ಬರಲಿದೆ “ಸವಿರುಚಿ ಕೈತುತ್ತು’ ಸಂಚಾರಿ ಕ್ಯಾಂಟೀನ್‌ 


Team Udayavani, Oct 5, 2017, 11:32 AM IST

05-21.jpg

ಮಂಗಳೂರು: ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಊಟ-ತಿಂಡಿ ನೀಡುವ ಉದ್ದೇಶದಿಂದ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರಂಭವಾದ ಇಂದಿರಾ ಕ್ಯಾಂಟೀನ್‌ ಮಾದರಿಯಲ್ಲೇ ಪ್ರತಿ ಜಿಲ್ಲೆಯಲ್ಲೂ ಇದೇ ರೀತಿ ಸಂಚಾರಿ ಕ್ಯಾಂಟೀನ್‌ಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. 

“ಸವಿರುಚಿ ಕೈತುತ್ತು’ ಹೆಸರಲ್ಲಿ ಈ ಕ್ಯಾಂಟೀನ್‌ಗಳು ಇರಲಿದ್ದು, ನ.19ರಿಂದ ಎಲ್ಲ 30 ಜಿಲ್ಲೆಗಳಲ್ಲಿ ಈ ಸಂಚಾರಿ ಕ್ಯಾಂಟೀನ್‌ ಶುರುವಾಗಲಿವೆ. ಕ್ಯಾಂಟೀನ್‌ ಜವಾಬ್ದಾರಿಯನ್ನು ಆಯಾ ಜಿಲ್ಲೆಯ ಸ್ತ್ರೀ ಶಕ್ತಿ ಒಕ್ಕೂಟಗಳಿಗೆ ವಹಿಸಿ ಕೊಡಲಾಗಿದೆ. ಈ ಬಗ್ಗೆ ಸೂಚನೆ ನೀಡಲಾಗಿದ್ದು, ಸಾಲ ಪಡೆದು ಕ್ಯಾಂಟೀನ್‌ ನಡೆಸಲು ಸಿದ್ಧವಾಗಿರುವಂತೆ ತಿಳಿಸಲಾಗಿದೆ. ಆರಂಭದಲ್ಲಿ ಜಿಲ್ಲೆಯಲ್ಲಿ ಒಂದು ಸಂಚಾರಿ ಕ್ಯಾಂಟೀನ್‌ ಪ್ರಾರಂಭವಾಗಲಿದ್ದು, ಮುಂದೆ ಕ್ಯಾಂಟೀನ್‌ ಅನ್ನು ಮತ್ತಷ್ಟು ಕಡೆಗಳಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ. 

10 ಲಕ್ಷ ರೂ. ಸಾಲ ಸೌಲಭ್ಯ 
ಸಂಚಾರಿ ಕ್ಯಾಂಟೀನ್‌ ಪ್ರಾರಂಭಿಸುವುದಕ್ಕೆ ಅರ್ಹ ಸ್ತ್ರೀಶಕ್ತಿ ಗುಂಪಿಗೆ 10 ಲಕ್ಷ ರೂ. ಸಾಲ ಸೌಲಭ್ಯ ದೊರೆಯಲಿದೆ. ಈ ಸಾಲ ಯೋಜನೆಗೆ ಯಾವುದೇ ಭದ್ರತೆ ಒದಗಿಸುವ ಅಗತ್ಯವಿಲ್ಲ. ಅರ್ಜಿಯನ್ನು ಸ್ತ್ರೀ ಶಕ್ತಿ ಒಕ್ಕೂಟಗಳಿಂದ ಜಿಲ್ಲೆಯ ಉಪ ನಿರ್ದೇಶಕರು/ಜಿಲ್ಲಾ ವ್ಯವಸ್ಥಾಪಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಲಕ ಪಡೆಯಬಹುದು. ಇಲಾಖೆಯವರು ಶಿಫಾರಸ್ಸು ಮಾಡಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಕ್ಕೆ ಸಲ್ಲಿಸಿದರೆ, ಆಯ್ಕೆಯಾಗುವ ಸ್ತ್ರೀ ಶಕ್ತಿ ಒಕ್ಕೂಟಗಳಿಗೆ, ನಿಗಮದಿಂದ ಮಂಜೂರಾತಿ ಆದೇಶ ನೀಡಿ ಸಾಲವನ್ನು ನೇರವಾಗಿ ಆನ್‌ಲೈನ್‌ ಮುಖಾಂತರ ಬಿಡುಗಡೆ ಮಾಡಲಾಗುತ್ತದೆ. 

