ಅವೈಜ್ಞಾನಿಕ ಕಾಮಗಾರಿ ಕೊಚ್ಚಿಹೋದ ಕಾಂಕ್ರೀಟ್ ರಸ್ತೆ
Team Udayavani, Jun 13, 2018, 2:10 AM IST
ವೇಣೂರು: ವೇಣೂರು ಮುಖ್ಯಪೇಟೆಯ ಕೆಲವೇ ಮೀಟರ್ ಅಂತರದ ಪರಪ್ಪು ರಸ್ತೆಗೆ ಹಾಕಲಾದ ಕಾಂಕ್ರೀಟ್ ಕಾಮಗಾರಿ ಮಳೆಗೆ ಕೊಚ್ಚಿ ಹೋಗಿದ್ದು, ಅವೈಜ್ಞಾನಿಕವಾಗಿ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕೆಲವು ಸಮಯಗಳ ಹಿಂದೆಯಷ್ಟೇ ಈ ರಸ್ತೆಗೆ ಭಾರೀ ಪ್ರಮಾಣದಲ್ಲಿ ಮಣ್ಣು ತುಂಬಿಸಿ ದುರಸ್ತಿ ಕಾರ್ಯ ನಡೆಸಲಾಗಿತ್ತು. ಬಳಿಕ ಅದೇ ರಸ್ತೆಗೆ ಈ ಹಿಂದಿನ ಬೆಳ್ತಂಗಡಿ ಶಾಸಕರ ವಿಶೇಷ ಅನುದಾನದಡಿ ಕಾಂಕ್ರೀಟ್ ನಿರ್ಮಾಣ ಮಾಡಲಾಗಿತ್ತು.
ಬಿರುಸಿನಿಂದ ಸುರಿದ ಮುಂಗಾರು ಮಳೆಗೆ ಈಗ ರಸ್ತೆಯೇ ಕೊಚ್ಚಿ ಹೋಗಿದ್ದು, ಲಕ್ಷಾಂತರ ರೂ. ಹಣ ಪೋಲಾಗಿದೆ. ಮಣ್ಣು ತುಂಬಿಸಿದ ರಸ್ತೆಯನ್ನು ಗಟ್ಟಿಗೊಳಿಸದೆ ಅವೈಜ್ಞಾನಿಕವಾಗಿ ಕಾಂಕ್ರಿಟ್ ಹಾಕಿದ್ದರಿಂದ ಕೊಚ್ಚಿ ಹೋಗಿ ಸಂಪರ್ಕವೇ ಕಡಿತಗೊಂಡಿದೆ. ಈ ಬಗ್ಗೆ ವೇಣೂರು ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣರಾಜ ಅವರನ್ನು ಕೇಳಿದರೆ, ರಸ್ತೆ ಕೊಚ್ಚಿಹೋಗಿರುವ ಬಗ್ಗೆ ಮಾಹಿತಿ ಇಲ್ಲವಾಗಿದ್ದು, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಅವಸರದ ಕಾಮಗಾರಿ
ಹೊಸದಾಗಿ ಮಣ್ಣು ತುಂಬಿಸಿ ಮಾಡಲಾದ ಪರಪ್ಪು ರಸ್ತೆಗೆ ಒಂದು ಮಳೆಗಾಲ ಕಳೆದ ಬಳಿಕ ಕಾಂಕ್ರೀಟ್ ಹಾಕಬಹುದು ಎಂದು ಗುತ್ತಿಗೆದಾರರಿಗೆ ತಿಳಿಸಿದ್ದೆ. ಆದರೆ ಅವಸರದ ಕಾಮಗಾರಿಯಿಂದ ಕಾಂಕ್ರೀಟ್ ರಸ್ತೆ ಕೊಚ್ಚಿಹೋಗುವಂತಾಗಿದೆ.
– ಧರಣೇಂದ್ರ ಕುಮಾರ್, ಜಿ.ಪಂ. ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು