‘ಯಶಸ್ಸು ಪಡೆಯಲು ಆತ್ಮವಿಶ್ವಾಸ, ಉತ್ತಮ ಸಂವಹನ ಆವಶ್ಯಕ’
Team Udayavani, Apr 27, 2018, 12:12 PM IST
ಬಂಟ್ವಾಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸನ್ನು ಪಡೆಯಲು ಆತ್ಮವಿಶ್ವಾಸ, ಉತ್ತಮ ಸಂವಹನೆ ಮತ್ತು ಸಾಮಾನ್ಯಜ್ಞಾನ ಅತಿ ಆವಶ್ಯಕ. ನಿಮಗೆ ಸಿಕ್ಕಿದ ಅವಕಾಶಗಳನ್ನು ಕಳೆದುಕೊಳ್ಳದೆ ಸದುಪಯೋಗಪಡಿಸಿಕೊಂಡು, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಯೋಜಕಿ ಡಾ| ಅನಸೂಯಾ ರೈ ಹೇಳಿದರು.
ಅವರು ಎ. 26ರಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಾರ್ಷಿಕೋತ್ಸವ
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆಯೋಜಕರನ್ನು ಅಭಿನಂದಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿಭಾಗದ ಮುಖ್ಯಸ್ಥರಾದ ನೆಲ್ಸನ್ ಮರ್ವಿನ್ ಫೆರ್ನಾಂಡಿಸ್ ಸ್ನಾತಕೋತ್ತರ ವಿಭಾಗದ ವಾರ್ಷಿಕ ವರದಿ ಮಂಡಿಸಿದರು. ಸ್ನಾತಕೋತ್ತರ ವಿಭಾಗದ ಉಪನ್ಯಾಸಕ ಮಂಜುಳಾ ಡಿ., ಅಕ್ಷತಾ, ಸ್ವಾತಿ ಶೆಟ್ಟಿ ಡಿ., ಚಂದ್ರಿಕಾ ಉಪಸ್ಥಿತರಿದ್ದರು.
ವಾಣಿಜ್ಯ ಸಂಘದ ಉಪಕಾರ್ಯದರ್ಶಿ ದೀಪಕ್ ಕೆ.ವಿ. ಸ್ವಾಗತಿಸಿ, ಕಾರ್ಯದರ್ಶಿ ಪ್ರೀತಿ ಪೈ ವಂದಿಸಿದರು. ರಿದಿಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?