ಕೋವಿಡ್ ಲಾಕ್ ಡೌನ್: ದಕ್ಷಿಣ ಕನ್ನಡ ಜಿಲ್ಲೆ ನಾಳೆಯೂ ಸಂಪೂರ್ಣ ಬಂದ್
Team Udayavani, Mar 28, 2020, 7:39 PM IST
ಮಂಗಳೂರು: ಕೋವಿಡ್ -19 ಸೋಂಕು ತಡೆಗಟ್ಟಲು ಸಾಮಾಜಿಕ ಅಂತರವನ್ನು ಕಾಯಲು ಸಂಪೂರ್ಣ ಬಂದ್ ಅನಿವಾರ್ಯವಾಗಿದ್ದು, ಶನಿವಾರದಂತೆ ರವಿವಾರವೂ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ಆಗಿರಲಿದೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಈ ಮಾಹಿತಿಗಳನ್ನು ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರವೂ ಸಂಪೂರ್ಣ ಬಂದ್ ಮುಂದುವರಿಯಲಿದ್ದು, ಹಾಲು ವಿತರಣೆಗೆ ಸಂಪೂರ್ಣ ರಿಯಾಯಿತಿ ಇದೆ. ಮನೆ ಮನೆಗೂ ವಿತರಕರು ಹಾಲು ಹಾಕುತ್ತಾರೆ. ಮನೆಯಿಂದ ಯಾರೂ ಹೊರ ಬರುವಂತಿಲ್ಲ. ಔಷಧಾಲಯ ಎಂದಿನಂತೆ ತೆರೆಯಲಿದೆ. ಔಷಧ ಖರೀದಿಗೆ ನಿಗದಿತ ಕಾರಣ ಇದ್ರೆ ಮಾತ್ರ ಅನುಮತಿಯಿದೆ. ಸಿಲಿಂಡರ್ ಪೂರೈಕೆ, ಪೆಟ್ರೋಲ್ ಬಂಕ್ ಗಳು ತೆರೆದಿರಲಿದೆ. ಅಗತ್ಯ ವಸ್ತುಗಳ ಸಾಗಾಣಿಕೆಗೆ ಯಾವುದೇ ತೊಂದರೆಯಿಲ್ಲ ಎಂದರು.
ಲಾಕ್ ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಕಾರ್ಮಿಕರಿಗೆ, ನಿರ್ಗತಿಕರಿಗೆ ಶಾಲೆ/ ಹಾಸ್ಟೆಲ್ ನಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಎಲ್ಲಾದರೂ ಜನ ಸಂಕಷ್ಟದಲ್ಲಿದ್ದರೆ 1077 ಟೋಲ್ ಫ್ರೀ ನಂಬರ್ ಗೆ ಕಾಲ್ ಮಾಡಿ ಎಂದು ಸಚಿವರು ಹೇಳಿದರು.
ಜಿಲ್ಲೆಯ ವರ್ತಕರ ಸಭೆ ಕರೆಯಲಾಗಿದೆ. ದಿನಸಿ ವಸ್ತುಗಳನ್ನು ಡೋರ್ ಡೆಲಿವರಿ ಮಾಡುವ ಚಿಂತನೆ ಮಾಡಿದ್ದೇವೆ. ಆ್ಯಪ್ ಮೂಲಕ ದಿನಸಿ ಸಾಮಾಗ್ರಿ ಡೋರ್ ಡೆಲಿವರಿ ಮಾಡುವ ಯೋಜನೆಯ ಬಗ್ಗೆಯೂ ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ
“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು