ಬಿಜೆಪಿ ಜನಸುರಕ್ಷಾ ಯಾತ್ರೆ ಸಮಾರೋಪ


Team Udayavani, Mar 7, 2018, 10:36 AM IST

7-March-4.jpg

ಮಹಾನಗರ: ಕೊಡಗಿನ ಕುಶಾಲನಗರ ಹಾಗೂ ಉತ್ತರ ಕನ್ನಡದ ಅಂಕೋಲದಿಂದ ಮಾ. 3ರಿಂದ ಆರಂಭಗೊಂಡಿದ್ದ ಮಂಗಳೂರು ಚಲೋ- ಬಿಜೆಪಿ ಜನಸುರಕ್ಷಾ ಯಾತ್ರೆಯು ಮಂಗಳವಾರ ಮಂಗಳೂರು ನಗರವನ್ನು ಪ್ರವೇಶಿಸಿ ಬಳಿಕ ಜ್ಯೋತಿ ಬಳಿಯ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಕೇಂದ್ರ ಮೈದಾನದವರೆಗೆ ಬೃಹತ್‌ ಪಾದಯಾತ್ರೆ ಕೈಗೊಳ್ಳುವ ಮೂಲಕ ನಾಲ್ಕು ದಿನಗಳ ಯಾತ್ರೆಯು ಸಮಾವೇಶದೊಂದಿಗೆ ಅಂತ್ಯಗೊಂಡಿತು.

ಅಂಕೋಲದಿಂದ ಹೊರಟು ಉಡುಪಿ ಮಾರ್ಗವಾಗಿ ಸಾಗಿ ಬಂದ ಜನಸುರಕ್ಷಾ ಯಾತ್ರೆಯು ಕದ್ರಿಯಲ್ಲಿ ಒಟ್ಟು ಸೇರಿತ್ತು. ಕುಶಾಲನಗರದಿಂದ ಪುತ್ತೂರು ಮಾರ್ಗವಾಗಿ ಬಂದ ಯಾತ್ರೆಯು ಪಂಪ್‌ವೆಲ್‌ನಲ್ಲಿ ಒಟ್ಟು ಸೇರಿತ್ತು.

ಬಳಿಕ, ಸಂಜೆ 4ರ ವೇಳೆಗೆ ಈ ಯಾತ್ರೆಯ ನೇತೃತ್ವ ವಹಿಸಿದ್ದ ಸಂಸದರಾದ ನಳಿನ್‌ ಕುಮಾರ್‌ ಕಟೀಲ್‌, ಪ್ರತಾಪ್‌ಸಿಂಹ, ಶೋಭಾ ಕರಂದ್ಲಾಜೆಯ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ಬಾವುಟ ತೋರಿಸುವ ಮೂಲಕ ಮೆರವಣಿಗೆಗೆ ಜ್ಯೋತಿಯಲ್ಲಿ ಚಾಲನೆ ನೀಡಿದರು. ಸಾವಿರಾರು ಕಾರ್ಯಕರ್ತರ ಘೋಷಣೆಯ ಮಧ್ಯೆ ಮೆರವಣಿಗೆಯು ಕೇಂದ್ರ ಮೈದಾನದತ್ತ ಸಾಗಿತು. 

ಬಿಜೆಪಿ ಪ್ರಮುಖರಾದ ಸಿ.ಟಿ.ರವಿ, ಸುನೀಲ್‌ ಕುಮಾರ್‌, ಕೋಟ ಶ್ರೀನಿವಾಸ ಪೂಜಾರಿ, ಸಂಜೀವ ಮಠಂದೂರು, ಡಾ| ವೈ.ಭರತ್‌, ಡಿ.ವೇದವ್ಯಾಸ ಕಾಮತ್‌, ಹರೀಶ್‌ ಪೂಂಜಾ, ಶಾಸಕ ಎಸ್‌.ಅಂಗಾರ, ಸತ್ಯಜಿತ್‌ ಸುರತ್ಕಲ್‌, ಅರುಣ್‌ ಕುಮಾರ್‌ ಪುತ್ತಿಲ ಮೊದಲಾದ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಹಂತಕರಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತರ ಭಾವಚಿತ್ರಗಳನ್ನು ಕಾರ್ಯಕರ್ತರು ಹಿಡಿದು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು. ಜತೆಗೆ ರಾಜ್ಯ ಸರಕಾರದ ವಿರುದ್ಧ ಜೋಡಿಸಲಾದ ಹಾಡುಗಳು ಕೇಳಿಬರುತ್ತಿದ್ದವು. ಯಾತ್ರೆಯಲ್ಲಿ ಸಾಗಿದ ವಾಹನಗಳನ್ನು ಪೂರ್ತಿ ಬಿಜೆಪಿಮಯಗೊಳಿಸಲಾಗಿತ್ತು.

