ಬಸ್-ಕಂಟೈನರ್ ಲಾರಿ ನಡುವೆ ಅಪಘಾತ:ತಪ್ಪಿಸಲೆತ್ನಿಸಿದ ಲಾರಿ ಚಾಲಕನನ್ನು ಬೆನ್ನಟ್ಟಿದ ಸ್ಥಳೀಯರು
Team Udayavani, Sep 16, 2021, 9:33 AM IST
ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬಸ್ ರಸ್ತೆ ಬದಿಗೆ ವಾಲಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ನಿಲ್ಲಿಸದೇ ಪರಾರಿಯಾಗಲೆತ್ನಿಸಿದ ಲಾರಿ ಚಾಲಕನಿಗೆ ಬೆನ್ನಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ದ. ಕ.ದಿಂದ ವಿದೇಶಕ್ಕೆ ನಿಷೇಧಿತ ಸ್ಯಾಟಲೈಟ್ ಫೋನ್ ಸಂಪರ್ಕ ?
ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಸುಮಾರು 5 ಕಿ.ಮೀ ದೂರದಲ್ಲಿ ಲಾರಿಯನ್ನು ಬೆನ್ನಟ್ಟಿದ ತಂಡ ತಡೆದು ನಿಲ್ಲಿಸಿ, ಲಾರಿ ಚಾಲಕನಿಗೆ ಹಲ್ಲೆ ನಡೆಸಿದ್ದಾರೆ. ವಿಟ್ಲ ಪೊಲೀಸ್ ಹೊಯ್ಸಳ ವಾಹನ ಸ್ಥಳಕ್ಕೆ ಭೇಟಿ ನೀಡಿದ್ದಾರೆ.