ಕಾಂಗ್ರೆಸ್ ಪಾದಯಾತ್ರೆ ನಾಟಕ: ಸಚಿವ ಅಂಗಾರ
Team Udayavani, Jan 11, 2022, 4:35 AM IST
ಮಂಗಳೂರು: ಅಧಿಕಾರ ಇರುವಾಗ ಮೇಕೆದಾಟು ಯೋಜನೆಗೆ ಸಮರ್ಪಕ ಡಿಪಿಆರ್ ಸಲ್ಲಿಸದೆ ಕಾಲಹರಣ ಮಾಡಿದ ಕಾಂಗ್ರೆಸ್ ಈಗ ಪಾದಯಾತ್ರೆ ನಾಟಕ ಮಾಡುತ್ತಿದೆ. ರಾಜಕೀಯ ಲಾಭಕ್ಕಾಗಿ ಕೊರೊನಾ ನಿಯಮವನ್ನೂ ಉಲ್ಲಂಘಿಸಿ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ಜನತೆಯ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ ಟೀಕಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು “ಮೇಕೆದಾಟು ಯೋಜನೆಯ ವಾಸ್ತವಾಂಶಗಳನ್ನು ಕಾಂಗ್ರೆಸ್ ಮರೆಮಾಚಿ ಜನತೆಗೆ ತಪ್ಪು ಸಂದೇಶ ನೀಡುತ್ತಿದೆ. ಆದರೆ ರಾಜ್ಯದ ಜನರನ್ನು ಮರುಳು ಮಾಡಲು ಸಾಧ್ಯವಿಲ್ಲ. ಆಡಳಿತ ಇರುವಾಗ ಕಾಂಗ್ರೆಸ್ ನಾಯಕರು ಯಾವುದೇ ಬದ್ಧತೆ ಪ್ರದರ್ಶಿಸಿಲ್ಲ ಎನ್ನುವುದನ್ನು ಜನತೆ ಅರಿತಿದ್ದಾರೆ.
ಇದನ್ನೂ ಓದಿ:2021 ಜುಲೈ-ಸೆಪ್ಟೆಂಬರ್ನಲ್ಲಿ 3.10 ಕೋಟಿ ನವೋದ್ಯೋಗ : ಕೇಂದ್ರ ಕಾರ್ಮಿಕ ಸಚಿವಾಲಯ ಮಾಹಿತಿ
ಯೋಜನೆ ಬಗ್ಗೆ ವಿಳಂಬ ನೀತಿ ಅನುಸರಿಸಿ ಈಗ ಕಾನೂನು ಮೀರಿ ಪಾದಯಾತ್ರೆ ನಾಟಕ ಮಾಡುತ್ತಿರುವ ಕಾಂಗ್ರೆಸ್ ನಾಯಕರನ್ನು ಜನತೆ ಕ್ಷಮಿಸುವುದಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!