ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಕಾಲೇಜು ವಿದ್ಯಾರ್ಥಿನಿ !
ಕಿಮೋಥೆರಪಿಗೆ ಒಳಗಾದ ಮಕ್ಕಳನ್ನು ನೋಡಿ ಈ ನಿರ್ಧಾರ
Team Udayavani, Sep 20, 2019, 5:24 AM IST
ಕೇಶದಾನದ ಮೊದಲು . ಅನಂತರ.
ಮಹಾನಗರ: ಹೆಣ್ಣಿಗೆ ಕೇಶವೇ ಭೂಷಣ. ನೀಲ ಕೇಶಕ್ಕಾಗಿ ಹೆಣ್ಮಕ್ಕಳು ಅದೆಷ್ಟು ಕಷ್ಟ ಪಡುತ್ತಾರೆ. ವೈದ್ಯರ ಸಲಹೆ ಸೇರಿದಂತೆ ಇದ್ದ ಎಣ್ಣೆಗಳನ್ನು ಬಳಸಿ ಕೇಶದ ಆರೈಕೆಗೆ ಮುಂದಾಗುತ್ತಾರೆ. ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ನೀಲ ಕೇಶವನ್ನು ಕೇಶರಹಿತರ ಮುಗದಲ್ಲಿ ನಗು ಕಾಣಲು ದಾನ ಮಾಡಿದ್ದಾಳೆ.
ನಗರದ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಬಿಎಎಲ್ಎಲ್ಬಿ ಕಲಿಯುತ್ತಿರುವ ಪವಿತ್ರಾ ಶೆಟ್ಯೆ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತ ಮಕ್ಕಳ ಮುಖದಲ್ಲಿ ನಗು ಕಾಣುವ ಸಲುವಾಗಿ ದಾನ ಮಾಡಿದ್ದಾಳೆ. ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರ್ ನವರಾದ ಪವಿತ್ರಾ ಕಾನೂನು ಪದವಿ ಪಡೆಯುವ ಉದ್ದೇಶದಿಂದ ನಗರಕ್ಕೆ ಆಗಮಿಸಿದ್ದಾರೆ. ಅನಿವಾರ್ಯ ಕಾರಣದಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದ ಪವಿತ್ರಾ ಕಿಮೋಥೆರಪಿಗೆ ಒಳಗಾದ ಮಕ್ಕಳನ್ನು ನೋಡಿ ಕೇಶದಾನ ಮಾಡುವ ನಿರ್ಧಾರ ಮಾಡಿದ್ದಾರೆ.
ಅಕ್ಕ ನಿಮ್ಮ ಕೂದಲು ಸುಂದರವಾಗಿದೆ!
ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಪವಿತ್ರಾ ನಗರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ಕೆಲವು ಹೊತ್ತು ಹೊರಭಾಗದಲ್ಲಿ ಕಾಯುವಂತೆ ತಿಳಿಸಿದರಂತೆ. ಹಾಗೆ ಹೊರಭಾಗದಲ್ಲಿ ಕುಳಿತಿದ್ದಾಗ ಕಿಮೋ ಥೆರಪಿಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಪವಿತ್ರಾ ಅವರನ್ನು ನೋಡಿ ನಿಮ್ಮ ಕೂದಲು ತುಂಬಾ ಚೆನ್ನಾಗಿದೆ ಎಂದು ಮುಟ್ಟಿದ್ದಾಗ ಅವರ ಮುಖದಲ್ಲಿ ಕಂಡ ಅಸಹಾಯಕತೆಯಿಂದ ಬೇಸರಗೊಂಡ ಪವಿತ್ರಾ ಮಕ್ಕಳ ಮುಂದೆ ನಸು ನಗುತ್ತಾ ವೈದ್ಯರನ್ನು ಭೇಟಿಯಾಗಿ ವಾಪಾಸು ಬಂದಿದ್ದರು. ಬಳಿಕ ಕ್ಯಾನ್ಸರ್ ಸೇವಾ ಸಂಸ್ಥೆಯೊಂದನ್ನು ಸಂಪರ್ಕಿಸಿ ಕೇಶದಾನ ಮಾಡುವ ಬಗ್ಗೆ ಚರ್ಚಿಸಿ ಕಳೆದ ವಾರ ತಮ್ಮ 18 ಇಂಚು ಉದ್ದದ ಕೂದಲನ್ನು ದಾನ ಮಾಡಿದ್ದಾರೆ.
ನಗರದ ಅನೇಕ ವಿದ್ಯಾರ್ಥಿಗಳಿಂದ ಕೇಶದಾನ
ಪವಿತ್ರಾ ಅವರಿಗಿಂತ ಮುನ್ನ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಹೆಣ್ಮಕ್ಕಳು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ್ದಾರೆ. ಕ್ಯಾನ್ಸರ್ ಪೀಡಿತರಿಗಾಗಿ ಕೇಶ ಸಂಗ್ರಹಿಸುವ ಕಾಯಕದಲ್ಲಿ ತೊಡಗಿಕೊಂಡಿರುವ ಸಂಸ್ಥೆಯ ಮೂಲಕ ಕೇಶದಾನ ಮಾಡ ಲಾಗಿದೆ. ಕ್ಯಾನ್ಸರ್ ಪೀಡಿತರ ಚಿಕಿತ್ಸೆಗಾಗಿ ಕಿಮೋ ಥೆರಪಿ ಮಾಡಿದಾಗ ಅವರು ಕೇಶವನ್ನು ಕಳೆದುಕೊಳ್ಳುತಾರೆ. ಈ ಸಂದರ್ಭ ಹೆಚ್ಚಾಗಿ ಮಹಿಳೆಯರು ಮಾನಸಿಕವಾಗಿ ಕುಗ್ಗಿಹೋಗುತ್ತಾರೆ. ಅವರಿ ಗಾಗಿಯೇ ಕೃತಕ ಕೂದಲನ್ನು ತಯಾರಿಸಿ ಕೊಡಲಾಗುತ್ತದೆ. ಅದಕ್ಕಾಗಿ ಕೇಶದಾನದ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಸಂಘ ಸಂಸ್ಥೆಗಳು ಕಾರ್ಯಚರಿಸುತ್ತಿವೆ.
ಕ್ಯಾನ್ಸರ್ ಪೀಡಿತರ ಮುಖದ ನಗುವಿನಿಂದ ಸಂತೃಪ್ತಿ
ಕೇಶ ಎಲ್ಲ ಹೆಣ್ಮಕ್ಕಳ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಆದರೆ ನನಗೆ ಆ ಮಕ್ಕಳನ್ನು ನೋಡಿ ನನ್ನ ಸೌಂದರ್ಯಕ್ಕಿಂತ ಅವರ ಮುಖದ ನಗುವೇ ಮುಖ್ಯ ಎಂದೆನಿಸಿತು. ತಾಯಿಯೊಂದಿಗೆ ಮಾತನಾಡಿ ಕೇಶದಾನ ಮಾಡಿದೆ. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಬೇಕಾಗಿದೆ.
– ಪವಿತ್ರಾ ಶೆಟ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