ಲಕ್ಷದ್ವೀಪ ಪ್ರವೇಶಕ್ಕೆ ಷರತ್ತು; ಕರಾವಳಿ ಉದ್ಯಮ ವಲಯಕ್ಕೆ ಪೆಟ್ಟು!

ಕೋವಿಡ್‌ ನೆಗೆಟಿವ್‌ ಪ್ರಮಾಣ ಕಡ್ಡಾಯ; 14 ದಿನ ನೌಕೆಯಲ್ಲೇ ಕ್ವಾರಂಟೈನ್‌!

Team Udayavani, Nov 19, 2020, 6:01 AM IST

ಲಕ್ಷದ್ವೀಪ ಪ್ರವೇಶಕ್ಕೆ ಷರತ್ತು; ಕರಾವಳಿ ಉದ್ಯಮ ವಲಯಕ್ಕೆ ಪೆಟ್ಟು!

ಮಂಗಳೂರು: ದೇಶದೆಲ್ಲೆಡೆ ಲಾಕ್‌ಡೌನ್‌ ಹಂತಹಂತವಾಗಿ ಸಡಿಲಿಕೆಯಾಗಿ ವ್ಯಾಪಾರ ವಹಿವಾಟು ಚೇತರಿಕೆ ಕಾಣುತ್ತಿದ್ದರೂ ಲಕ್ಷದ್ವೀಪ ಪ್ರವೇಶಕ್ಕೆ ಈಗಲೂ ಕ್ವಾರಂಟೈನ್‌ ನಿಯಮ ಜಾರಿಯಲ್ಲಿರುವುದರಿಂದ ಸರಕು ಸಾಗಾಟಕ್ಕೆ ಬಹುದೊಡ್ಡ ಪೆಟ್ಟು ಬಿದ್ದಿದೆ.

ಲಕ್ಷದ್ವೀಪಕ್ಕೆ ವಿವಿಧ ಸರಕುಗಳನ್ನು ಮಂಗಳೂರು ಕೇಂದ್ರಿತವಾಗಿ ಪ್ರತೀದಿನವೆಂಬಂತೆ ನೌಕೆಗಳ ಮೂಲಕ ಸಾಗಿಸಲಾಗುತ್ತಿತ್ತು. ಆದರೆ ಲಾಕ್‌ಡೌನ್‌, ಕ್ವಾರಂಟೈನ್‌ ನಿಯಮ ಜಾರಿಯೊಂದಿಗೆ ಇದು ನಿಂತುಹೋಗಿತ್ತು. ಮಂಗಳೂರಿನಿಂದ ಪ್ರತೀ ವರ್ಷ ಸೆ. 15ರಿಂದ ಮೇ 15ರ ವರೆಗೆ ಲಕ್ಷದ್ವೀಪಕ್ಕೆ ಸರಕು ಸಾಗಾಟಕ್ಕೆ ಅವಕಾಶವಿದೆ. ಲಕ್ಷದ್ವೀಪದಲ್ಲಿನ್ನೂ ನಿಯಮ ಕಟ್ಟುನಿಟ್ಟಾಗಿ ಜಾರಿಯಲ್ಲಿರುವುದು ಸಂಕಷ್ಟಕ್ಕೆ ಕಾರಣವಾಗಿದೆ.

ವಾರದಲ್ಲಿ ಕೆಲವು ದಿನ ಸಂಚರಿಸುತ್ತಿದ್ದ ಪ್ರಯಾಣಿಕರ ನೌಕೆಯ ಪ್ರವೇಶಕ್ಕೂ ಅವಕಾಶ ದೊರಕಿಲ್ಲ. ಸದ್ಯ ಜೀವನಾಶ್ಯಕ ವಸ್ತುಗಳನ್ನು ಮಾತ್ರ ಸರಕಾರಿ ವಿಶೇಷ ನೌಕೆಗಳ ಮೂಲಕ ಮಂಗಳೂರು, ಕೊಚ್ಚಿ, ಕೋಯಿಕ್ಕೋಡ್‌ಗಳಿಂದ ವಿಶೇಷ ನಿಗಾ ವಹಿಸಿ ಸರಬರಾಜು ಮಾಡಲಾಗುತ್ತಿದೆ.

