‌ ಕಟೀಲು, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರ ಸೂಚನೆಯಂತೆ ಎಂಆರ್‌ಪಿಎಲ್‌ ಸಹಿತ ಜಿಲ್ಲೆಯ 9 ಕೈಗಾರಿಕೆ ಸಂಸ್ಥೆಗಳು ಸಿಎಸ್‌ಆರ್‌ (ಸಾಮಾಜಿಕ ಬದ್ಧತ ನಿಧಿ)ಅಡಿಯಲ್ಲಿ ಜಿಲ್ಲೆಯ ನೆರವಿಗೆ ಮುಂದೆ ಬಂದಿದೆ.

ವಿವಿಧ ಸಂಸ್ಥೆಗಳ ಕೊಡುಗೆಗಳು :

ಸಂಸ್ಥೆಯ ಹೆಸರು        ಕೊಡುಗೆಗಳು

ಎಂಆರ್‌ಪಿಎಲ್‌ : ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯಲ್ಲಿ 9,301 ಪಿಎಂ ಸಾಮರ್ಥ್ಯದ ಆಕ್ಸಿಜನ್‌ ಘಟಕ

ಎಂಸಿಎಫ್‌      :    ಮಂಗಳೂರಿನ ಇಎಸ್‌ಐ ಆಸ್ಪತ್ರೆ, ಬಂಟ್ವಾಳ ತಾ| ಆಸ್ಪತ್ರೆಯಲ್ಲಿ 801 ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನ ಘಟಕ

ಗೇಲ್‌ ಇಂಡಿಯಾ : ಪುತ್ತೂರು-ಬೆಳ್ತಂಗಡಿಯಲ್ಲಿ ಆಮ್ಲಜನಕ ಉತ್ಪಾದನ ಘಟಕ

 ಕೆಐಒಸಿಎಲ್‌ : ಉಪ್ಪಿನಂಗಡಿ-ಮೂಡಬಿದ್ರೆಗಳಲ್ಲಿ ಆಮ್ಲಜನಕ ಉತ್ಪಾದನ ಘಟಕ

ಇನ್ಫೋಸಿಸ್‌ : ಉಳ್ಳಾಲದಲ್ಲಿ ವಿದ್ಯುತ್‌ ಚಿತಾಗಾರ

ಎಸ್‌ಇಝಡ್‌ ವಲಯದ ಕೈಗಾರಿಕೆ ಘಟಕಗಳು : ಜಿಲ್ಲೆಯಾದ್ಯಂತ ಆ್ಯಂಬುಲೆನ್ಸ್‌ ನಿರ್ವಹಣೆ, ಬಾಡಿಗೆ ಆಧಾರದಲ್ಲಿ ಪಡೆದು ಆವಶ್ಯಕತೆಗೆ ಅನುಗುಣವಾಗಿ ಕ್ರಮ

ಭಾರತೀಯ ಉದ್ಯಮಗಳ ಒಕ್ಕೂಟ ಮಂಗಳೂರು ಘಟಕ (ಸಿಐಐ) : ಬಾಡಿಗೆ ಆಧಾರದಲ್ಲಿ 100 ಆಮ್ಲಜನಕ ಸಿಲಿಂಡರ್‌ಗಳ ಪೂರೈಕೆ

ಎನ್‌ಎಂಪಿಟಿ : 20 ಡ್ಯೂರೋ ಸಿಲಿಂಡರ್‌

ಬಿಎಎಸ್‌ಎಫ್‌ : 20 ಡ್ಯೂರೋ ಸಿಲಿಂಡರ್‌

ದ.ಕ. ಜಿಲ್ಲೆಯಲ್ಲಿ ವೈದ್ಯಕೀಯ ಸಂಬಂಧಿತ ಕಾರ್ಯಕ್ಕೆ ವಿವಿಧ ಕಂಪೆನಿಯವರು ನೆರವು ಘೋಷಿಸಿದ್ದು, ಈಗಾಗಲೇ ಈ ಯೋಜನೆಯ ಅನುಷ್ಠಾನಕ್ಕೆ ಕಾರ್ಯಾದೇಶವನ್ನೂ ನೀಡುತ್ತಿದ್ದಾರೆ. ಈ ಪೈಕಿ ವೆನಾÉಕ್‌ನಲ್ಲಿ ಎಂಆರ್‌ಪಿಎಲ್‌ ವತಿಯಿಂದ ನಿರ್ಮಾಣವಾಗುವ ಆಕ್ಸಿಜನ್‌ ಘಟಕ ಯೋಜನೆಗೆ ಈಗಾಗಲೇ ಪೂರ್ವಭಾವಿ ಸಿದ್ಧತೆ ಕೂಡ ಆರಂಭವಾಗಿದೆ. ಜೂನ್‌ ಮೊದಲ ವಾರದಲ್ಲಿ ಈ ಘಟಕ ಪೂರ್ಣವಾಗುವ ನಿರೀಕ್ಷೆಯಿದ್ದು, ಉಪಯೋಗಕ್ಕೆ ದೊರೆಯಲಿದೆ.  -ಡಾ| ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ, ದ.ಕ.

 

-ದಿನೇಶ್‌ ಇರಾ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.