“ಕ್ರೀಡಾಕೂಟ ಆಯೋಜನೆಯಿಂದ ಸಮಾಜದಲ್ಲಿ ಒಗ್ಗಟ್ಟು’


Team Udayavani, Sep 24, 2019, 5:41 AM IST

oggattu

ಪುತ್ತೂರು : ವಿವಿಧ ವರ್ಗಗಳ ಜನರನ್ನು ಒಗ್ಗೂಡಿಸುವ ವಿಶೇಷ ಶಕ್ತಿ ಕ್ರೀಡೆಗಿದೆ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರು ಮಾಡುವ ಮೂಲಕ ಫಿಲೋಮಿನಾ ಸಂಸ್ಥೆಯ ಕ್ರೀಡಾಂಗಣ ಐತಿಹಾಸಿಕ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗ ಮತ್ತು ಸಂತ ಫಿಲೋಮಿನಾ ಕಾಲೇಜು ಆಶ್ರಯದಲ್ಲಿ ಸಂತ ಫಿಲೋಮಿನಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಬಿ. ಸದಾನಂದ ಮತ್ತು ವಾಮನ ಸ್ಮರಣಾರ್ಥ ಮಂಗಳೂರು ವಿವಿ ಅಂತರ್‌ ಕಾಲೇಜು ಮಂಗಳೂರು ವಲಯ ಮತ್ತು ಅಂತರ್‌ ವಲಯ ಪುರುಷರ ಫ‌ುಟ್‌ಬಾಲ್‌ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರವು ಜನಸಂಖ್ಯೆಯಲ್ಲಿ ಜಗತ್ತಿ ನಲ್ಲಿಯೇ ಎರಡನೆಯ ಸ್ಥಾನದಲ್ಲಿದ್ದರೂ ಕ್ರೀಡೆಯಲ್ಲಿ ನಮ್ಮ ಸ್ಥಾನ ಯಾವುದು ಎನ್ನುವುದು ಗುರುತಿಸಲೂ ಆಗುತ್ತಿಲ್ಲ. ಕ್ರೀಡೆಯಲ್ಲಿ ಸಾಧನೆ ಮಾಡಿದ ದೇಶ ಎಲ್ಲರಿಗೂ ತಿಳಿಯುತ್ತದೆ ಎಂದರು.
ಮುಖ್ಯ ಅತಿಥಿಯಾಗಿದ್ದ ದ.ಕ. ಜಿಲ್ಲಾ ಫ‌ುಟ್‌ಬಾಲ್‌ ಅಸೋಸಿಯೇಶನ್‌ ಅಧ್ಯಕ್ಷ ಡಿ.ಎಂ. ಅಸ್ಲಾಮ್‌ ಮಾತನಾಡಿ, ಕ್ರೀಡಾ ಕ್ಷೇತ್ರದ ಯಶಸ್ಸಿಗೆ ಕ್ರೀಡಾ ಸ್ಫೂರ್ತಿಯೇ ತಳಹದಿ. ಆಹಾರವು ವಿಷಭರಿತವಾಗಿರುವ ಇತ್ತೀಚಿಗಿನ ದಿನಗಳಲ್ಲಿ ಆರೋಗ್ಯವನ್ನು ಸುಸ್ಥಿಯಲ್ಲಿಟ್ಟುಕೊಳ್ಳಲು ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದು ಅಗತ್ಯ ಎಂದರು.

ಶಿಸ್ತು, ಪರಿಶ್ರಮವಿರಲಿ
ಗೌರವ ಅತಿಥಿಯಾಗಿದ್ದ ಕಾಲೇಜಿನ ಕ್ಯಾಂಪಸ್‌ ನಿರ್ದೇಶಕ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೆರೊ ಮಾತನಾಡಿ, ಕ್ರೀಡೆ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ. ಸತತ ಪರಿಶ್ರಮದಿಂದ ಅಭ್ಯಾಸ ದಲ್ಲಿ ತೊಡಗಿಕೊಂಡಾಗ ಕ್ರೀಡಾ ಸಾಧನೆ ಸಾಧ್ಯ ಎಂದರು. ಯುವ ಸಬಲೀಕರಣ ಹಾಗೂ ಕ್ರೀಡಾ ಧಿಕಾರಿ ಎಂ. ಮಾಮಚ್ಚನ್‌ ಮಾತನಾಡಿ, ಪುತ್ತೂರಿನ ಶೈಕ್ಷಣಿಕ ಕ್ರಾಂತಿಯಲ್ಲಿ ಮೊ| ಆ್ಯಂಟನಿ ಪತ್ರಾವೊ ಅವರ ಕೊಡುಗೆ ಅಪಾರ. ಈ ಸಂಸ್ಥೆ ಶಿಕ್ಷಣದೊಂದಿಗೆ ಕ್ರೀಡೆಗೂ ಪ್ರೋತ್ಸಾಹ ನೀಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ವಂ| ಆಲ್ಫೆ†ಡ್‌ ಜೆ. ಪಿಂಟೊ ಮಾತನಾಡಿ, ಕ್ರೀಡೆಗಳು ಶಾಂತಿ ಸಮನ್ವಯಕ್ಕೆ ಸಹಕಾರಿ. ಕ್ರೀಡಾಕೂಟದ ಸಂಘಟನೆಗೆ ಎಲ್ಲರ ಸಹಕಾರ ಅಗತ್ಯ ಎಂದರು. ವಾಣಿಜ್ಯ ಶಾಸ್ತ್ರ ವಿಭಾಗದ ಡೀನ್‌ ಪ್ರೊ| ಮ್ಯಾಕ್ಸಿಂ ಕಾರ್ಲ್ ಸ್ವಾಗತಿಸಿ, ಕಾಲೇಜಿನ ದೈ.ಶಿ. ನಿರ್ದೇಶಕ ಪ್ರಕಾಶ್‌ ಡಿ’ಸೋಜಾ ವಂದಿಸಿದರು. ದೈ.ಶಿ. ನಿರ್ದೇಶಕ ರಾಜೇಶ್‌ ಮೂಲ್ಯ ಸಹಕರಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರಶಾಂತ್‌ ರೈ ನಿರೂಪಿಸಿದರು.

ಸಾಧಕರಿಗೆ ಸಮ್ಮಾನ
ಗೌರವ ಅತಿಥಿಗಳಾಗಿದ್ದ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಮಾಜಿ ವೇಟ್‌ ಲಿಫ್ಟರ್‌ ಕೃಷ್ಣಪ್ಪ ಗೌಡ ಮತ್ತು ಹಿರಿಯ ವಿದ್ಯಾರ್ಥಿ ಹಾಗೂ ಮಾಜಿ ಕ್ರೀಡಾಪಟು ಸಜ್ಜನ್‌ ಕುಮಾರ್‌ ಕೆ. ಅವರನ್ನು ವಿಶೇಷ ಕ್ರೀಡಾ ಸಾಧನೆ ಗಾಗಿ ಸಮ್ಮಾನಿಸಲಾಯಿತು. ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ವಂ| ವಿಜಯ್‌ ಲೋಬೋ ಶುಭ ಹಾರೈಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.