ಷರತ್ತುಗಳೇನು?
ಲಕ್ಷದ್ವೀಪದಲ್ಲಿ ಇಲ್ಲಿಯ ವರೆಗೆ ಒಂದು ಕೂಡ ಕೊರೊನಾ ಪ್ರಕರಣ ವರದಿಯಾಗಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಹೊರಗಿನಿಂದ ಆಗಮಿಸುವವರ ಬಗ್ಗೆ ತೀವ್ರ ಎಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ. ಅದರಂತೆ ಮಂಗಳೂರಿನಿಂದ ಹೋಗುವವರು ಕೊರೊನಾ ನೆಗೆಟಿವ್‌ ವರದಿ ಹೊಂದಿರಬೇಕು ಮತ್ತು ಅಲ್ಲಿಗೆ ತಲುಪಿದ ಬಳಿಕ ನೌಕೆಯನ್ನು ನೀರಿನಲ್ಲಿಯೇ ನಿಲ್ಲಿಸಿ ಅದರೊಳಗೇ 14 ದಿನ ಕ್ವಾರಂಟೈನ್‌ ಆಗಬೇಕು. ಅಲ್ಲಿನ ಆರೋಗ್ಯ ಕ್ಷೇತ್ರ ಅಭಿವೃದ್ಧಿ ಹೊಂದಿರದ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೊಳಿಸಲಾಗಿದೆ ಎನ್ನುವುದು ಅಲ್ಲಿನವರ ವಾದ.

ಏನು ಸಮಸ್ಯೆ?
ಲಕ್ಷದ್ವೀಪದ ಜನತೆ ಪ್ರಮುಖ ಆವಶ್ಯಕತೆಗಳಿಗೆ ಮುಖ್ಯವಾಗಿ ಆಶ್ರಯಿಸುವುದು ಕೊಚ್ಚಿ ಮತ್ತು ಮಂಗಳೂರನ್ನು. ನೌಕೆಗಳ ಮೂಲಕ ಅಲ್ಲಿಂದ ವ್ಯಾಪಾರಿಗಳು, ಪ್ರಯಾಣಿಕರು ಮಂಗಳೂರು ಹಳೇ ಬಂದರಿಗೆ ಆಗಮಿಸುತ್ತಾರೆ. ಇಲ್ಲಿಂದ ಅಕ್ಕಿ, ತರಕಾರಿ ಮೊದಲಾದ ಆಹಾರ ವಸ್ತುಗಳು, ನಿರ್ಮಾಣ ಸಾಮಗ್ರಿಗಳನ್ನು ಕೊಂಡೊಯ್ಯುತ್ತಾರೆ. ಈ ಪ್ರಕ್ರಿಯೆಯನ್ನು ನಂಬಿಕೊಂಡು ಸಾವಿರಾರು ಕರಾವಳಿಗರು ಜೀವನ ನಡೆಸುತ್ತಿದ್ದಾರೆ. ಕಳೆದ ಎಪ್ರಿಲ್‌ನಿಂದ ಕೆಲಸವಿಲ್ಲದೆ ಅವರೆಲ್ಲರೂ ಸಂಕಷ್ಟ ಎದುರಿಸುತ್ತಿದ್ದಾರೆ.