ಪೊಲೀಸ್‌ ಬಂದೋಬಸ್ತ್
ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ಅವರ ನೇತೃತ್ವದಲ್ಲಿ ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಸಿಬಂದಿ, ಕೆಎಸ್‌ಆರ್‌ಪಿ ಸಿಬಂದಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡರು. ಜತೆಗೆ ಕೇಂದ್ರ ಮೈದಾನದ ಪಕ್ಕದಲ್ಲೇ ಪುರಭವನದಲ್ಲಿ ಜೆಡಿಎಸ್‌ ಸಮಾವೇಶ ಇದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು.

ಸಂಚಾರ ವ್ಯತ್ಯಯ
ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಜಮಾಯಿಸಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ 3ರ ಬಳಿಕ ವಾಹನ ಸಂಚಾರವನ್ನು ಬದಯಿಸಲಾಯಿತು. ಈ ಸಂದರ್ಭದಲ್ಲಿ ಕೊಂಚ ಸಂಚಾರ ವ್ಯತ್ಯಯ ಕಂಡುಬಂತು. ಸಂಚಾರ ಪೊಲೀಸರು ಹೆಚ್ಚಿನ ಟ್ರಾಫಿಕ್‌ ಜಾಮ್‌ ಕಂಡುಬರದಂತೆ ನೋಡಿಕೊಂಡರು. ಮೆರವಣಿಗೆ ಪೂರ್ತಿಯಾಗಿ ಮೈದಾನ ಪ್ರವೇಶಿಸಿದ ಬಳಿಕ ಸಂಚಾರ ಸಹಜ ಸ್ಥಿತಿಗೆ ಮರಳಿತು.

ಬಾಯಾರಿಕೆ ವ್ಯವಸ್ಥೆ
ಮೆರವಣಿಗೆಯಲ್ಲಿ ಸೇರಿದ್ದ ಕಾರ್ಯಕರ್ತರಿಗೆ ಬಾಯಾರಿಕೆ ನೀಗಿಸಲು ಮಜ್ಜಿಗೆ, ನೀರಿನ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ಪ್ಲಾಸ್ಟಿಕ್‌ನಲ್ಲಿ ನೀರು, ಮಜ್ಜಿಗೆ ಕೊಡುತ್ತಿದ್ದ ಹಿನ್ನೆಲೆಯಲ್ಲಿ ಕಸದ ಸಮಸ್ಯೆ ಉದ್ಭವಿಸದಂತೆ ಕಾರ್ಯಕರ್ತರು ಕಸ ಹಾಕಲು ಪ್ರತ್ಯೇಕ ವ್ಯವಸ್ಥೆ ಮಾಡಿದ್ದರು.

ಈ ನಡುವೆ ನಗರದಲ್ಲಿ ಒಂದೇ ದಿನ ಬಿಜೆಪಿ ಸಮಾವೇಶದ ಜತೆಗೆ ಜೆಡಿಎಸ್‌ ಪಕ್ಷದ ಸಂವಾದ ಹಾಗೂ ಸಮಾವೇಶ ಕೂಡ ಆಯೋಜಿಸಲಾಗಿತ್ತು. ಈ ಕಾರಣಕ್ಕೆ ನಗರದ ಹಲವು ಕಡೆಗಳಲ್ಲಿ ಜೆಡಿಎಸ್‌ ಬಾವುಟ-ಬಂಟಿಂಗ್‌ ಅಳವಡಿಸಲಾಗಿತ್ತು. ಆದರೆ, ಬಿಜೆಪಿಯು ರಸ್ತೆ ವಿಭಜಕದ ಮೇಲೆ ಬ್ಯಾನರ್‌ ಹಾಕಿದ್ದ ಕಡೆಗಳಲ್ಲಿ ಜೆಡಿಎಸ್‌ನ ಬ್ಯಾನರ್‌ ಕೂಡ ರಾರಾಜಿಸುತ್ತಿದ್ದವು. ಈ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗುತ್ತಿರಬೇಕಾದರೆ, ಕೆಲವು ಕಡೆ ಜೆಡಿಎಸ್‌ನ ಬಾವುಟ ತೆಗೆದು ಹಾಕುತ್ತಿದ್ದ ದೃಶ್ಯವೂ ಕಂಡುಬಂತು. 

ಗಮನ ಸೆಳೆದ ಮೋದಿ.!
ಮೆರವಣಿಗೆಯಲ್ಲಿ ಸಾಗಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ವೇಷಧಾರಿಯೊಬ್ಬರು ಕಾರ್ಯಕರ್ತರ ಗಮನ ಸೆಳೆದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಮೋದಿ, ಮೋದಿ… ಎಂದು ಘೋಷಣೆ ಕೂಗಿ ಅವರ ಜತೆಯಾಗಿ ಸಾಗಿದರು. ಮತ್ತೂಂದೆಡೆ ಮೈದಾನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನೇ ಹೋಲುವ ವೇಷಧಾರಿಯೂ ಇದ್ದರು.!

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.