ಕರಾವಳಿ: ಗರಿಷ್ಠ ಉಷ್ಣಾಂಶ ಹೆಚ್ಚಳ


Team Udayavani, Feb 8, 2019, 5:29 AM IST

8-february-6.jpg

ಮಹಾನಗರ: ಕರಾವಳಿ ಪ್ರದೇಶದಲ್ಲಿ ಸಾಮಾನ್ಯವಾಗಿ ಮಾರ್ಚ್‌ ಮೊದಲ ವಾರದಿಂದ ಸೆಕೆ ಪ್ರಾರಂಭವಾಗುತ್ತದೆ. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದ ಫೆಬ್ರವರಿ ಮೊದಲ ವಾರವೇ ಸೆಕೆಯ ಅನುಭವವಾಗುತ್ತಿದೆ.

ಜಿಲ್ಲೆಯ ಸರಾಸರಿ ಉಷ್ಣಾಂಶದಲ್ಲಿ ಪ್ರತೀ ದಿನ ಏರಿಳಿತ ಕಂಡುಬರುತ್ತಿದ್ದು, ಗರಿಷ್ಠ ತಾಪಮಾನ ಸುಮಾರು 37 ಡಿಗ್ರಿ ಸೆಲ್ಸಿಯಸ್‌ ತಲುಪುತ್ತಿದೆ. ಹವಾಮಾನ ಇಲಾಖೆಯ ತಜ್ಞರ ಪ್ರಕಾರ ಇನ್ನೂ, ಕೆಲವು ದಿನಗಳ ಕಾಲ ಇದೇ ರೀತಿ ವಾತಾವರಣ ಮುಂದುವರಿಯಲಿದೆ.

ಉರಿಯುತ್ತಿರುವ ಬಿಸಿಲಿನಿಂದ ಹೈರಾ ಣಾದ ಮಂದಿ ತಂಪು ಪಾನೀಯದ ಮೊರೆ ಹೋಗುತ್ತಿದ್ದಾರೆ. ಇದರಿಂದ ಪಾನೀಯ ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಎಳನೀರು ಮಾರಾಟ, ಜ್ಯೂಸ್‌ ಸೆಂಟರ್‌, ಕಲ್ಲಂಗಡಿ ಮಾರಾಟ ಹೆಚ್ಚಳವಾಗಿದೆ. ಕೆಲವು ಕಡೆಗಳಲ್ಲಿ ಕಲ್ಲಂಗಡಿ, ಅನಾನಾಸು, ಮುಳ್ಳು ಸೌತೆ ಸಹಿತ ಮೊದಲಾದವುಗಳನ್ನು ಹೋಳು ಗಳಾಗಿ ಮಾಡಿ ಪ್ಲಾಸ್ಟಿಕ್‌ ಗ್ಲಾಸ್‌ಗಳಲ್ಲಿ ಇಟ್ಟು ಮಾರಾಟ ಮಾಡಲಾಗುತ್ತಿದೆ.

ಬೆಲೆ ಏರಿಕೆ
ನಗರದ ಕೆಲವು ಅಂಗಡಿಗಳಲ್ಲಿ ಎಳ ನೀರಿನ ಬೆಲೆ ಕೂಡ ಏರಿಕೆಯಾಗಿದೆ. ಈ ಹಿಂದೆ ಊರಿನ ಎಳನೀರಿಗೆ 30 ರೂ. ಇತ್ತು ಇದೀಗ 32 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಹೈಬ್ರೀಡ್‌ ಎಳನೀರು ಬೆಲೆ 35 ರೂ.ಗೆ ಏರಿಕೆಯಾಗಿದೆ.

ಅವಧಿಗೂ ಮುನ್ನ ಸೆಕೆ
ಸಾಮಾನ್ಯವಾಗಿ ಮಾರ್ಚ್‌ ತಿಂಗಳಿನಿಂದ ಕರಾವಳಿ ಪ್ರದೇಶದಲ್ಲಿ ಸೆಕೆ ಪ್ರಾರಂಭವಾಗುತ್ತದೆ. ಆದರೆ, ವಾತಾ ವರಣದಲ್ಲಿ ಮೇಲ್ಮೆ ೖಸುಳಿಗಾಳಿ ಇರುವ ಕಾರಣದಿಂದಾಗಿ ಸೆಕೆ ಅವಧಿಗೂ ಮುನ್ನ ಆರಂಭವಾಗಿದೆ. ಜತೆಗೆ ಗರಿಷ್ಠ ಉಷ್ಣಾಂಶ ಪ್ರಮಾಣದಲ್ಲೂ ಏರಿಕೆಯಾ ಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಸೆಕೆ ಮತ್ತು ಮೋಡಕವಿದ ವಾತಾವರಣ ಇದೇ ರೀತಿ ಮುಂದುವರಿಯಲಿದೆ. 
– ಗವಾಸ್ಕರ್‌ ಸಾಂಗ,
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ
ಕೇಂದ್ರ ವಿಜ್ಞಾನಿ

ತಂಪು ಪಾನೀಯಕ್ಕೆ ಬೇಡಿಕೆ
ಸೆಕೆ ಪ್ರಾರಂಭವಾಗುತ್ತಿದ್ದಂತೆ ತಂಪುಪಾನಿಯಗಳಿಗೆ ಬೇಡಿಕೆ ಪ್ರಾರಂಭವಾಗಿದೆ. ಕೆಲವೊಂದು ಕಡೆಗಳಲ್ಲಿ ತಂಪು ಪಾನಿಯಗಳ ಬೆಲೆಯನ್ನು ಏರಿಕೆ ಮಾಡಲಾಗಿದೆ.
– ವಿಶ್ವನಾಥ,ಎಳನೀರು ವ್ಯಾಪಾರಿ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.