ಕೋಮು ಹಿಂಸೆ ಆಧರಿತ ರಾಜಕಾರಣ ನಿರ್ಮೂಲನೆ: ಯೆಚೂರಿ


Team Udayavani, Jan 3, 2018, 12:28 PM IST

03-28.jpg

ಮೂಡಬಿದಿರೆ: ಕೋಮು ಪ್ರಚೋದಿತ ಹಿಂಸೆಯ ಆಧಾರದಲ್ಲಿ ರಾಜಕಾರಣ ನಡೆಸುವುದು ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಆರೆಸ್ಸೆಸ್‌ ಪ್ರೇರಿತ ಬಿಜೆಪಿ ಈ ದೇಶವನ್ನು ಕೋಮು ಆಧಾರದಲ್ಲಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಆಪಾದಿಸಿದರು.

ಮೂಡಬಿದಿರೆಯಲ್ಲಿ ಮಂಗಳವಾರದಿಂದ 4 ದಿನ ನಡೆಯಲಿ ರುವ ಸಿಪಿಐನ 22ನೇ ರಾಜ್ಯ ಸಮ್ಮೇಳನಕ್ಕೆ ಮುನ್ನ ಸ್ವರಾಜ್ಯ ಮೈದಾನದಲ್ಲಿ ನಡೆದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಮಗಿಂದು ಬೇಕಾಗಿರುವುದು ಶಾಂತಿ, ಸ್ಥಿರತೆ, ಏಕತೆ. ಕೆಂಬಾವುಟ ಹಿಡಿದ ಸಿಪಿಐ ಈ ದೇಶವನ್ನು ಯಾರೂ ಒಡೆದು ಆಳಲು ಬಿಡುವುದಿಲ್ಲ ಎಂದು ಘೋಷಿಸಿದರು. ಬಿಜೆಪಿಯು ಬಂಡವಾಳಶಾಹಿಗಳು ಮತ್ತು ಪಕ್ಷದ ಸಚಿವರು ಹಾಗೂ ಸಂಬಂಧಿಕರ ಹೆಸರು ಅಂಟಿಕೊಂಡಿರುವ ಅದೆಷ್ಟೋ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೆ ಒಳಪಡಿಸಿಲ್ಲ. ದೇಶದ ಸಂಪನ್ಮೂಲಗಳನ್ನು ಸೂರೆಗೊಳ್ಳುವ ಮಂದಿಯನ್ನು ತನಿಖೆಗೆ ಒಳಪಡಿಸಬೇಕಾಗಿದೆ ಎಂದು ಯೆಚೂರಿ ಆಗ್ರಹಿಸಿದರು.

ಕಾರ್ಯದರ್ಶಿ ಮಂಡಳಿ ಸದಸ್ಯ ಜೆ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜಿ.ವಿ. ರಾಮರೆಡ್ಡಿ, ಜಿ.ಎನ್‌. ನಾಗರಾಜ್‌, ನಿತ್ಯಾನಂದ ಸ್ವಾಮಿ, ಕೆ. ಶಂಕರ್‌, ಸಿಐಟಿಯು ರಾಜ್ಯಾಧ್ಯಕ್ಷ ಎಸ್‌. ವರಲಕ್ಷ್ಮೀ, ಯು. ಬಸವರಾಜ್‌, ವಸಂತ ಆಚಾರಿ, ಮೀನಾಕ್ಷಿ ಸುಂದರಂ, ಕೆ.ಎನ್‌. ಉಮೇಶ್‌, ಮುನಿವೆಂಕಟಪ್ಪ, ಸ್ವಾಗತ ಸಮಿತಿ ಅಧ್ಯಕ್ಷ ಕೆ.ಆರ್‌. ಶ್ರೀಯಾನ್‌, ಪ್ರ. ಕಾರ್ಯದರ್ಶಿ ಕೆ. ಯಾದವ ಶೆಟ್ಟಿ, ಉಪಾಧ್ಯಕ್ಷೆ, ಪುರಸಭಾ ಸದಸ್ಯೆ ರಮಣಿ ವೇದಿಕೆಯಲ್ಲಿದ್ದರು. ಮೂರು ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಅಧ್ಯಕ್ಷರ ಆಂಗ್ಲ ಭಾಷಣವನ್ನು ಕೆ. ಎನ್‌. ಉಮೇಶ್‌ ಕನ್ನಡಕ್ಕೆ ಭಾಷಾಂತರಿಸಿದರು. ಕೆ. ಯಾದವ ಶೆಟ್ಟಿ ಸ್ವಾಗತಿಸಿ, ಮುನೀರ್‌ ಕಾಟಿಪಳ್ಳ ನಿರೂಪಿಸಿದರು.

ನೂತನ ರಾಮಾಶ್ವಮೇಧ
ರಾಮಾಶ್ವಮೇಧದಲ್ಲಿ ಶ್ರೀರಾಮ ಶ್ವೇತವರ್ಣದ ಅಶ್ವಗಳನ್ನು ಕಳುಹಿಸಿ ಲೋಕದ ರಾಜರಿಗೆ ಸವಾಲು ಒಡ್ಡಿದಾಗ ಆ ಸವಾಲನ್ನು ಇದಿರಿಸಿದವರು ರಾಮನ ಪುತ್ರರಾದ ಕುಶ ಲವರು. ಈಗ ಚುನಾವಣೆಯ ಮೇಲೆ ಚುನಾ ವಣೆಯನ್ನು ಗೆಲ್ಲುತ್ತಿರುವ ಮೋದಿ-ಅಮಿತ್‌ ಷಾ ಜೋಡಿ ಬಿಜೆಪಿ-ಆರೆಸ್ಸೆಸ್‌ ಅಶ್ವಮೇಧದ ಮೂಲಕ ದೇಶವನ್ನು ನಾಶ ಮಾಡಲು ಹೊರಟಿದ್ದಾರೆ. ಇವರನ್ನು ಕೆಂಬಾವುಟದ ಕತ್ತಿ ಮತ್ತು ಸುತ್ತಿಗೆಗಳೆಂಬ ಕುಶ ಲವರ ಮೂಲಕ ಇದಿರಿಸಲು ಸನ್ನದ್ಧರಾಗಿದ್ದೇವೆ ಎಂದು ಯೆಚೂರಿ ಹೇಳಿದರು.

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.