“ಬಿಜೆಪಿಯಿಂದ ಭಯದ ವಾತಾವರಣ ನಿರ್ಮಾಣ’

ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ

Team Udayavani, Apr 2, 2019, 9:59 AM IST

d-k

ಬೆಳ್ತಂಗಡಿ: ಹಿಂದುತ್ವದ ಆಧಾರದಲ್ಲಿ ಜನರನ್ನು ಭಯದ ವಾತಾವರಣ ದಲ್ಲಿಡುವ ಕಾರ್ಯವನ್ನು ಬಿಜೆಪಿ ಮಾಡು ತ್ತಿದೆ. ಆದರೆ ಕಾಂಗ್ರೆಸ್‌ ನಾವೆಲ್ಲರೂ ಒಂದು ಎಂಬಂತೆ ಪ್ರಜಾ ಪ್ರಭುತ್ವ ಉಳಿಸುವ ಕೆಲಸ ಮಾಡುತ್ತಿದೆ ಎಂದು ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು.

ಸೋಮವಾರ ಬೆಳ್ತಂಗಡಿಯಲ್ಲಿ ಚುನಾವಣೆಗಾಗಿ ಕಾಂಗ್ರೆಸ್‌ ಕಾರ್ಯ ಕರ್ತರ ಮೊದಲ ಸಮಾವೇಶವನ್ನು ಅವರು ಉದ್ಘಾಟಿಸಿದರು. ಜಿಲ್ಲೆಯ ಜನತೆಯ ಸ್ವಾಭಿಮಾನವನ್ನು ಉಳಿಸುವುದಕ್ಕಾಗಿ ಈ ಬಾರಿ ಮಿಥುನ್‌ ರೈ ಗೆಲ್ಲಬೇಕಿದ್ದು, ಅವರು ಗೆದ್ದು ನಾಯಕರಾಗುವ ಬದಲು ಸೇವಕರಾಗಬೇಕಿದೆ. ಈ ನಿರೀಕ್ಷೆ ಹುಸಿಗೊಳಿಸುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.

ಸಚಿವ ಯು.ಟಿ. ಖಾದರ್‌ ಮಾತನಾಡಿ, ಪ್ರತಿಯೊಬ್ಬ ನಾಯಕರು ಕೂಡ ಪ್ರತಿಬೂತ್‌ನಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಗೆ ತರಬೇಕಿದೆ ಎಂದರು.
ಅಭ್ಯರ್ಥಿ ಮಿಥುನ್‌ ರೈ ಮಾತನಾಡಿ, ಕಾಂಗ್ರೆಸ್‌ ನಾಯಕರು ಇಟ್ಟಿರುವ ನಂಬಿಕೆಗೆ ತೊಂದರೆಯಾಗದ ರೀತಿಯಲ್ಲಿ ಎಲ್ಲರ ಧ್ವನಿಯಾಗಿ ಕೆಲಸ ಮಾಡಲಿದ್ದೇವೆ. ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ, ಸಾಮರಸ್ಯ ಸ್ಥಾಪನೆಯೇ ತನ್ನ ಉದ್ದೇಶ ಎಂದರು.

ಮಾಜಿ ಸಚಿವ ಬಿ. ರಮಾನಾಥ ರೈ, ಎಸ್‌ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಮಾತನಾಡಿದರು. ಬೆಳ್ತಂಗಡಿ ಬಿಜೆಪಿ ಮಾಜಿ ಅಧ್ಯಕ್ಷ ರಂಜನ್‌ ಜಿ. ಗೌಡ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ. ಹರೀಶ್‌ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು.
ನಾಯಕರಾದ ಐವನ್‌ ಡಿ’ಸೋಜಾ, ಗಂಗಾಧರ ಗೌಡ, ಬೆಳಪು ದೇವಿಪ್ರಸಾದ್‌ ಶೆಟ್ಟಿ, ಶಾಲೆಟ್‌ ಪಿಂಟೋ, ರಾಜಶೇಖರ ಅಜ್ರಿ, ಪ್ರವೀಣ್‌ಚಂದ್ರ ಜೈನ್‌, ಕಣಚೂರು ಮೋನು, ಕೃಪಾ ಅಮರ್‌ ಆಳ್ವ, ನವೀನ್‌ಚಂದ್ರ ಜೆ. ಶೆಟ್ಟಿ, ಬಿ.ಎಚ್‌. ಖಾದರ್‌, ಜಿ.ಎ. ಬಾವಾ, ಧನಂಜಯ ಅಡ³ಂಗಾಯ, ಪೀತಾಂಬರ ಹೇರಾಜೆ ಉಪಸ್ಥಿತರಿದ್ದರು. ಶ್ರೀನಿವಾಸ ಕಿಣಿ ಸ್ವಾಗತಿಸಿದರು. ಅಭಿನಂದನ್‌ ಹರೀಶ್‌ ವಂದಿಸಿದರು. ರಾಜಶೇಖರ ಶೆಟ್ಟಿ ಮಡಂತ್ಯಾರು ನಿರ್ವಹಿಸಿದರು.

ನಾನಾದರೆ ರಾಜೀನಾಮೆ ನೀಡುತ್ತಿದ್ದೆ: ಡಿ.ಕೆ.ಶಿ.
ಬೆಳ್ತಂಗಡಿ: ವಿಜಯ ಬ್ಯಾಂಕ್‌ ವಿಲೀನ ವಿಚಾರವು ದ.ಕ. ಜಿಲ್ಲೆ ಸಹಿತ ಇಡೀ ರಾಜ್ಯಕ್ಕಾದ ಅವಮಾನ. ಡಿ.ವಿ. ಸದಾನಂದ ಗೌಡ, ಶೋಭಾ ಕರಂದ್ಲಾಜೆ, ನಳಿನ್‌ ಕುಮಾರ್‌ ಕಟೀಲು ಅವರ ಸ್ಥಾನದಲ್ಲಿ ನಾನು ಇರುತ್ತಿದ್ದರೆ ಈ ವಿಚಾರ ನಿರ್ಣಯವಾದ ದಿನದಂದೇ ರಾಜೀನಾಮೆ ನೀಡುತ್ತಿದೆ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು. ಪತ್ರಕರ್ತರ ಜತೆ ಮಾತನಾಡಿದ ಅವರು, ವಿಜಯ ಬ್ಯಾಂಕನ್ನು ಮುಚ್ಚಿಸಿದ್ದೇ
ನಳಿನ್‌ ಅವರ ಸಾಧನೆ. ವಿಲೀನ ಮಾಡುವುದಿದ್ದರೂ ಬ್ಯಾಂಕ್‌ ಆಫ್‌ ಬರೋಡವನ್ನೇ ವಿಜಯ ಬ್ಯಾಂಕಿನಲ್ಲಿ ವಿಲೀನ ಮಾಡಬಹುದಿತ್ತು ಎಂದರು.

ಬದಲಾವಣೆ ಸನ್ನಿಹಿತ
ಬರೀ ಆಶ್ವಾಸನೆ ಮೇಲೆ ಸರಕಾರ ನಡೆಸಲು ಸಾಧ್ಯವಿಲ್ಲ. ಪ್ರಸ್ತುತ ಪ್ರಜಾಪ್ರಭುತ್ವದ ಹಬ್ಬದ ಸಮಯವಾಗಿದ್ದು, ಬದಲಾವಣೆ ನಡೆಯಬೇಕಿದೆ. ಹೊಸ ವರ್ಷದಲ್ಲಿ ಹೊಸ ಸರಕಾರ ರಚನೆಯಾಗಲಿದೆ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.