750ಕ್ಕೂ ಅಧಿಕ ಕಾರ್ಮಿಕರಿಗೆ ಸಂಕಷ್ಟ
ಲೌಕ್‌ಡೌನ್‌ಗೂ ಮುನ್ನ ಲಕ್ಷದ್ವೀಪಕ್ಕೆ ಮಂಗಳೂರಿನಿಂದ ತೆರಳುವ ನೌಕೆಯಲ್ಲಿ ಸುಮಾರು 300 ಜನರು ಕೆಲಸ ನಿರ್ವಹಿಸುತ್ತಿದ್ದರು. ಲೋಡಿಂಗ್‌-ಅನ್‌ಲೋಡಿಂಗ್‌ನಲ್ಲಿಯೂ ಸುಮಾರು 200 ಜನರು ಕೆಲಸ ಮಾಡುತ್ತಾರೆ. ಆಹಾರ ಹಾಗೂ ಸರಕು ಸಾಮಗ್ರಿ ಸೇರಿ ಸುಮಾರು 600 ಟನ್‌ ವಸ್ತುಗಳು ಲಕ್ಷದ್ವೀಪಕ್ಕೆ ಸರಬರಾಜಾಗುತ್ತಿತ್ತು. ತರಹೇವಾರಿ ತರಕಾರಿ, ದಿನಸಿ, ಕಲ್ಲು, ಮರಳು, ಜಲ್ಲಿಯನ್ನು ನೌಕೆಯವರೆಗೆ ತರಲು 250ಕ್ಕೂ ಅಧಿಕ ಮಂದಿ ಪರೋಕ್ಷವಾಗಿ ದುಡಿಯುತ್ತಿದ್ದರು. ಆದರೆ ಲಾಕ್‌ಡೌನ್‌ ಬಳಿಕ ಇಷ್ಟೂ ಮಂದಿಗೆ ಉದ್ಯೋಗ ಇಲ್ಲವಾಗಿದೆ. ಹಲವು ಮಂದಿ ನೌಕೆಯ ಮಾಲಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಐತಿಹಾಸಿಕ ಹಿನ್ನೆಲೆ
ಮಂಗಳೂರು ಮತ್ತು ಲಕ್ಷದ್ವೀಪ ನಡುವೆ ವಾಣಿಜ್ಯ ವ್ಯವಹಾರಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಮಂಗಳೂರಿನಿಂದ ಸುಮಾರು 365 ಕಿ.ಮೀ. (277 ಮೈಲು) ದೂರದಲ್ಲಿ ಪ್ರಾರಂಭವಾಗುತ್ತದೆೆ ಲಕ್ಷದ್ವೀಪ ಸಮೂಹ. ಕವರತ್ತಿ, ಅಗಾಟ್ಟಿ, ಕಲ್ಪೆನಿ, ಮಿನಿಕಾಯ್‌, ಅಮಿನಿ, ಚತ್ತಲತ್‌, ಕಿಲ್ತಾನ್‌ ಹಾಗೂ ಬಿತ್ತಾ, ಅಂದ್ರೋತ್‌, ಕಡಮಟ್ಟ್ ಅಲ್ಲಿನ ಪ್ರಮುಖ ದ್ವೀಪಗಳು. ಪ್ರವಾಸಿತಾಣವಾದ ಲಕ್ಷದ್ವೀಪ ಸಮೂಹಕ್ಕೆ ಅವಿಭಜಿತ ದ.ಕ. ಜಿಲ್ಲೆಯಿಂದ ಬಹಳಷ್ಟು ಪ್ರವಾಸಿಗರು ಹೋಗುತ್ತಿರುತ್ತಾರೆ.

ಲಕ್ಷದ್ವೀಪಕ್ಕೆ ತೆರಳುವ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲು ಅವಕಾಶ ಇದೆಯೇ ಎಂದು ತಿಳಿದುಕೊಳ್ಳಲಾಗುವುದು. ಕನಿಷ್ಠ ವ್ಯಾಪಾರಿಗಳಿಗಾದರೂ ಯಾವ ರೀತಿಯಲ್ಲಿ ಅನುಕೂಲ ಮಾಡಿಕೊಡಬಹುದು ಎಂಬ ಬಗ್ಗೆ ಅಲ್ಲಿನ ಆಡಳಿತದ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
– ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು

ದಿನೇಶ್‌ ಇರಾ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.