ತಿಂಗಳುಗಳ ಬಳಿಕ ಮೇಲೇರಲಿದೆ ಕರಾವಳಿಯ ಬೆಳ್ಳಿ ಪರದೆ!

ಕೋಸ್ಟಲ್‌ವುಡ್‌ನ‌ಲ್ಲಿ ಕುತೂಹಲ; ಸಿನೆಮಾ ರಿಲೀಸ್‌ಗೆ ತಯಾರಿ

Team Udayavani, Oct 5, 2020, 12:49 PM IST

MNG-TDY-2

ಮಹಾನಗರ, ಅ. 4: ಬರೋಬ್ಬರಿ ಏಳು ತಿಂಗಳುಗಳ ಬಳಿಕ ಅ. 15ರಿಂದ ಚಿತ್ರಮಂದಿರಗಳು ಆರಂಭವಾಗುವ ಸುಳಿವು ದೊರೆಯುತ್ತಿರುವಂತೆಯೇ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಆರಂಭವಾಗಿದೆ.

ಸಿನೆಮಾ ಪ್ರದರ್ಶನ ಆರಂಭದ ಬಗ್ಗೆ ಕೇಂದ್ರ ಸರಕಾರ ಸಹಮತ ವ್ಯಕ್ತಪಡಿಸಿದ್ದ ರಿಂದ ಕರಾವಳಿ ಭಾಗದಲ್ಲಿ ಈಗಾಗಲೇ ಸಿದ್ಧ ಗೊಂಡಿರುವ ತುಳು ಸಿನೆಮಾ ಪ್ರದರ್ಶನಕ್ಕೆ ತಯಾರಿ ನಡೆಯುತ್ತಿದೆ. ಈ ಮೂಲಕ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಚೇತರಿಕೆ ಶುರುವಾಗುವ ಲಕ್ಷಣ ಗೋಚರಿಸಿದೆ.

ಸದ್ಯದ ಮಾಹಿತಿ ಪ್ರಕಾರ; ಕಾರ್ನಿಕದ ಕಲ್ಲುರ್ಟಿ, ಇಂಗ್ಲೀಷ್‌, ಇಲ್ಲೊಕ್ಕೆಲ್‌, ಪೆಪ್ಪೆರೆರೆ ಪೆರೆರೆರೆ ಸಿನೆಮಾಗಳು ಈಗಾಗಲೇ ಬಿಡುಗಡೆಗೆ ಸಿದ್ಧವಾಗಿವೆ. ಈ ಪೈಕಿ ಕಾರ್ನಿಕದ ಕಲ್ಲುರ್ಟಿ, ಇಂಗ್ಲೀಷ್‌ ಸಿನೆಮಾಗಳು ಲಾಕ್‌ಡೌನ್‌ ಮುನ್ನವೇ ಪ್ರದರ್ಶನಕ್ಕೆ ದಿನಾಂಕ ನಿಗದಿ ಮಾಡಿತ್ತಾ ದರೂ ಲಾಕ್‌ಡೌನ್‌ ಕಾರಣದಿಂದ ಪ್ರದರ್ಶನ ಸ್ಥಗಿತಗೊಳಿಸಿತ್ತು. ಈ ಮಧ್ಯೆ, ಪೆಪ್ಪೆರೆರೆ ಪೆರೆರೆರೆ ಸಿನೆಮಾ ಡಿಸೆಂಬರ್‌ನಲ್ಲಿ ಒಟಿಟಿ ಫ್ಲ್ಯಾಟ್‌ಫಾರಂನಲ್ಲಿ ರಿಲೀಸ್‌ಗೆ ಸಿದ್ಧವಾಗಿವೆ. ಒಂದು ವೇಳೆ ಥಿಯೇಟರ್‌ ಆರಂಭವಾಗುವುದಾದರೆ ಈ ಸಿನೆಮಾ ಥಿಯೇಟರ್‌ನಲ್ಲಿಯೂ ರಿಲೀಸ್‌ ಆಗಲಿದೆ. ಜತೆಗೆ ವಿಕ್ರಾಂತ್‌, ಲಾಸ್ಟ್‌ ಬೆಂಚ್‌, ಏರೆಗಾವುಯೆ ಕಿರಿಕಿರಿ, ಅಗೋಳಿ ಮಂಜಣ್ಣ ಮುಂತಾದ ಸಿನೆಮಾಗಳು ಕೂಡ ಬಿಡುಗಡೆಗೆ ಸಿದ್ಧವಾಗಿವೆೆ.  ಈ ಮಧ್ಯೆ, ಮಗನೇ ಮಹಿಷ, ರಾಜ್‌ ಸೌಂಡ್ಸ್‌ ಆ್ಯಂಡ್‌ ಲೈಟ್ಸ್‌, ಟ್ಯಾಕ್ಸಿ ಬಾಬಣ್ಣ, ಗಬ್ಬರ್‌ಸಿಂಗ್‌ ಸಹಿತ ಇನ್ನೂ ಕೆಲವು ಸಿನೆಮಾಗಳು ಕೆಲವೇ ದಿನಗಳಲ್ಲಿ ಶೂಟಿಂಗ್‌ ಆರಂಭಿಸಲಿವೆ.

