ಎಳನೀರು: ಅಡಿಕೆ ಬೆಳೆಗಾರರನ್ನು ನಿದ್ದೆಗೆಡಿಸಿದ ಸುಳಿ ಕೊಳೆರೋಗ


Team Udayavani, Oct 7, 2020, 12:08 PM IST

puttur-tdy-1

ಬೆಳ್ತಂಗಡಿ, ಅ. 6: ಅಡಿಕೆ ಬೆಳೆಗೆ ಬಂಗಾರದ ಬೆಲೆ ಬರುವ ಕಾಲದಲ್ಲೇ ಬೆಳ್ತಂಗಡಿ ತಾಲೂಕಿನ ಕೆಲವೆಡೆ ಸುಳಿ ಕೊಳೆ ರೋಗ ಬಾಧಿಸುತ್ತಿರುವ ಮುನ್ಸೂಚನೆ ಗೋಚರಿಸಿದ್ದು ಕೃಷಿಕರನ್ನು  ಸಂಕಷ್ಟಕ್ಕೆ ದೂಡು ವಂತೆ ಮಾಡಿದೆ.

ಬೆಳ್ತಂಗಡಿ ತಾಲೂಕಿನ ಎಳನೀರು ವ್ಯಾಪ್ತಿಯಲ್ಲಿ   150ರಿಂದ 200 ಎಕ್ರೆ ಅಡಿಕೆ ಕೃಷಿ ಭೂಮಿಯಲ್ಲಿ ಸುಳಿಕೊಳೆರೋಗ ಬಾಧಿಸಿ ರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಹಿಂಗಾರ, ಎಲೆಗಳು ನಸು ಕಂದುಬಣ್ಣಕ್ಕೆ ತಿರುಗಿ ಮರಗಳು ಸಾಯಲಾರಂಭಿಸಿವೆ.

ಕಳೆದ ವರ್ಷ ಬರ, ಈ ವರ್ಷ ಕೋವಿಡ್ ಮಧ್ಯೆ ಒಂದಷ್ಟು ಅಡಿಕೆ ಬೆಲೆ ಏರಿಕೆಯಾಗುವ ಸಮಯದಲ್ಲಿ ಈ ರೀತಿಯ ಕೊಳೆರೋಗ ಬಾಧಿಸಿರುವುದು ಇಳುವರಿಗೆ ಕುತ್ತು ತಂದಿದೆ. 2019ರ ಮಾರ್ಚ್‌ ಅವಧಿಯಲ್ಲಿ ಗರಿಷ್ಠ ತಾಪಮಾನ ತಲುಪಿದ ಪರಿಣಾಮ ಸುಳ್ಯ, ಬಂಟ್ವಾಳ, ಬೆಳ್ತಂಗಡಿಯ ಬಹುತೇಕ ಪ್ರದೇಶಗಳಲ್ಲಿ ದಿನಕ್ಕೆ ನಾಲ್ಕು ತಾಸು ನೀರು ಹಾಯಿಸುವ ತೋಟಗಳಲ್ಲೂ(ರೆಡ್‌ಮೈಟ್‌) ರೋಗ ಬಾಧಿಸಿ ಇಳುವರಿ ಕಡಿಮೆಯಾಗಿತ್ತು. 2019ರಲ್ಲಿ ಜಿಲ್ಲೆಯ 33,595 ಹೆಕ್ಟೇರ್‌ ಪ್ರದೇಶದಲ್ಲಿ ಶೇ. 33ಕ್ಕಿಂತ ಹೆಚ್ಚು (ಫೈಟೋ ಥೆರಾ ಆರೆಕಿಯಾ) ಕೊಳೆರೋಗವಿರುವ ಪ್ರದೇಶವನ್ನು ಗುರುತಿಸಲಾಗಿತ್ತು. ಜತೆಗೆ ಮೇ ತಿಂಗಳಲ್ಲಿ ಅಡಿಕೆ ಸಸಿಗೆ ರೆಡ್‌ಮೈಟ್‌ ಬಾಧಿಸುತ್ತಿತ್ತು. ಪ್ರಸಕ್ತ ಮಳೆಗಾಲದಲ್ಲೇ ಅಡಿಕೆ ಸಸಿಗಳು ಕರಟುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮೂರು ವಿಧದ ಕೊಳೆ ರೋಗ :  ಅಡಿಕೆಗೆ ಸಾಮಾನ್ಯವಾಗಿ ಮೂರು ವಿಧದ ಕೊಳೆರೋಗ ಬಾಧಿಸುತ್ತಿವೆ. ಅದನ್ನು ಸುಳಿ ಕೊಳೆರೋಗ, ಕಾಯಿಕೊಳೆರೋಗ, ಬುಡ ಕೊಳೆರೋಗ ಎಂದು ವಿಂಗಡಿಸಲಾಗುತ್ತದೆ ಎಂದು ಸಾವಯವ ಕೃಷಿ ತಜ್ಞ ಪ್ರಭಾಕರ ಮಯ್ಯ ತಿಳಿಸಿದ್ದಾರೆ.

ಭೇಟಿ ನೀಡಿ ಪರಿಶೀಲನೆ : ಎಳನೀರು ಪ್ರದೇಶದ ಅಡಿಕೆ ತೋಟಗಳಿಗೆ ರೋಗ ಆವರಿಸಿರುವ ಕುರಿತು ಮಾಹಿತಿ ಲಭಿಸಿದೆ. ಅ. 7ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಬಳಿಕ ವಷ್ಟೇ ಯಾವ ರೋಗಬಾಧೆ ಹಾಗೂ ಅದಕ್ಕೆ ಅವಶ್ಯವಿರುವ ಕೀಟನಾಶಕ ಬಳಸಲು ಮಾಹಿತಿ ನೀಡಲಾಗುವುದು.  –ಕೆ.ಎಸ್‌.ಚಂದ್ರಶೇಖರ್‌,  ಹಿರಿಯ ತೋಟಗಾರಿಕೆ ನಿರ್ದೇಶಕ, ಬೆಳ್ತಂಗಡಿ ತೋಟಗಾರಿಕೆ ಇಲಾಖೆ

ಕಳೆದ ವರ್ಷದಿಂದ ಎಳನೀರು ಸುತ್ತಮುತ್ತ ಪ್ರದೇಶದಲ್ಲಿ ರೋಗ ಬಾಧಿಸಿದ್ದು, ಕೃಷಿ ನಾಶವಾಗುವ ಭೀತಿ ಎದುರಾಗಿದೆ. ಪ್ರತಿ ವರ್ಷ 10 ಕ್ವಿಂಟಾಲ್‌ ಫಸಲು ಬರುತ್ತಿದ್ದಲ್ಲಿ 2 ಕ್ವಿಂಟಾಲ್‌ ಫಸಲು ಬರುತ್ತಿದೆ. ಇದೀಗ ಸಂಸೆ ಕಡೆಗೂ ರೋಗ ಹರಡುತ್ತಿದೆ.  –ಪ್ರಕಾಶ್‌ ಕುಮಾರ್‌ ಜೈನ್‌,  ಎಳನೀರು

 

 –ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.