ಶಾಸಕ ಸುನಿಲ್ ಕುಮಾರ್ ವಿರುದ್ಧ ದೂರು
Team Udayavani, Jan 24, 2018, 12:05 PM IST
ಬಂಟ್ವಾಳ: ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಪ್ರಶಾಂತ ಕುಲಾಲ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಜೆಪಿ ನಡಿಗೆ ಗ್ರಾಮದ ಕಡೆಗೆ ಪಾದಯಾತ್ರೆಯ 9ನೇ ದಿನದ ಸಭಾ ಕಾರ್ಯಕ್ರಮ
ಸೋಮವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದಿದ್ದು, ಈ ಸಂದರ್ಭ ಸುನಿಲ್ಕುಮಾರ್ ಜನರಲ್ಲಿ ಧಾರ್ಮಿಕ ಭಾವನೆ ಕೆರಳುವಂತೆ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಈ ಚುನಾವಣೆ ರಾಜೇಶ್ ನಾೖಕ್, ರಮಾನಾಥ ರೈ ನಡುವಿನ ಚುನಾವಣೆಯಲ್ಲ. ಅಲ್ಲಾ ಮತ್ತು ರಾಮ ನಡುವಿನ ಚುನಾವಣೆ. ನೀವು ಅಲ್ಲನನ್ನು ಪ್ರೀತಿಸುವರಿಗೆ ಅಥವಾ ರಾಮನನ್ನು ಪ್ರೀತಿಸುವವರಿಗೆ ಮತ ನೀಡುತ್ತೀರೋ ಎಂದು ನಿರ್ಧರಿಸಿ ಎಂಬುದಾಗಿ ಹೇಳಿದ್ದಾರೆ. ಇದು ಧಾರ್ಮಿಕ ಭಾವನೆ ಪ್ರಚೋದಕ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