ಶಾಲಾ ಗೋಡೆಗಳಲ್ಲಿ ಬಣ್ಣ ಬಣ್ಣದ ಚಿತ್ತಾರ

ಶಿಥಿಲಾವಸ್ಥೆಯಲ್ಲಿದ್ದ ದುಗ್ಗಜ್ಜರಕಟ್ಟೆ ಶಾಲೆಗೆ ದುರಸ್ತಿ ಭಾಗ್ಯ

Team Udayavani, Apr 28, 2019, 6:06 AM IST

27

ಕೈರಂಗಳ: “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನೆಮಾ ಮೂಲಕ ಸುದ್ದಿ ಮಾಡಿದ ಶಿಥಿಲಾವಸ್ಥೆಯಲ್ಲಿದ್ದ ಬಂಟ್ವಾಳ ತಾಲೂಕಿನ ಕೈರಂಗಳ ಗ್ರಾಮದ ದುಗ್ಗಜ್ಜರ ಕಟ್ಟೆಯ ಖಾಸಗಿ ಅನುದಾನಿತ ಶಾಲೆ ಈಗ ಹೊಸ ರೂಪ ಪಡೆಯುತ್ತಿದೆ.

ಕಾಸರಗೋಡು ಕನ್ನಡ ಶಾಲೆಗಳ ಸ್ಥಿತಿಗತಿ ಬಗ್ಗೆ ರಿಷಬ್‌ ಶೆಟ್ಟಿ ನಿರ್ದೇಶನದಲ್ಲಿ ನಿರ್ಮಾಣಗೊಂಡ ಈ ಚಲನಚಿತ್ರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಯನ್ನು ಬರೆದಿದ್ದು, ಸಿನೆಮಾದ ಪ್ರಮುಖ ಕಥಾಭಾಗ ದುಗ್ಗಜ್ಜರಕಟ್ಟೆಯ ಖಾಸಗಿ ಅನುದಾನಿತ ಶಾಲೆ ಚಿತ್ರೀಕರಣಗೊಂಡಿತ್ತು. ಸುಮಾರು 118 ವರ್ಷಗಳ ಇತಿಹಾಸ ವಿರುವ ಈ ಶಾಲೆಯಲ್ಲಿ ಚಿತ್ರೀಕರಣ ನಡೆಸಿದ ಸಿನೆಮಾ ಯಶಸ್ಸಿನ ಬಳಿಕ ನಿರಂತರವಾಗಿ ರಿಷಭ್‌ ಶೆಟ್ಟಿ ಮತ್ತು ತಂಡ ಈ ಶಾಲೆಯ ಸಂಪರ್ಕದಲ್ಲಿದ್ದುಕೊಂಡು, ಅಭಿವೃದ್ಧಿಗೆ ಕೊಡುಗೆಯನ್ನು ನೀಡುತ್ತಾ ಬಂದಿದ್ದರು. ಶಿಥಿಲಾವಸ್ಥೆಯಲ್ಲಿದ್ದ ಶಾಲೆಯ ಛಾವಣಿ ಮರು ನಿರ್ಮಾಣ ಕಾರ್ಯ ಮುಗಿದ ಬಳಿಕ ಈಗ ಶಾಲೆಯ ಗೋಡೆಗಳಲ್ಲಿ ಬಣ್ಣಬಣ್ಣದ ಚಿತ್ತಾರ ಮೂಡಿ ಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಕಳೆದ 25 ದಿನಗಳಿಂದ ಶಾಲೆಯ ಗೋಡೆಗಳಲ್ಲಿ ಬಣ್ಣದ ಚಿತ್ತಾರಗಳನ್ನು ಮೂಡಿಸುವ ಕಾಯಕದಲ್ಲಿ ಮಂಗಳೂರಿನ ಬೋಗನ್‌ ಆರ್ಟ್‌ ವಿಲ್ಲಾದ ಆರು ಮಂದಿ ಕಲಾವಿದರು ತೊಡಗಿಸಿಕೊಂಡಿದ್ದಾರೆ.

ತುಳುನಾಡಿನ ಸಂಸ್ಕೃತಿ
ತನ್ಹಾ ಬೋಗನ್‌ ನೇತೃತ್ವದಲ್ಲಿ ತುಳುನಾಡಿನ ಸಂಸ್ಕೃತಿ, ಜಾನಪದ ಕಲೆಗಳು, ಆಟೋಟ, ಕೃಷಿ ಪರಂಪರೆ, ತುಳುನಾಡಿನ ವೀರರಾದ ಕೋಟಿ ಚೆನ್ನಯ, ಪರಶುರಾಮ, ವೀರರಾಣಿ ಅಬ್ಬಕ್ಕ, ದೈವಾರಾಧನೆ, ಯಕ್ಷಗಾನ ಕಂಬಳ ಸೇರಿದಂತೆ ಸಂಪೂರ್ಣ ತುಳುನಾಡಿನ ಸಂಸ್ಕೃತಿ ಸಾರುವ ಚಿತ್ತಾರಗಳನ್ನು ಗೋಡೆ ಗಳಲ್ಲಿ ಪಡಿ ಮೂಡಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯನ್ನು ಮೂಡಿಸುವ ನಿಟ್ಟಿನಲ್ಲಿ ಭಾರತೀಯ ಭೂಸೇನೆ, ವಾಯುಸೇನೆ, ನೌಕಾದಳಕ್ಕೆ ಸಂಬಂಧಿಸಿದ ಚಿತ್ತಾರಗಳನ್ನೂ ಬರೆಯಲಾಗುತ್ತಿದೆ.

