ಸಮುದಾಯ ಬಾನುಲಿ ಕೇಂದ್ರ ದೇಸೀ ಸಂಸ್ಕೃತಿ, ಸಂಸ್ಕಾರಗಳ ಸಾಕ್ಷಾತಾರ 


Team Udayavani, Jan 12, 2018, 11:59 AM IST

12-Jan-13.jpg

ನಗರ: ಮಾಧ್ಯಮಗಳಲ್ಲಿ ಟಿಆರ್‌ಪಿ ಹಂಬಲದ ಮಧ್ಯೆ ಗ್ರಾಮೀಣ ಬದುಕು, ಸಂಸ್ಕೃತಿ ಹಾಗೂ ಇಲ್ಲಿನ ಪ್ರತಿಭಾವಂತರ ಅರಿವೇ ಆಗುತ್ತಿಲ್ಲ. ಆದರೆ ದೇಸೀ ಸಂಸ್ಕೃತಿ, ಸಂಸ್ಕಾರಗಳ ಸಾಕ್ಷಾತ್ಕಾರ ಸಮುದಾಯ ಬಾನುಲಿ ಕೇಂದ್ರಗಳಲ್ಲಾಗುತ್ತಿದೆ. ಸಮುದಾಯ ಬಾನುಲಿ ಕೇಂದ್ರದ ಕಾರಣದಿಂದಾಗಿಯೇ ನಮ್ಮ ನೆಲೆಗಟ್ಟು ಉಳಿದುಕೊಳ್ಳಲು ಸಾಧ್ಯವಿದೆ ಎಂದು ಹಿರಿಯ ಪತ್ರಕರ್ತ ರವಿ ಹೆಗಡೆ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ 90.8 ಎಫ್‌.ಎಂ. ಸಮುದಾಯ ಬಾನುಲಿ ಕೇಂದ್ರದ ಆಶ್ರಯದಲ್ಲಿ ಗುರುವಾರ ಆಯೋಜಿಸಲಾದ ಅಖಿಲ ಕರ್ನಾಟಕ ಸಮುದಾಯ ಬಾನುಲಿ ಸಮ್ಮೇಳನವನ್ನು ಉದ್ಘಾಟಿಸಿದರು.

ಕಮ್ಯೂನಿಟಿ ಅಂದಾಕ್ಷಣ ಜಾತಿ, ಧರ್ಮದ ಹಿನ್ನೆಲೆಯ ಯೋಚನೆ ಒಂದೆಡೆಯಾದರೆ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಕಮ್ಯೂನಿಟಿಯ ಯೋಚನೆ ಇನ್ನೊಂದೆಡೆ ಇದೆ. ಆದರೆ ಇತ್ತೀಚೆಗೆ ಕಮ್ಯೂನಿಟಿ ರೇಡಿಯೋದ ಬಗೆಗೂ ಆಲೋಚನೆಗಳು ಹರಿಯಲಾರಂಭಿಸಿವೆ. ರೇಡಿಯೋಗೆ ಭವಿಷ್ಯವೇ ಇಲ್ಲ ಎನ್ನುವಂತಹ ಸ್ಥಿತಿಯಲ್ಲಿ ಖಾಸಗಿ ಹಾಗೂ ಸಮುದಾಯ ಬಾನುಲಿಗಳು ಪ್ರಸಿದ್ಧಿಗೆ ಬರಲಾರಂಭಿಸಿದವು ಎಂದು ಅವರು ಅಭಿಪ್ರಾಯಪಟ್ಟರು.

ಮೌಲ್ಯ ಸಾಧ್ಯವಿದೆ
ಪತ್ರಿಕೋದ್ಯಮ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕ ಸ್ವತಃ ಪತ್ರಕರ್ತರನ್ನೇ ಕಾಡಲು ಆರಂಭಿಸಿದೆ. ಆದರೆ ಯಾವುದೋ ಒಂದು ವಾಹಿನಿ ಅಥವಾ ಪತ್ರಿಕೆ ತಾನು ಮೌಲ್ಯಯುತವಾದದ್ದನ್ನಷ್ಟೇ ಪ್ರಕಟಿಸುತ್ತೇನೆಂದು ಏಕಾಂಗಿಯಾಗಿ ಶಸ್ತ್ರತ್ಯಾಗ ಮಾಡಿದರೆ ಉಪಯೋಗವಿಲ್ಲ. ಎಲ್ಲ ಮಾಧ್ಯಮಗಳು ಈ ಹಿನ್ನೆಲೆಯಲ್ಲಿ ಕಟಿಬದ್ಧವಾಗಬೇಕು ಎಂದರು.

