ಭ್ರಷ್ಟಾಚಾರ ಕಂಡರೆ ಎಸಿಬಿಗೆ ದೂರು ನೀಡಿ


Team Udayavani, Nov 17, 2018, 8:47 AM IST

23.jpg

ಮಂಗಳೂರು: ಕಂದಾಯಕ್ಕೆ ಸಂಬಂಧ ಪಟ್ಟ ಕೆಲಸಗಳಲ್ಲಿ ಭ್ರಷ್ಟಾಚಾರ ಕಂಡುಬಂದರೆ ಹಿಂಜರಿಕೆಯಿಲ್ಲದೆ ಎಸಿಬಿಗೆ ದೂರು ನೀಡಬೇಕು. ಎಸಿಬಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಸೂಚಿಸಿದ್ದಾರೆ. ನಗರದ ಪುರಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಕಂದಾಯ ಅದಾಲತ್‌ನಲ್ಲಿ ಕಂದಾಯ ಕೆಲಸಗಳನ್ನು ಮಾಡಿಕೊಡಬೇಕಾದರೆ ಹಣ ಕೇಳುತ್ತಾರೆ; ನನಗೂ ಈ ಅನುಭವ ಆಗಿದೆ ಎಂಬ ಹಿರಿಯರೊಬ್ಬರ ದೂರಿಗೆ ಅವರು ಪ್ರತಿಕ್ರಿಯಿಸಿದರು. ಭೂನ್ಯಾಯ ಮಂಡಳಿಯಲ್ಲಿ ಇತ್ಯರ್ಥಗೊಂಡ ಪ್ರಕರಣಗಳಲ್ಲಿ ಆಸ್ತಿ ವಿವರ ಆರ್‌ಟಿಸಿಯಲ್ಲಿ ನೋಂದಣಿ ಆಗುತ್ತಿಲ್ಲ ಎಂಬ ಅಹವಾಲು ಕೇಳಿಬಂತು. ಕೋರ್ಟ್‌ ಕೇಸ್‌ಗಳಲ್ಲಿ ಶಿಫಾರಸುಗೊಂಡ ಪ್ರಕರಣಗಳಲ್ಲಿ ಆಸ್ತಿ ವಿವರ ತಾನಾಗಿ ಆರ್‌ಟಿಸಿಯಲ್ಲಿ ನೋಂದಣಿ ಆಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಾಪರ್ಟಿ ಕಾರ್ಡ್‌
ಮಂಗಳೂರು ನಗರದಲ್ಲಿ ಆಸ್ತಿ ಸರ್ವೇ ಬದಲು ಪ್ರಾಪರ್ಟಿ ಕಾರ್ಡ್‌ ನೀಡುತ್ತಿರುವುದರಿಂದ ಮನಪಾ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಖಾತಾವನ್ನು ಸುಲಭವಾಗಿ ಪಡೆಯಬಹುದಾಗಿದೆ. ಆಸ್ತಿ ವರ್ಗಾವಣೆ ಮತ್ತು ಮಾರಾಟಕ್ಕೆ ಇನ್ನು ಮುಂದೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯ. ಸುಮಾರು 7 ಪುಟ ಗಳಲ್ಲಿ ಆಸ್ತಿಗೆ ಸಂಬಂಧಿಸಿದ ಸಮಗ್ರ ದಾಖಲೆ ಒಂದೇ ಕಡೆ ಸಿಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

55 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ
ಜಿಲ್ಲಾ ಮಟ್ಟದ ಕಂದಾಯ ಅದಾಲತ್‌ನಲ್ಲಿ ಒಟ್ಟು 185 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 55 ಮಂದಿ ಅರ್ಜಿದಾರರಿಗೆ ಸ್ಥಳದಲ್ಲಿಯೇ ಪರಿಹಾರವನ್ನು ನೀಡಲಾಗಿದೆ. ಉಳಿದ ಅರ್ಜಿಗಳಿಗೆ ಸಮಯ ಮಿತಿಯೊಳಗೆ ಪರಿಹಾರ ಹಾಗೂ ಉತ್ತರ ನೀಡಲಾಗುವುದು ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು. ಅಪರ ಜಿಲ್ಲಾಧಿಕಾರಿ ಕುಮಾರ್‌, ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಮಂಗಳೂರು ತಹಶೀಲ್ದಾರ್‌ ಗುರುಪ್ರಸಾದ್‌, ಪ್ರೊಬೆಷನರಿ ತಹಶೀಲ್ದಾರ್‌ ಮದನ್‌ ಉಪಸ್ಥಿತರಿದ್ದರು.

ತಡವಾಗಿ ಆಹ್ವಾನ: ಗೈರು 
ಶಾಸಕ ಡಿ. ವೇದವ್ಯಾಸ ಕಾಮತ್‌ ಅವರಿಗೆ ಅಧಿಕೃತವಾಗಿ ಅದಾಲತ್‌ ಬಗ್ಗೆ ಮಾಹಿತಿ ನೀಡದ್ದರಿಂದ ಗೈರಾಗಿದ್ದರು. ನ. 12ರಂದು ನಿಗದಿಯಾಗಿದ್ದ ಅದಾಲತ್‌ಗೆ ಆಹ್ವಾನ ನೀಡಿದ್ದ ಅಧಿಕಾರಿಗಳು, ಅದು ಮುಂದೂಡಿಕೆಯಾಗಿರುವ ಬಗೆಗೂ ತಿಳಿಸಿದ್ದರು. ಆದರೆ ಮರುನಿಗದಿತ ಅದಾಲತ್‌ಗೆ ಅಧಿಕೃತ ಆಹ್ವಾನ ನೀಡಿರಲಿಲ್ಲ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯುವ ಅದಾಲತ್‌ಗೆ ಬೆಳಗ್ಗೆ 9.45ರ ವೇಳೆಗೆ ತಿಳಿಸಿದ್ದರು ಎಂದು ಶಾಸಕರು ಆಪಾದಿಸಿದ್ದಾರೆ.

ಉದ್ಘಾಟನೆಗೆ ಸಚಿವರಿಲ್ಲ
ಬೆಳಗ್ಗೆ 10 ಗಂಟೆಗೆ ಕಂದಾಯ ಅದಾಲತ್‌ ಆರಂಭವಾಗಿದ್ದರೂ ಮಧ್ಯಾಹ್ನದ ವರೆಗೆ ಜನಪ್ರತಿನಿಧಿಗಳಾರೂ ಆಗಮಿಸಿರಲಿಲ್ಲ. ಅದಾಲತ್‌ ಉದ್ಘಾಟಿಸಬೇಕಿದ್ದ ಸಚಿವ ಖಾದರ್‌ ಬಾರದ ಕಾರಣ ಕೆಲವು ಅರ್ಜಿದಾರರು ಅಸಮಾಧಾನಗೊಂಡರು. ವೇದಿಕೆಗೆ ತೆರಳಿದ ಜೆರಾಲ್ಡ್‌ ಈ ಬಗ್ಗೆ ಪ್ರಶ್ನಿಸಿದರಲ್ಲದೆ ಜನಪ್ರತಿನಿಧಿಗಳು ಭಾಗವಹಿಸಿದ್ದರೆ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾವಿಸಲು ಸಾಧ್ಯವಾಗುತ್ತಿತ್ತು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಸಚಿವರು ಬರುತ್ತಾರೆ. ಅದಾಲತನ್ನು ಅಧಿಕಾರಿಗಳು ನಿರ್ವಹಿಸುತ್ತಾರೆ ಎಂದು ಸ್ಪಷ್ಟಪಡಿಸಿದರು. ಆದರೂ ಜೆರಾಲ್ಡ್‌ ತಂಡ ಪಟ್ಟು ಬಿಡದಾಗ ಹೊರ ನಡೆಯುವಂತೆ ಜಿಲ್ಲಾಧಿಕಾರಿ ಆದೇಶಿಸಿದರು. ಅಷ್ಟರಲ್ಲಿ ಸಭೆಯಲ್ಲಿದ್ದ ನಾಗರಿಕರೂ ಅದಾಲತ್‌ಗೆ ಅಡ್ಡಿಪಡಿಸದಂತೆ ಆಗ್ರಹಿಸಿದ್ದರಿಂದ ತಂಡ ವೇದಿಕೆಯಿಂದ ಕೆಳಗಿಳಿಯಿತು. ಮಧ್ಯಾಹ್ನದ ಬಳಿಕ ಉಸ್ತುವಾರಿ ಸಚಿವರು ಆಗಮಿಸಿದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.