ಮೂಡಬಿದಿರೆಯ ಅಭಿವೃದ್ಧಿಗೆ ಕಾಂಗ್ರೆಸ್‌ ಕಾರಣ: ಅಭಯ ಚಂದ್ರ


Team Udayavani, May 5, 2023, 7:18 PM IST

1-sdsadsdsa

ಮಹಾನಗರ: ಮೂಡುಬಿದಿರೆಯ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ಸರಕಾರದ ಪಾತ್ರ ಹಿರಿದಾಗಿದ್ದು, ನಾನು ಶಾಸಕನಾಗಿದ್ದಾಗ ಕುಡಿಯುವ ನೀರಿನ ಯೋಜನೆ, ರಿಂಗ್‌ ರೋಡ್‌ನೊಂದಿಗೆ ರಸ್ತೆಗಳ ಅಭಿವೃದ್ಧಿಯಾಗಿದೆ. ಜನರ ಹಿತ ಕಾಯುವ ಜತೆಗೆ ಅಭಿವೃದ್ಧಿ ಪರವಾದ ಕೆಲಸ ಕಾಂಗ್ರೆಸ್‌ ಸರಕಾರದಿಂದ ಮಾತ್ರ ಸಾಧ್ಯ ಎನ್ನುವ ನಂಬಿಕೆ ಮತದಾರರಿಗೆ ಬಂದಿದೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಹೇಳಿದ್ದಾರೆ.

ಅವರು ಗುರುವಾರ ನಗರದ ಪ್ರಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1999ರಲ್ಲಿ ನಾನು ಶಾಸಕನಾಗಿದ್ದಾಗ ಅಂದಿನ ಕಾಂಗ್ರೆಸ್‌ ಸರಕಾರದಿಂದ ಮೂಡುಬಿದಿರೆಗೆ ವಿಶೇಷ ತಹಶೀಲ್ದಾರ್‌ ಅವರ ನೇಮಕ, ತಾಲೂಕು ಕಚೇರಿಯನ್ನು ಮಾಡಲಾಯಿತು. ಇದೇ ರೀತಿ ಮೂಲ್ಕಿಯಲ್ಲೂ ತಾಲೂಕು ರಚನೆ ಹಾಗೂ ಸಿದ್ದರಾಮಯ್ಯ ಅವರ ಕಾಲದಲ್ಲಿ ಅದಕ್ಕೆ ಕಚೇರಿಯನ್ನು ನಿರ್ಮಿಸಲಾಗಿದೆ ಎಂದರು.

ಮರವೂರಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಪುಚ್ಚೆಮೊಗರಿನಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ 24 ಗಂಟೆಗಳ ವಿದ್ಯುತ್‌ ಪೂರೈಕೆ ವ್ಯವಸ್ಥೆ, ಕೋರ್ಟ್‌ ನಿರ್ಮಾಣ, ಮೂಡುಬಿದಿರೆಯಿಂದ ಎರಡೇ ನಿಮಿಷದಲ್ಲಿ ಮುಖ್ಯ ಪೇಟೆ ತಪ್ಪಿಸಿಕೊಂಡು ಕಾರ್ಕಳ ರಸ್ತೆಗೆ ಸಂಪರ್ಕ ಸಾಧಿಸುವ ರಿಂಗ್‌ ರೋಡ್‌ ಕೂಡ ಕಾಂಗ್ರೆಸ್‌ ಸರಕಾರದ ಸಮಯದಲ್ಲಿ ಆಗಿರುವ ಅಭಿವೃದ್ದಿ ಕಾರ್ಯಗಳು ಎಂದು ಅವರು ಹೇಳಿದರು.

ಈ ಹಿಂದೆ ಕಾಂಗ್ರೆಸ್‌ ಸರಕಾರ ಇದ್ದಾಗ ತಾಲೂಕು ಕಚೇರಿಗೆ ಜಾಗ ಗುರುತಿಸಿ ಕಟ್ಟಡ ನಿರ್ಮಾಣ ಮಾಡುವ ಕೆಲಸದ ಜತೆಗೆ ಕುಡಿಯುವ ನೀರಿಗಾಗಿ ಕಿನ್ನಿಗೋಳಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು 18 ಕೋಟಿ ರೂ.ಗಳಲ್ಲಿ ಮಾಡಲಾಯಿತು ಎಂದರು.

