ಸರಕಾರ ಎಡವಿದಲ್ಲಿ ಎಚ್ಚರಿಸುವ ಕಾರ್ಯ ಮಾಡುತ್ತದೆ ಕಾಂಗ್ರೆಸ್ ಟಾಸ್ಕ್ ಪೋರ್ಸ್
Team Udayavani, Apr 4, 2020, 1:34 PM IST
ಮಂಗಳೂರು: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಒಳಗೊಂಡ ಟಾಸ್ಕ್ಪೋರ್ಸ್ ರಚನೆಯಾಗಿದ್ದು, ಸರಕಾರ ಎಡವಿದಲ್ಲಿ ಎಚ್ಚರಿಸುವ ಕಾರ್ಯ ಮಾಡುತ್ತದೆ. ಜನರಿಗೆ ಸಹಾಯ ಮಾಡುವ ಗುರಿ ಹೊಂದಿದೆ ಎಂದು ಮಾಜಿ ಶಾಸಕ ಜೆ. ಆರ್ ಲೋಬೋ ಹೇಳಿದರು.
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ನಿಯಂತ್ರಣಕ್ಕೆ ಕಾಂಗ್ರೆಸ್ ನಿಂದ ಟಾಸ್ಕ್ಪೋರ್ಸ್ ರಚನೆ ಮಾಡಲಾಗಿದೆ. ನಾವು ಜವಾಬ್ದಾರಿಯುತ ಕೆಲಸ ಮಾಡುತ್ತೇವೆ, ಸರ್ಕಾರಕ್ಕೆ ಸಲಹೆ ನೀಡುತ್ತೇವೆ ಎಂದರು.
ಸಮಿತಿಯಲ್ಲಿ ಎಂಟು ಉಪಸಮಿತಿಯನ್ನು ಮಾಡುತ್ತೇವೆ. ಆಹಾರ ಉಪಸಮಿತಿ, ಆರೋಗ್ಯ ಉಪಸಮಿತಿ, ಸಾಮಾಜಿಕ ಜಾಲತಾಣ ಸಮಿತಿ ಹೀಗೆ ಒಟ್ಟು 8 ಉಪಸಮಿತಿ ಮಾಡಲಾಗುವುದು, ಇದರೊಂದಿಗೆ ವಾರ್ ರೂಮ್ ನಿರ್ಮಾಣ ಮಾಡಿದ್ದು, ಸಮಸ್ಯೆ ಬಂದಲ್ಲಿ ಕರೆ ಮಾಡಬಹುದು ಎಂದು ಮಾಜಿ ಶಾಸಕರು ಮಾಹಿತಿ ನೀಡಿದರು.
ಕೋವಿಡ್-19 ರಾಷ್ಟ್ರೀಯ ವಿಪತ್ತು, ಇದರಲ್ಲಿ ರಾಜಕೀಯ ಬೇಡ. ಎಂದು ಮಂಗಳೂರಿನಲ್ಲಿ ಮಾಜಿ ಶಾಸಕ ಜೆ. ಆರ್ ಲೋಬೋ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