‘ಮನೆಗಳಲ್ಲಿ ತುಳು ಗ್ರಂಥಗಳ ಸಂಗ್ರಹವಾಗಲಿ’
Team Udayavani, Jun 8, 2018, 10:57 AM IST
ಮಹಾನಗರ : ತುಳು ಭಾಷೆ, ಸಾಹಿತ್ಯ ಕ್ಷೇತ್ರದ ಬೆಳವಣಿಗೆಗಾಗಿ ಗ್ರಂಥಗಳ ಪ್ರಕಟನೆ ಹಾಗೂ ಮಾರಾಟದ ವ್ಯವಸ್ಥೆಯನ್ನು ಬಲಪಡಿಸಬೇಕು ಹಾಗೂ ತುಳುವರು ತಮ್ಮ ಮನೆ ಮನೆಗಳಲ್ಲಿ ತುಳು ಗ್ರಂಥಗಳ ಸಂಗ್ರಹದ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ ಹೆಗ್ಡೆ ಅವರು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ತುಳುನಾಡಿನ ಪ್ರಮುಖ ದೇವಸ್ಥಾನ, ದೈವಸ್ಥಾನಗಳಲ್ಲಿ ತುಳು ಪುಸ್ತಕ ಪ್ರದರ್ಶನ ಮತ್ತು ಮಾರಾಟ ಅಭಿಯಾನಕ್ಕೆ ಮಂಗಳಾದೇವಿ ದೇವಸ್ಥಾನದಲ್ಲಿ ದೀಪ ಬೆಳಗಿಸಿ ಚಾಲನೆ ನೀಡಿ ಅವರು ಮಾತನಾಡಿದರು.
ಸಂಸ್ಕೃತಿಯ ಅಭಿವೃದ್ಧಿಗಾಗಿ ವಿಶೇಷ ಪ್ರಯತ್ನ
ಇತ್ತೀಚೆಗಿನ ವರ್ಷಗಳಲ್ಲಿ ಅಕಾಡೆಮಿ ವತಿಯಿಂದ ಅನೇಕ ಮೌಲಿಕ ಕಾರ್ಯಕ್ರಮಗಳು ಜರಗುತ್ತಿದ್ದು ತುಳುಭಾಷೆ – ಸಂಸ್ಕೃತಿಯ ಅಭಿವೃದ್ಧಿಗಾಗಿ ವಿಶೇಷ ಪ್ರಯತ್ನಗಳಾಗುತ್ತಿವೆ. ಜಗತ್ತಿನಾದ್ಯಂತ ನೆಲೆಸಿರುವ ತುಳುವರು ತಮ್ಮ ಸಂಸ್ಕೃತಿ ಉಳಿವಿಗಾಗಿ ಕೊಡುಗೆ ನೀಡುತ್ತಿದ್ದಾರೆ. ತುಳು ಜನರು ಎಲ್ಲರೊಂದಿಗೆ ಬೆರೆತು ಎಲ್ಲ ಭಾಷೆಗಳನ್ನು ಕಲಿತು ಸರ್ವರನ್ನೂ ಪ್ರೀತಿಸುವ ಗುಣ ಹೊಂದಿದ್ದಾರೆ ಎಂದು ತಿಳಿಸಿದರು.
ಅಕಾಡೆಮಿಯು ತುಳು ಗ್ರಂಥಗಳ ಪ್ರಕಟನೆಗೆ ವಿಶೇಷ ಅನುಕೂಲ ಕಲ್ಪಿಸುತ್ತಿದೆ. ಇದರ ಪ್ರಯೋಜನ ಪ್ರತಿಯೊಬ್ಬ ತುಳುವರಿಗೂ ದೊರಕಬೇಕೆಂಬ ಪ್ರಯತ್ನದ ಭಾಗವಾಗಿ ತುಳು ಪುಸ್ತಕಗಳ ಮಾರಾಟ ಅಭಿಯಾನ ಕೈಗೊಂಡಿದೆ. 12 ದಿನಗಳ ಕಾಲ ಮಂಗಳಾದೇವಿಯಲ್ಲಿ ಮಾರಾಟ ಮಳಿಗೆ ಇರುವುದು. ತುಳು ಪುಸ್ತಕಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ ಎಂದು ಅವರು ನುಡಿದರು.
ಅಕಾಡೆಮಿ ಸದಸ್ಯ ಶಿವಾನಂದ ಕರ್ಕೇರ, ಬೆನೆಟ್ ಅಮ್ಮನ್ನ, ತಾರಾನಾಥ್ ಕಾಪಿಕಾಡ್, ಮಾಜಿ ಸದಸ್ಯ ಡಿ.ಎಂ. ಕುಲಾಲ್, ಪುಸ್ತಕ ಮಾರಾಟ ವ್ಯವಸ್ಥೆಯ ಪ್ರಮುಖರಾದ ದೀಪಕ್ ಮಂಜೇಶ್ವರ ಉಪಸ್ಥಿತರಿದ್ದರು
ತುಳು ಅಳವಡಿಸಿ ಪ್ರೋತ್ಸಾಹ
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಮಾತನಾಡಿ, ರಾಜ್ಯ ಸರಕಾರ ತುಳುಭಾಷೆಗಾಗಿ ಅಕಾಡೆಮಿ ಮಾನ್ಯತೆ ನೀಡಿದೆ. ಶಾಲೆ ಗಳಲ್ಲಿ ತುಳು ಕಲಿಕೆಗಾಗಿ ಅವಕಾಶ ಕಲ್ಪಿಸಿದೆ. ಮಂಗಳೂರು ವಿಶ್ವವಿದ್ಯಾಲಯದ ಮೂಲಕ ಪದವಿ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ತುಳುವನ್ನು ಅಳವಡಿಸಿ ಪ್ರೋತ್ಸಾಹ ನೀಡಲಾಗುತ್ತಿದೆ. ತುಳು ಭಾಷೆ – ಸಂಸ್ಕೃತಿಯ ಬಗ್ಗೆ ಅಧ್ಯಯನಕಾರರು ಹೆಚ್ಚುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?