ಅಂಚೆ ಹಾಗೂ ಬಾನುಲಿ ಬಾಂಧವ್ಯ
ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗವು ರೂಪಿಸಿದ ರೇಡಿಯೋ ಪಾಂಚಜನ್ಯದ ಸಾಕ್ಷ್ಯಚಿತ್ರವನ್ನು ಲೋಕಾರ್ಪಣೆಗೊಳಿಸಿದ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ದೇಶದಲ್ಲಿ ವೈಯಕ್ತಿಕ ಸಂಪರ್ಕಕ್ಕಾಗಿ ಅಂಚೆ ವ್ಯವಸ್ಥೆ ಹಾಗೂ ಸಮುದಾಯ ಸಂಪರ್ಕಕ್ಕಾಗಿ ಬಾನುಲಿ ಕೇಂದ್ರಗಳು ಮಾತ್ರ ಅಸ್ತಿತ್ವದಲ್ಲಿದ್ದವು. ಅನಂತರ ತಂತ್ರಜ್ಞಾನದ ಬೆಳವಣಿಗೆಯಾದರೂ ರೇಡಿಯೋ ಪ್ರಾಮುಖ್ಯವನ್ನು ಉಳಿಸಿಕೊಂಡಿದೆ. ಗ್ರಾಮೀಣವಾಗಿ ಸಮುದಾಯ ಬಾನುಲಿಯ ಬೆಳವಣಿಗೆಯ ಮಧ್ಯೆ ದೇಶದ ಪ್ರಧಾನಿಯವರು ಅಂಚೆ ವ್ಯವಸ್ಥೆಗೂ ಬಲನೀಡಿದ್ದಾರೆ ಎಂದು ಅಭಿಪ್ರಾಯಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಿನೆಮಾ ಛಾಯಾಚಿತ್ರಗಾರ ಎಚ್‌.ಎಂ. ರಾಮಚಂದ್ರ, ಇಂದು ಸಂವಹನದ ವ್ಯವಸ್ಥೆಯೇ ಬದಲಾಗಿ ಕೇಳುಗನ, ನೋಡುಗನ ಮೇಲೆ ವಿಷಯವನ್ನು ಹೇರುವುದು ಕಾಣುತ್ತಿದೆ. ಈ ಸಂದರ್ಭದಲ್ಲಿ ಸಮುದಾಯ ಬಾನುಲಿ ಕೇಂದ್ರಗಳು ನಿಜಾರ್ಥದಲ್ಲಿ ಸಂವಹನವನ್ನು ಸುಂದರವಾಗಿ ನಡೆಸಿಕೊಡುತ್ತಿವೆ ಎಂದರು.

ಸಮ್ಮಾನ
ರೇಡಿಯೋ ಪಾಂಚಜನ್ಯದ ಸ್ಟುಡಿಯೋ ಹಾಗೂ ಕಾರ್ಯಕ್ರಮ ಸಂಯೋಜನೆಗಾಗಿ ಶ್ರಮಿಸಿದ ನರಸಿಂಹ ಸ್ವಾಮಿ ಹಾಗೂ ಶ್ಯಾಮ ಭಟ್‌ ಅವರನ್ನು ಸಮ್ಮಾನಿಸಲಾಯಿತು. ರೇಡಿಯೋ ಪಾಂಚಜನ್ಯದಲ್ಲಿ ಮುಂದಿನ ದಿನಗಳಲ್ಲಿ ಪ್ರಸಾರಗೊಳ್ಳಲಿರುವ ಸಾಹಿತ್ಯ ಮತ್ತು ಯಕ್ಷಗಾನಕ್ಕೆ ಸಂಬಂಧಿಸಿದ ಎರಡು ಕಾರ್ಯಕ್ರಮಗಳ ಸಿಗ್ನೇಚರ್‌ ಟ್ಯೂನ್‌ ಬಿಡುಗಡೆಗೊಳಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಎಂ. ಕೃಷ್ಣ ಭಟ್‌ ಸ್ವಾಗತಿಸಿ, ರೇಡಿಯೋ ಪಾಂಚಜನ್ಯದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಕುಂಟಿನಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಶ್ರೀಕಾಂತ್‌ ಕೊಳತ್ತಾಯ ವಂದಿಸಿದರು. ಉಪನ್ಯಾಸಕಿ ವಿದ್ಯಾ ಎಸ್‌. ನಿರ್ವಹಿಸಿದರು.

ಹಳ್ಳಿಗಳಲ್ಲಿ ಜೀವ
ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್‌, ಭಾರತದ ಜೀವವಿರುವುದೇ ಹಳ್ಳಿಯಲ್ಲಿ. ಇಂತಹ ಹಳ್ಳಿಯ ಭಾವವನ್ನು ಪಸರಿಸುವ ಕಾಯಕದಲ್ಲಿ ಸಮುದಾಯ ಬಾನುಲಿ ಕಾರ್ಯ ನಿರ್ವಹಿಸುತ್ತದೆ. ನಗರ ಬದುಕಿನ ಜಂಜಾಟದಲ್ಲಿ ಗುರಿ, ಧ್ಯೇಯವಿಲ್ಲದೆ ತಿರುಗಾಡುತ್ತಿದ್ದೇವೆ. ಆದರೆ ಹಳ್ಳಿಗಳಲ್ಲಿ ಜನರಿಗೆ ಬದುಕಿನ ಬಗೆಗಿನ ಸುಂದರ ಕಲ್ಪನೆಯಿದೆ. ಹಾಗಾಗಿ ಅಂತಹ ಹಳ್ಳಿ ಸೊಗಡನ್ನು ಕಾಯುವ ಕಾರ್ಯ ಸಮುದಾಯ ಬಾನುಲಿಯಿಂದ ಆಗುತ್ತಿದೆ. ಹಳ್ಳಿಯ ಜೀವ, ಜೀವದ ಸ್ವರ ಸಂಚಾರ ಜಗತ್ತಿಗೆ ಕೊಡುವ ಉದ್ದೇಶವನ್ನು ನಾವು ಹೊಂದಿದ್ದೇವೆ ಎಂದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.