5 ಲಕ್ಷ ರೂ.ಗಳ ಲಘು  ವಾಹನ
ಸಾಲದ ಮೊತ್ತ ಸ್ವೀಕರಿಸಿದ ಸ್ತ್ರೀಶಕ್ತಿ ಒಕ್ಕೂಟ ಕ್ಯಾಂಟೀನ್‌ಗಾಗಿ 5 ಲಕ್ಷ ರೂ.ಗಳ ಮಾರ್ಪಾಡುಗೊಳಿಸಿದ ಲಘು ವಾಹನ ಪಡೆದು ನೋಂದಣಿ ಮಾಡಬೇಕು. ರಾಜ್ಯವ್ಯಾಪಿ ವಾಹನದ ವಿನ್ಯಾಸ ಒಂದೇ ರೀತಿಯದ್ದಾಗಿರುತ್ತದೆ. ಅಡುಗೆ ಸಲಕರಣೆಗಳು, ಮಡಚುವ ಟೇಬಲ್‌, ಕುರ್ಚಿ, ಆಹಾರ ಸಿದ್ಧಪಡಿಸಲು ಸಾಮಗ್ರಿಗಳನ್ನು ಖರೀದಿಸಬೇಕು. 

ಮಹಿಳೆಯರೇ ಚಾಲಕರು
ಬೇಯಿಸಿದ ಆಹಾರ ಪದಾರ್ಥಗಳ ಮಾರಾಟಕ್ಕಾಗಿ ಆಯಾ ಜಿಲ್ಲೆಯಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪರವಾನಿಗೆ ಹೊಂದಿರಬೇಕು.  ಕ್ಯಾಂಟೀನ್‌ ವಾಹನ ಚಾಲನೆಗೆ ಅನುಭವಿ ಮಹಿಳಾ ಚಾಲಕರನ್ನು ನೇಮಿಸಿಕೊಳ್ಳಬೇಕು. ಸಾಲ ಮಂಜೂರಾದ 3 ತಿಂಗಳೊಳಗೆ ಸವಿರುಚಿ ಮೊಬೈಲ್‌ ಕ್ಯಾಂಟೀನ್‌ ಸ್ಥಾಪಿಸಬೇಕು. ಎಲ್ಲಾ ಕ್ಯಾಂಟೀನಲ್ಲೂ ಮಹಿಳೆಯರು ಕಡ್ಡಾಯವಾಗಿ ಸಮವಸ್ತ್ರ, ಕ್ಯಾಪ್‌ ಹಾಗೂ ಬ್ಯಾಡ್ಜ್ಗಳನ್ನು ಧರಿಸಿರುತ್ತಾರೆ. ಪ್ರತಿ ಕ್ಯಾಂಟೀನ್‌ಗಳು ಪ್ರತ್ಯೇಕ ಹೆಸರಿನೊಂದಿಗೆ  (ಉದಾ:ಕಾವೇರಿ, ನೇತ್ರಾವತಿ) ಇರಲಿವೆ. 

ಬಡ್ಡಿ ರಹಿತ ಸಾಲ; ಪ್ರತಿ ತಿಂಗಳು ಮರುಪಾವತಿ
ಸಾಲ ಮಂಜೂರಾದ 6 ತಿಂಗಳ ನಂತರದ ಮುಂದಿನ 54 ತಿಂಗಳುಗಳಲ್ಲಿ ಪ್ರತಿ ತಿಂಗಳಿಗೆ 18,520 ರೂ.ಗಳಂತೆ 10 ಲಕ್ಷ ರೂ.ಗಳನ್ನು ಬಡ್ಡಿರಹಿತವಾಗಿ ಸಾಲ ಮರುಪಾವತಿ ಮಾಡಬೇಕಾಗುತ್ತದೆ. ಪ್ರತಿ ತಿಂಗಳಿನ 10ನೇ ತಾರೀಕಿನೊಳಗೆ ಸಾಲ ಮರುಪಾವತಿ ಕಂತನ್ನು ನೇರವಾಗಿ ಆಯಾ ಜಿಲ್ಲೆಯ ಇಲಾಖೆಗೆ ಡಿಡಿ ಅಥವಾ ಚೆಕ್‌ ಮೂಲಕ ಪಾವತಿಸಬೇಕು.  

ಸಾಲ ಪಡೆಯಲು ಅರ್ಹತೆ
ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟಗಳು ಬ್ಯಾಂಕ್‌ ಖಾತೆಯನ್ನು ಹೊಂದಿದ್ದು, ಚಾಲ್ತಿಯಲ್ಲಿರಬೇಕು. ಈ ಒಕ್ಕೂಟಗಳು ವ್ಯವಸ್ಥಿತ ರೀತಿಯಲ್ಲಿ ದಾಖಲೆಗಳನ್ನು ನಿರ್ವಹಿಸುತ್ತಿರಬೇಕು. ಸ್ತ್ರೀಶಕ್ತಿ ಸಮೃದ್ಧಿ ಯೋಜನೆಯಡಿ ಜಿಲ್ಲಾ ಮಹಿಳಾ ಸ್ತ್ರೀಶಕ್ತಿ ಒಕ್ಕೂಟ ನೋಂದಣಿಯಾಗಿರುವ ಪ್ರತಿಯು ಆವಶ್ಯಕ. ಜತೆಗೆ ಸಂಚಾರಿ ಕ್ಯಾಂಟೀನ್‌ ನಡೆಸಲು ಮಹಾನಗರ ಪಾಲಿಕೆ, ಪುರಸಭೆಯಿಂದ ಪರವಾನಿಗೆ ಪತ್ರ ಪಡೆದಿರಬೇಕು. ಸಾಲ ಮರುಪಾವತಿ ಕುರಿತು ಸದಸ್ಯರೆಲ್ಲರು ಸಹಿ ಮಾಡಿದ 50 ರೂ. ಛಾಪಾ ಕಾಗದದಲ್ಲಿ ಕರಾರು ಪತ್ರ ಸಲ್ಲಿಸಬೇಕು. ಬ್ಯಾಂಕ್‌ ಖಾತೆಯ ವಿವರಗಳು, ಕ್ಯಾಂಟೀನ್‌ ಘಟಕದ ಯೋಜನಾ ವರದಿ ಸೇರಿದಂತೆ ಇತರ ಅಗತ್ಯ ದಾಖಲೆಗಳು ಅಗತ್ಯ.