ಒಂದೊಂದು  ಸೀಟ್‌ ಖಾಲಿ!  :  ಚಿತ್ರಮಂದಿರ ತೆರೆದರೆ ಚಿತ್ರೋದ್ಯಮ ಚೇತರಿಸಿಕೊಳ್ಳಲು ಹೆಚ್ಚು ಸಮಯ ಬೇಕಿಲ್ಲ. ಮನೋರಂಜನೆಗಾಗಿ ಜನ ಸಿನೆಮಾ ನೋಡಲು ಬಂದೇ ಬರುತ್ತಾರೆ ಎಂಬ ಆಶಾಭಾವ ಇದೆ ಎಂಬುದು ಸಿನೆಮಾ ಥಿಯೇಟರ್‌ಗಳ ಪ್ರಮುಖರ ಅಭಿಪ್ರಾಯ. ಥಿಯೇಟರ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕಾರಣದಿಂದ ಒಂದು ಸೀಟಿನ ಅನಂತರದ ಸೀಟನ್ನು ಖಾಲಿ ಬಿಡಲಾಗುತ್ತದೆ. ಜತೆಗೆ, ಒಟ್ಟು ಥಿಯೇಟರ್‌ನಲ್ಲಿ ಅರ್ಧದಷ್ಟು ಪ್ರೇಕ್ಷಕರ ವೀಕ್ಷಣೆಗೆ ಮಾತ್ರ ಅವಕಾಶ ನೀಡಲಾಗುವುದು. ಅದೇ ರೀತಿ ಸಿನೆಮಾ ಟಿಕೆಟ್‌ ಬದಲು ಆನ್‌ಲೈನ್‌ ಟಿಕೆಟ್‌ ಅಥವಾ ಮೆಸೇಜ್‌ ತೋರಿಸುವ ಮೂಲಕ ಸಿನೆಮಾ ವೀಕ್ಷಣೆಗೆ ಒತ್ತು ನೀಡಲಾಗುವುದು. ಈ ಮೂಲಕ ಸಿನೆಮಾ ಮಂದಿರಗಳು ಸಿನಿಪ್ರೀಯರ ಸ್ವಾಗತಕ್ಕೆ ಸರ್ವ ಸಿದ್ಧತೆ ಮಾಡಿದೆ ಎನ್ನುತ್ತಾರೆ ಸಿನೆಪೊಲಿಸ್‌ ಪ್ರಮುಖರಾದ ಕೀರ್ತನ್‌ ಶೆಟ್ಟಿ.

ಕಲಾವಿದರಿಗೆ ಆಶಾಭಾವ : ಥಿಯೇಟರ್‌ ಆರಂಭಕ್ಕೆ ಕೇಂದ್ರ ಸರಕಾರ ಅವಕಾಶ ನೀಡಿರುವುದು ಉತ್ತಮ ಬೆಳವಣಿಗೆ. ಈ ಮೂಲಕ ತುಳುವಿನಲ್ಲಿ ಈಗಾಗಲೇ ಸಿದ್ಧವಾಗಿರುವ ಹಲವು ಸಿನೆಮಾ ಪ್ರದರ್ಶನಕ್ಕೆ ಅವಕಾಶ ಸಿಗಲಿದೆ. ಜತೆಗೆ, ಥಿಯೆಟರ್‌ ಆರಂಭದ ಮುಖೇನ ಹೊಸ ಸಿನೆಮಾಗಳ ಶೂಟಿಂಗ್‌ ಮತ್ತೆ ಮುಂದುವರಿಸುವ ಆಶಾಭಾವ ಮೂಡುತ್ತದೆ. ಕಲಾವಿದರು, ತಂತ್ರಜ್ಞರಿಗೆ ಇದರಿಂದ ಉಪಯೋಗವಾಗಲಿದೆ. ತುಳು ನಾಟಕಕ್ಕೆ ಕೂಡ ಇದೇ ರೀತಿ ಅವಕಾಶ ದೊರಕಿದರೆ ಸಾವಿರಾರು ಕಲಾವಿದರಿಗೆ ಅನುಕೂಲವಾಗಲಿದೆ.-ಅರವಿಂದ ಬೋಳಾರ್‌ನಟ-ರಂಗಭೂಮಿ ಕಲಾವಿದರು

ಪ್ರದರ್ಶನಕ್ಕೆ ಸಿದ್ಧತೆ :ಮಂಗಳೂರಿನಲ್ಲಿ ಸಿಂಗಲ್‌ ಥಿಯೇಟರ್‌ಗಳು ಜ್ಯೋತಿ, ರಾಮಕಾಂತಿ, ರೂಪವಾಣಿ, ಪ್ರಭಾತ್‌, ಸುಚಿತ್ರ ಇದ್ದು, ಮಲ್ಟಿಪ್ಲೆಕ್ಸ್‌ನಲ್ಲಿ ಸಿಟಿಸೆಂಟರ್‌ನಲ್ಲಿ ಸಿನೆಪೊಲಿಸ್‌, ಭಾರತ್‌ ಮಾಲ್‌ನಲ್ಲಿ ಬಿಗ್‌ ಸಿನೆಮಾಸ್‌ ಹಾಗೂ ಫಾರಂ ಮಾಲ್‌ನಲ್ಲಿ ಪಿವಿಆರ್‌ ಥಿಯೇಟರ್‌ಗಳಿವೆ. ಅ. 15ರಿಂದ ಈ ಎಲ್ಲ ಥಿಯೇಟರ್‌ನಲ್ಲಿ ಸಿನೆಮಾ ಪ್ರದರ್ಶನಕ್ಕೆ ಸಿದ್ಧತೆ ನಡೆಯುತ್ತಿದೆ. ಆದರೆ ಯಾವ ಸಿನೆಮಾ ಮೊದಲು ರಿಲೀಸ್‌ ಆಗಲಿದೆ ಎಂಬುದು ಇನ್ನಷ್ಟೇ ಅಂತಿಮವಾಗಬೇಕಿದೆ. ಮುಂದೆ ಸುರತ್ಕಲ್‌ನಲ್ಲಿ ಮೂರು ಥಿಯೇಟರ್‌ಗಳು ಹೊಸದಾಗಿ ಕಾರ್ಯಾರಂಭಿಸಲಿವೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.