ಸಿಟಿಯೊಳಗೆ ಬಸ್‌ ಬೇ ನಿರ್ಮಾಣ; 1 ಕೋಟಿ ರೂ. ವೆಚ್ಚದಲ್ಲಿ ಟೆಂಡರ್‌ಗೆ ಸಿದ್ಧತೆ


Team Udayavani, Aug 3, 2021, 3:20 AM IST

ಸಿಟಿಯೊಳಗೆ ಬಸ್‌ ಬೇ ನಿರ್ಮಾಣ; 1 ಕೋಟಿ ರೂ. ವೆಚ್ಚದಲ್ಲಿ ಟೆಂಡರ್‌ಗೆ ಸಿದ್ಧತೆ

ಮಹಾನಗರ: ಸ್ಮಾರ್ಟ್‌ ಸಿಟಿಯಾಗಿ ರೂಪುಗೊಳ್ಳುತ್ತಿರುವ ಮಂಗಳೂ ರಿಗೆ ಪೂರವಾಗುವಂತೆ ನಗರದಲ್ಲಿನ ಪ್ರಮುಖ ಜಂಕ್ಷನ್‌ಗಳಲ್ಲಿ 1.09 ಕೋಟಿ ರೂ. ವೆಚ್ಚದಲ್ಲಿ ಬಸ್‌ ಬೇ ನಿರ್ಮಾಣಕ್ಕೆ ಮನಪಾ ಮುಂದಾಗಿದೆ.

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ನಗರದ ಬಂಟ್ಸ್‌ ಹಾಸ್ಟೆಲ್‌, ಮಲ್ಲಿಕಟ್ಟೆ, ಕೆಪಿಟಿ, ಮೇರಿಹಿಲ್‌, ಕುಲಶೇಖರ ಸಹಿತ ಇತರ ಜಂಕ್ಷನ್‌ಗಳಲ್ಲಿ ಬಸ್‌ ಬೇ ನಿರ್ಮಾಣ ಮಾಡುವ ಬಗ್ಗೆ ಕ್ರಿಯಾ ಯೋಜನೆಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಿದ್ದು, ಸದ್ಯದಲ್ಲೇ ಟೆಂಡರ್‌ ಕರೆಯಲು ನಿರ್ಧರಿಸಲಾಗಿದೆ. ಅದರೊಂದಿಗೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು ಪಾಲಿಕೆಯ ಉದ್ದೇಶ.

ಹಂಪನಕಟ್ಟೆ, ಬಂಟ್ಸ್‌ಹಾಸ್ಟೆಲ್‌, ಪಿ.ವಿ. ಎಸ್‌. ಜಂಕ್ಷನ್‌, ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ ಸಹಿತ ನಗರದ ವಿವಿಧ ಕಡೆಗಳಲ್ಲಿ ಬಸ್‌ ಲೇನ್‌ ಈಗಾಗಲೇ ಇದ್ದು, ಅದು ಸಮರ್ಪಕವಾಗಿ ವಿನಿಯೋಗವಾಗುತ್ತಿಲ್ಲ. ಅಲ್ಲಿಯ ಬಸ್‌ ಲೇನ್‌ ಅಭಿವೃದ್ಧಿಯ ಜತೆ ಮತ್ತೂ ಕೆಲವು ಜಂಕ್ಷನ್‌ಗಳಲ್ಲಿ ಅಗತ್ಯವಿದ್ದರೆ ಅಲ್ಲಿಯೂ ಬಸ್‌ ಬೇ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ.

ವೃತ್ತ, ಜಂಕ್ಷನ್‌ಗಳ ಅಭಿವೃದ್ಧಿ:

ಬಸ್‌ ಬೇ ನಿರ್ಮಾಣದ ಜತೆಯೇ ಪ್ರಮುಖ ವೃತ್ತ, ಜಂಕ್ಷನ್‌ಗಳ ಅಭಿವೃದ್ಧಿಗೂ ಮನಪಾ ಮುಂದಾಗಿದ್ದು, ಅದರಂತೆ, ನಗರದ ರಾಷ್ಟ್ರಕವಿ ಗೋವಿಂದ ಪೈ ವೃತ್ತ (ನವಭಾರತ ವೃತ್ತ), ಉರ್ವ ವೃತ್ತ ಅಭಿವೃದ್ಧಿಗೊಳ್ಳಲಿದೆ. ಹೊನ್ನಕಟ್ಟೆ ಜಂಕ್ಷನ್‌, ಕೆಎಸ್ಸಾರ್ಟಿಸಿ ಜಂಕ್ಷನ್‌ ಅಭಿವೃದ್ಧಿಗೆ ಪೂರಕ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಬಿಜೈ, ಕಂಕನಾಡಿ, ಪಿವಿಎಸ್‌ ಜಂಕ್ಷನ್‌, ಹಂಪನಕಟ್ಟೆ ಸಹಿತ ವಿವಿಧ ಕಡೆಗಳಲ್ಲಿನ ಜಂಕ್ಷನ್‌ ಅಭಿವೃದ್ಧಿ ಕಾಮಗಾರಿಗಳು ಸಾಗುತ್ತಿದೆ.

ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ “ನಗರದಲ್ಲಿ ಸುಗಮ ಸಂಚಾರಕ್ಕೆಂದು ಕೆಲವೊಂದು ಜಂಕ್ಷನ್‌ಗಳಲ್ಲಿ ಈಗಾಗಲೇ ಬಸ್‌ ಲೇನ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇವುಗಳು ಅವೈಜ್ಞಾನಿಕವಾಗಿದೆ. ಈ ಬಗ್ಗೆ ಈಗಾಗಲೇ ಪೊಲೀಸ್‌ ಆಯುಕ್ತರ ಗಮನಕ್ಕೂ ತಂದಿದ್ದೇವೆ. ಕೆಲವೊಂದು ಜಂಕ್ಷನ್‌ಗಳಲ್ಲಿನ ಬಸ್‌ ಲೇನ್‌ಗಳಲ್ಲಿ ಬಸ್‌ಗಳು ಸಾಲು ಸಾಲು ನಿಂತಿರುತ್ತವೆ. ಹೀಗಿದ್ದಾಗ ಮುಂದಿನ ಬಸ್‌ ನಿರ್ಗಮಿಸದೆ ಹಿಂದಿನ ಬಸ್‌ ಹೋಗಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಬಸ್‌ ಲೇನ್‌ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಪಾಲಿಕೆ ಬಸ್‌ ಬೇ ನಿರ್ಮಾಣಕ್ಕೆ ಮುಂದಾಗಿದೆ. ಆದರೆ ನಗರದಲ್ಲಿ ಅದಕ್ಕೆ ಅಷ್ಟೊಂದು ಜಾಗ ಇಲ್ಲ. ಆ ಬದಲು ಬಸ್‌ಗಾಗಿ ಪ್ರತ್ಯೇಕ ಲೇನ್‌ ನಿರ್ಮಾಣ ಮಾಡಬಹುದು’ ಎನ್ನುತ್ತಾರೆ.

ಲೇನ್‌ ತಪ್ಪುತ್ತಿದೆ  ಬಸ್‌ಗಳು ! :

ಸುಗಮ ಸಂಚಾರ ಸುಧಾರಣೆಯ ಉದ್ದೇಶದಿಂದ ನಗರದ ವಿವಿಧ ಕಡೆಗಳಲ್ಲಿ ಬಸ್‌ ಲೇನ್‌ ನಿರ್ಮಾಣ ಮಾಡಲಾಗಿದೆ. ಬಸ್‌ ಬೇ ನಿರ್ಮಾಣಕ್ಕೆ ಸ್ಥಳಾವಕಾಶದ ಕೊರತೆ ಇರುವ ಕಾರಣ ಲೇನ್‌ಗಳಾಗಿ ನಿರ್ಮಾಣ ಮಾಡಲಾಗಿದೆ. ಆದರೆ ಬಹುತೇಕ ಬಸ್‌ ಲೇನ್‌ ಒಳಗೆ ಬಸ್‌ಗಳು ಬರುತ್ತಿಲ್ಲ. ಬದಲಾಗಿ ರಸ್ತೆಯಲ್ಲೇ ನಿಲ್ಲುತ್ತಿವೆ. ಇನ್ನು ಬಸ್‌ ಲೇನ್‌ಗಳಲ್ಲಿ ಬಸ್‌ ಹೊರತುಪಡಿಸಿ ಇತರ ವಾಹನಗಳೂ ಸಂಚರಿಸುತ್ತಿವೆ. ಹೀಗಿದ್ದಾಗ ಹೊಸದಾಗಿ ಬಸ್‌ ಬೇ ನಿರ್ಮಾಣಕ್ಕೂ ಮುನ್ನ ಈ ರೀತಿಯ ಸಮಸ್ಯೆಗಳ ಬಗ್ಗೆಯೂ ಸ್ಥಳೀಯಾಡಳಿತ ಗಮನ ನೀಡಬೇಕಾಗಿದೆ.

ನಗರದ ಪ್ರಮುಖ ರಸ್ತೆಗಳು ವಾಹನ ದಟ್ಟಣೆಯಿಂದ ಕೂಡಿದ್ದು, ಸುಗಮ ವಾಹನ ಸಂಚಾರಕ್ಕೆ ಪ್ರಮುಖ ರಸ್ತೆಗಳಲ್ಲಿ ಬಸ್‌ ಬೇ ನಿರ್ಮಾಣ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ 1.9 ಕೋಟಿ ರೂ. ವೆಚ್ಚದಲ್ಲಿ ಬಸ್‌ ಬೇ ನಿರ್ಮಿಸಲು ಮುಂದಾಗಿದ್ದೇವೆ. ಅದರಂತೆ ಸದ್ಯದಲ್ಲಿಯೇ ಟೆಂಡರ್‌ ಕರೆಯಲಾಗುವುದು. ಕೆಲವೊಂದು ಕಡೆಗಳಲ್ಲಿ ಬಸ್‌ ಲೇನ್‌ಗಳಿದ್ದು, ಅವುಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾ ಗುವುದು. -ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

 

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.