ಶಾಲೆಯ ಗೋಡೆಗಳಲ್ಲಿ ಮೂಡಿಸಿರುವ ಚಿತ್ತಾರಗಳು ಶಾಶ್ವತವಾಗಿ ಉಳಿಯುವ ನಿಟ್ಟಿನಲ್ಲಿ ಗುಣಮಟ್ಟದ ಪೈಂಟ್‌ ಬಳಸಲಾಗಿದೆ. ಮತದಾನದ ಸಂದರ್ಭದಲ್ಲಿ ಚಿತ್ರಗಳ ಮೇಲೆ ಅಂಟಿಸಿ ರುವ ನೋಟಿಸ್‌ ತೆಗೆಯುವಾಗ ಹಾನಿಯಾಗಿತ್ತು. ಹಾನಿಗೀಡಾದ ಚಿತ್ರಗಳನ್ನು ಸರಿಪಡಿಸಿದ್ದು, ಮುಂದಿನ ಒಂದು ವಾರ ದೊಳಗೆ ಕಾರ್ಯ ಪೂರ್ಣಗೊಳ್ಳಲಿದೆ.

ಹೊಸತನದ ಪರಿಕಲ್ಪನೆ
“ರಿಷಭ್‌ ನನ್ನ ಗೆಳೆಯರಾಗಿದ್ದವರು. ಶಾಲೆಯಲ್ಲಿ ಹೊಸತನದ ಪರಿಕಲ್ಪನೆಯಲ್ಲಿ ಕಲೆಯನ್ನು ಮೂಡಿಸುವ ವಿಚಾರದಲ್ಲಿ ನನ್ನಲ್ಲಿ ಮಾತನಾಡಿದ್ದರು. ಈ ನಿಟ್ಟಿನಲ್ಲಿ ತುಳುನಾಡಿನ ಕಲೆಯನ್ನು ಮೂಡಿಸುವ ನನ್ನ ಪರಿಕಲ್ಪನೆಯನ್ನು ಅವರಿಗೆ ವಿವರಿಸಿದ್ದು, ಇದರಡಿ ಶಾಲೆಯ ಗೋಡೆಯಲ್ಲಿ ಚಿತ್ತಾರ ಮೂಡಿಸಲು ಒಪ್ಪಿಗೆ ನೀಡಿದರು. ಈಗ ರಿಷಭ್‌ ಶೆಟ್ಟಿ ಗೋಡೆಯಲ್ಲಿ ಮೂಡಿರುವ ಚಿತ್ತಾರವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚುವ ಮೂಲಕ ಶಾಲೆಗೂ, ಕಲೆಯನ್ನು ಮೂಡಿಸಿದ ಕಲಾವಿದರಿಗೂ ಉತ್ತೇಜನ ನೀಡಿದ್ದಾರೆ’ ಎನ್ನುತ್ತಾರೆ ಟೀಮ್‌ ಬೋಗನ್‌ ವಿಲ್ಲಾದ ಕಲಾವಿದೆ ತನ್ಹಾ.

ಹೊಸ ಶಾಲೆ, ಹೊಸ ಕಲಿಕೆ
“ಸರಕಾರಿ ಹಿ.ಪ್ರಾ. ಶಾಲೆ ಕಾಸರಗೋಡು ಚಿತ್ರದ ಕೊನೆಯಲ್ಲಿ ಮಕ್ಕಳೇ ಶಾಲೆ ಉಳಿಸಿಕೊಂಡ, ರಾಮಣ್ಣ ರೈ ಶಾಲೆಗೆ ಪೈಂಟ್‌ ಮಾಡಿಸಿ ಹೊಸ ಬೋರ್ಡ್‌ ಕೊಡುಗೆ ನೀಡಿದ್ದು ನೆನಪಿರಬಹುದು. ಆದರೆ ಸರಿಯಾದ ಸೌಲಭ್ಯಗಳಿರದೆ ಹೆಚ್ಚು ಕಡಿಮೆ ಕಥೆಯಲ್ಲಿನ ಶಾಲೆಯದ್ದೇ ಸ್ಥಿತಿಯಲ್ಲಿದ್ದ ಚಿತ್ರೀಕರಣಕ್ಕೆ ಬಳಸಿದ್ದ ಕೈರಂಗಳ ಶಾಲೆಗೂ ಏನಾದರೂ ಪುಟ್ಟ ಕೊಡುಗೆಯನ್ನು ನೀಡಬೇಕು ಎಂದು ತೀರ್ಮಾನಿಸಿ ಸರಕಾರಿ ಶಾಲೆ ಉಳಿಸಿ ಕಾರ್ಯಕ್ರಮದಡಿ ಅದರ ದುರಸ್ತಿ ಕಾರ್ಯಕ್ಕೆ ಕೈ ಹಾಕಿದೆವು. ಈಗ ದುರಸ್ತಿ ಕಾರ್ಯ ಮುಗಿದಿದ್ದು, ಚಿತ್ತಾರ ಬಿಡಿಸುವ ಕಾರ್ಯ ನಡೆಯುತ್ತಿದೆ. ರಜೆ ಮುಗಿಸಿ ಬರುವ ಮಕ್ಕಳಿಗೆ ಹೊಸ ವರ್ಷಕ್ಕೆ ಹೊಸ ಶಾಲೆ, ಹೊಸ ಕಲಿಕೆ, ಹೊಸ ಜೀವನವನ್ನು ನೀಡುವ ಪ್ರಯತ್ನದಲ್ಲಿ ಒಂದು ಹೆಜ್ಜೆ ಇಟ್ಟಿದ್ದೇವೆ’ ಎಂಬುದಾಗಿ ಟ್ವಿಟ್ಟರ್‌ನಲ್ಲಿ ರಿಷಭ್‌ ಶೆಟ್ಟಿ ಬರೆದು ಕೊಂಡಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.