ಮಂಗಳೂರು: “ವಾಸ್ತು’ ಚರ್ಚೆಗೆ ಕಾರಣವಾದ ಕಾಂಗ್ರೆಸ್ ಭವನದ ಮೆಟ್ಟಿಲು!
Team Udayavani, Dec 15, 2022, 7:42 AM IST
ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಭವನದ ಪ್ರವೇಶ ದ್ವಾರದ ಮೆಟ್ಟಿಲುಗಳ ನವೀಕರಣ ಕಾಮಗಾರಿಯು ಇದೀಗ “ವಾಸ್ತು’ ವಿಚಾರದ ಚರ್ಚೆಗೆ ವೇದಿಕೆ ಒದಗಿಸಿದೆ.
ಕಚೇರಿ ಪ್ರವೇಶಕ್ಕೆ ಈ ಹಿಂದೆ 8 ಮೆಟ್ಟಿಲುಗಳಿದ್ದವು. ಇದನ್ನು ಬೆಸ ಸಂಖ್ಯೆಗೆ ಪರಿವರ್ತಿಸುವ ಕಾಮಗಾರಿ ನಡೆಯುತ್ತಿದೆ ಎಂಬ ಮಾತು ರಾಜಕೀಯವಾಗಿ ಚರ್ಚೆ ಹುಟ್ಟುಹಾಕಿದೆ. ಆದರೆ “ಅಂಡರ್ ಗ್ರೌಂಡ್ ನೀರಿನ ಟ್ಯಾಂಕ್ ದುರಸ್ತಿಗಾಗಿ ಮೆಟ್ಟಿಲು ದುರಸ್ತಿ ಮಾಡಲಾ ಗಿದ್ದು, ಇದರಲ್ಲಿ ವಾಸ್ತು ವಿಚಾರ ಇಲ್ಲ’ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು “ಹಿಂದೂಗಳ ಪ್ರತೀ ಆಚರಣೆಯನ್ನೂ ಅಣಕ ಮಾಡುವ ಕಾಂಗ್ರೆಸ್ ಈಗ ಸೋಲಿನ ಭೀತಿಯಿಂದ ವಾಸ್ತುದೋಷದ ಮೊರೆ ಹೋಗಿರುವುದು ತಲೆಗೆ ಹೊಯ್ದ ನೀರು ಕಾಲಿಗೆ ಬರಲೇಬೇಕು ಎಂಬು ದಕ್ಕೆ ಉದಾಹರಣೆ’ ಎಂದಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರತಿಕ್ರಿಯಿಸಿ, “ಕಟ್ಟಡಕ್ಕೆ 10 ವರ್ಷ ಆಗಿದೆ. ಹೀಗಾಗಿ ಮೆಟ್ಟಿಲು, ನೀರಿನ ಟ್ಯಾಂಕ್ ಸಹಿತ ಕೆಲವು ಗಾರೆ ಕೆಲಸ ಮಾಡಲು ಇತ್ತು. ಅದನ್ನೇ ವಾಸ್ತು ಎಂಬ ರೀತಿಯಲ್ಲಿ ಬಿಂಬಿ ಸುವುದು ಸರಿಯಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್