ಕ್ಯಾಂಟೀನಲ್ಲಿ ಏನೇನಿರುತ್ತೆ? 
ತಿಂಡಿ, ಚಾ, ಕಾಫಿ, ಮಜ್ಜಿಗೆ, ಊಟ, ಹಣ್ಣಿನ ರಸ, ಸ್ಥಳೀಯ ಖಾದ್ಯಗಳು ಇರಲಿವೆ. ಇವೆಲ್ಲವನ್ನು ತಯಾರಿಸಿ, ಸಾರ್ವಜನಿಕರಿಗೆ ಅನುಕೂಲಕರವಾದ ಸ್ಥಳಗಳಲ್ಲಿ ಮಾರಾಟ ಮಾಡಲಾಗುತ್ತದೆ. ಜಿಲ್ಲೆಯ ಜನನಿಬಿಡ ಪ್ರದೇಶಗಳು, ಪ್ರಮುಖ ಸರಕಾರಿ ಕಚೇರಿಗಳು, ನ್ಯಾಯಾಲಯಗಳ ಆವರಣ, ಪ್ರಮುಖ ಸಂದರ್ಭಗಳಲ್ಲಿ ನಡೆಯುವ ಸಮ್ಮೇಳನ, ಉತ್ಸವಗಳಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಕಡ್ಡಾಯ ಸ್ಥಳ ನಿಗದಿಗೊಳಿಸಲಾಗುತ್ತದೆ. ಆಯಾ ಪ್ರದೇಶದ ಒಂದು ಪ್ರಾದೇಶಿಕ ಖಾದ್ಯವನ್ನು ಮಾರಾಟ ಮಾಡುವುದು ಹಾಗೂ ಅದರೊಂದಿಗೆ ಬೇಡಿಕೆಯಲ್ಲಿರುವ ವಿವಿಧ ತಿಂಡಿ ಊಟ ಸಿದ್ಧಪಡಿಸಲಾಗುತ್ತದೆ. ತಿಂಡಿ, ಊಟದ ಮೆನು ಮತ್ತು ದರಪಟ್ಟಿಯನ್ನು ಸವಿರುಚಿ ಕ್ಯಾಂಟೀನ್‌ನಲ್ಲಿ ಪ್ರತಿದಿನ ಪ್ರಚುರಪಡಿಸಲಾಗುತ್ತದೆ. ವ್ಯವಹಾರ ವೃದ್ಧಿ ಬಳಿಕ ಸಾಂಬಾರು ಪುಡಿ, ಮಸಾಲೆ ಪುಡಿ, ಚಕ್ಕುಲಿ, ಉಂಡೆ, ಸ್ಥಳೀಯ ತಿನಿಸುಗಳ ಮಾರಾಟಕ್ಕೂ ಅವಕಾಶವಿದೆ. ಇನ್ನು ಕ್ಯಾಂಟೀನ್‌ ಕಸ ವಿಲೇವಾರಿಗೂ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. 

ಸವಿರುಚಿ ಕೈತುತ್ತು ಸಂಚಾರಿ ಕ್ಯಾಂಟೀನ್‌ ನ.19ರಿಂದ ವಿಧ್ಯಕ್ತವಾಗಿ ಆರಂಭವಾಗಲಿದೆ. ಪ್ರತಿ ಜಿಲ್ಲೆಯಲ್ಲಿ ತಲಾ ಒಂದೊಂದು ಕ್ಯಾಂಟೀನ್‌ ಮೊದಲಿಗೆ ಚಾಲನೆಗೊಳ್ಳಲಿದ್ದು, ಬಳಿಕ ಪ್ರತಿ ತಾಲೂಕಿನಲ್ಲಿ ಈ ಸಂಚಾರಿ ಕ್ಯಾಂಟೀನ್‌ ಆರಂಭಿಸಲಾಗುವುದು.  
ಭಾರತೀ ಶಂಕರ್‌, ಅಧ್ಯಕ್ಷರು,  ರಾಜ್ಯ ಮಹಿಳಾ ಅಭಿವೃದ್ಧಿ  ನಿಗಮ   

ದಿನೇಶ್‌ ಇರಾ

ಟಾಪ್ ನ್ಯೂಸ್

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.