ಸಿದ್ದರಾಮಯ್ಯ ನೆರವು
ಕಾಂಗ್ರೆಸ್‌ ಆಡಳಿತ ಸಮಯದಲ್ಲಿ ಸಿದ್ದರಾಮಯ್ಯ ಅವರು ಕೃಷಿ, ನೀರಾವರಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಸಾಕಷ್ಟು ಅನುದಾನ ನೀಡಿ ಜನರ ಹಿತ ಕಾಪಾಡಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್‌ ಅಭಿವೃದ್ಧಿ ಪರವಾಗಿದ್ದು, ದಕ ಜಿಲ್ಲೆಯಲ್ಲಿ ಎನ್‌ಎಂಪಿಟಿ, ಎಂಆರ್‌ಪಿಎಲ್‌, ವಿಮಾನ ನಿಲ್ದಾಣ ಸೇರಿದಂತೆ ಸಾಕಷ್ಟು ಕೈಗಾರಿಕೆ, ಉದ್ಯಮಗಳ ಸ್ಥಾಪನೆಗೆ ಕಾರಣ. ಯುವಜನತೆಗೆ ಉದ್ಯೋಗ ನೀಡುವಲ್ಲಿ ಸಾಕಷ್ಟು ಕೆಲಸ ಮಾಡಿದೆ ಎಂದು ಅವರು ಹೇಳಿದರು.

ಕ್ಷೇತ್ರದ ಪ್ರಗತಿಗೆ ಮಿಥುನ್‌ ಅಗತ್ಯ
ಮೂಡುಬಿದಿರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಅವರಿಂದ ಮಾತ್ರ ಅಭಿವೃದ್ಧಿ ಕೆಲಸಗಳು ನಡೆಯಲು ಸಾಧ್ಯ. ಈಗಾಗಲೇ ಕ್ಷೇತ್ರದ ಬಹುತೇಕ ಕಡೆಯಲ್ಲಿ ಓಡಾಟ ನಡೆಸಿದ ಸಂದರ್ಭ ಕಾಂಗ್ರೆಸ್‌ ಪರವಾದ ಒಲವು ವ್ಯಕ್ತವಾಗಿದೆ. ಈ ಬಾರಿ ಕಮಿಷನ್‌ ಸರಕಾರದ ವಿರುದ್ಧ ಜನರು ಮತದಾನ ಮಾಡುತ್ತಾರೆ, ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಎಲ್ಲಾ 8 ಅಭ್ಯರ್ಥಿಗಳೂ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಅಭಯಚಂದ್ರ ಹೇಳಿದರು.

ಅನುದಾನ ಬಳಕೆ ಮಾಡಿಲ್ಲ
ಸಿದ್ದರಾಮಯ್ಯ ಸರಕಾರವಿದ್ದಾಗ ಮುಲ್ಕಿ ಬಸ್‌ ನಿಲ್ದಾಣ ನಿರ್ಮಾಣಕ್ಕೆ 8 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿತ್ತು. ಆದರೆ ಆ ಅನುದಾನವನ್ನು ಬಳಸಿಕೊಂಡು ಬಸ್‌ ನಿಲ್ದಾಣವನ್ನು ಮಾಡುವ ಗೋಜಿಗೆ ನಂತರ ಶಾಸಕರಾದವರು ಹೋಗಿಲ್ಲ. ಅನುದಾನ ಖಜಾನೆಯಲ್ಲೇ ಕೊಳೆಯುತ್ತಿದೆ. ಬಿಜೆಪಿ ಸರಕಾರ ಶೇ.40ರಷ್ಟು ಕಮಿಷನ್‌ನಲ್ಲೇ ನಿರತವಾಗಿತ್ತು ಎಂದು ಅಭಯಚಂದ್ರ ಆರೋಪಿಸಿದರು.

ನೀಟ್‌ನಿಂದ ವಿದ್ಯಾರ್ಥಿಗಳಿಗೆ ಅಡ್ಡಿ
ವೀರಪ್ಪಮೊಯ್ಲಿ ಅವರು ತಂದ ಸಿಇಟಿಯಿಂದಾಗಿ ಜನಸಾಮಾನ್ಯರ ಲಕ್ಷಾಂತರ ಮಕ್ಕಳು ಎಂಜಿನಿಯರ್‌ಗಳು ಹಾಗೂ ವೈದ್ಯರಾಗಿದ್ದಾರೆ. ಬಿಜೆಪಿಯ ಡಬಲ್‌ ಎಂಜಿನ್‌ ಸರಕಾರ ಇದಕ್ಕೆ ಅಡ್ಡಿಪಡಿಸಿ ನೀಟ್‌ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಅಭಯಚಂದ್ರ ಆಪಾದಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.