ನಾರಂಕೋಡಿ: ಬುಟ್ಟಿ ಹೆಣೆಯಲು ಶೆಡ್‌ ನಿರ್ಮಾಣಕ್ಕೆ ಅಸ್ತು


Team Udayavani, Aug 7, 2022, 10:18 AM IST

2

ಬಂಟ್ವಾಳ: ಬೋಳಂತೂರಿನ ನಾರಂಕೋಡಿಯ ಕಾಲನಿಯ ಆದಿವಾಸಿ ಕೊರಗ ಕುಟುಂಬಗಳು ತಮಗೆ ಬುಟ್ಟಿ ಹೆಣೆಯುವುದಕ್ಕೆ ಶೆಡ್‌ವೊಂದನ್ನು ನಿರ್ಮಿಸುವಂತೆ ಬೇಡಿಕೆ ಸಲ್ಲಿಸಿದ್ದು, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌(ಎನ್‌ಆರ್‌ಎಲ್‌ಎಂ) ಮೂಲಕ ಶೆಡ್‌ ನಿರ್ಮಾಣಕ್ಕೆ ಅಧಿಕಾರಿಗಳು ನಿರ್ಧರಿಸಿದ್ದಾರೆ. ಅದರ ನಿರ್ಮಾಣಕ್ಕೆ ಸೂಕ್ತ ಜಾಗ ಗುರುತಿಸಿ ಶೆಡ್‌ ನಿರ್ಮಿಸಲು ಪ್ರಯತ್ನಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಲ್ಲಿನ ಕೊರಗ ಕುಟುಂಬಗಳಿಗೆ ಬುಟ್ಟಿ ತಯಾರಿಯೇ ಜೀವನಾಧಾರವಾಗಿದ್ದು, ಚಿಕ್ಕದಾದ ಮನೆಗಳಲ್ಲಿ ವಾಸಿಸುವ ಅವರಿಗೆ ಮನೆಯಲ್ಲೇ ಬುಟ್ಟಿ ತಯಾರಿಸುವುದು ಸಮಸ್ಯೆಯಾಗುತ್ತಿದೆ. ಬೇಸಗೆಯಲ್ಲಾದರೆ ಹೊರಗೆ ಕುಳಿತು ಬುಟ್ಟಿ ಹೆಣೆಯಬಹುದಾಗಿದ್ದು, ಮಳೆಗಾಲದಲ್ಲಿ ಅದು ಸಾಧ್ಯವಿಲ್ಲ. ಕಾಡಿನಿಂದ ಹೊತ್ತು ತಂದ ಬಳ್ಳಿ ಗಳಿಗೆ ಸ್ವಲ್ಪ ನೀರು ಬಿದ್ದು ಕಪ್ಪಾದರೂ, ಮುಂದೆ ಅದರಿಂದ ಹೆಣೆದ ಬುಟ್ಟಿಗಳಿಗೆ ಬೇಡಿಕೆಯೇ ಇರುವುದಿಲ್ಲ.

ನಾರಂಕೋಡಿ ಕೊರಗ ಕಾಲನಿಯಲ್ಲಿ ಕಳೆದ 20 ವರ್ಷಗಳಿಂದ ಕೊರಗರು ವಾಸವಾಗಿದ್ದು, ಒಟ್ಟು 6 ಮನೆಗಳಲ್ಲಿ 13 ಮಂದಿ ವಾಸಿಸುತ್ತಿದ್ದಾರೆ. ಕಾಲನಿಯ ನಿವಾಸಿಗಳಾದ ಮೈರೆ, ಬಲ್ಲು, ಅಂಗಾರೆ, ಸುಜಿತ್‌ಕುಮಾರ್‌ ಅವರ ಕುಟುಂಬಗಳು ಬುಟ್ಟಿ ಹೆಣೆಯುವ ಕಾಯಕವನ್ನೇ ಮಾಡುತ್ತಿದೆ. ಹೀಗಾಗಿ ಎಲ್ಲರಿಗೂ ಅನುಕೂಲವಾಗುವಂತೆ ಶೆಡ್‌ ನಿರ್ಮಿಸಲು ಬೇಡಿಕೆಯನ್ನಿಟ್ಟಿದ್ದರು.

ʼಉದಯವಾಣಿ ಸುದಿನ’ದಲ್ಲಿ ವರದಿ

ಅವರ ಸಮಸ್ಯೆಗಳು ಸೇರಿದಂತೆ ಬುಟ್ಟಿ ಹೆಣೆಯುವುದಕ್ಕೆ ಶೆಡ್‌ ಬೇಡಿಕೆಯ ಕುರಿತು “ಉದಯವಾಣಿ ಸುದಿನ’ದಲ್ಲಿ ಜೂ. 15ರಂದು “ನಾರಂಕೋಡಿ ಕೊರಗ ಕಾಲನಿಗೆ ಬೇಕಿದೆ ಸೌಲಭ್ಯ; ಬುಟ್ಟಿ ಹೆಣೆಯಲು ಶೆಡ್‌ ಜತೆಗೆ ಹಲವು ಬೇಡಿಕೆ’ ಎಂಬ ಶೀರ್ಷಿಕೆಯಲ್ಲಿ ಸಚಿತ್ರ ವಿಶೇಷ ವರದಿ ಪ್ರಕಟಿಸಲಾಗಿತ್ತು.

ಈ ವರದಿಗೆ ಸ್ಪಂದನೆ ಎಂಬಂತೆ ಶೆಡ್‌ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಅಂದಿನ ದ.ಕ.ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ (ಐಟಿಡಿಪಿ)ಯ ಅಧಿಕ ಯೋಜನಾ ಸಮನ್ವಯಾಧಿಕಾರಿ ಗಾಯತ್ರಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಅಂದಿನ ಸಹಾಯಕ ನಿರ್ದೇಶಕಿ ಜಯಶ್ರೀ ಅವರಿಗೆ ಆದೇಶಿಸಿದ್ದರು. ಅದರಂತೆ ಜಯಶ್ರೀ ಅವರು ಸ್ಥಳಕ್ಕೆ ಭೇಟಿ ನೀಡಿ ಗುರುತಿಸಿರುವ ಸ್ಥಳ ಸರಕಾರಿ ಅಥವಾ ಅರಣ್ಯ ಇಲಾಖೆಗೆ ಸೇರುತ್ತದೆಯೇ ಎಂದು ವರದಿ ನೀಡುವಂತೆ ಸ್ಥಳೀಯ ಗ್ರಾಮಕರಣಿಕರಿಗೆ ಸೂಚಿಸಿದ್ದರು. ಆದರೆ ಬಳಿಕ ಐಟಿಡಿಪಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎರಡೂ ಅಧಿಕಾರಿಗಳು ವರ್ಗಾವಣೆಗೊಂಡಿದ್ದರು.

ಸೂಕ್ತ ಸ್ಥಳ ನಿಗದಿ ಮಾಡಿ ಶೆಡ್‌

ಪ್ರಸ್ತುತ ಐಟಿಡಿಪಿಯ ಪ್ರಭಾರ ಯೋಜನಾ ಸಮನ್ವಯಾಧಿಕಾರಿಯಾಗಿರುವ ರಶ್ಮಿ ಎಸ್‌.ಆರ್‌. ಅವರು ಶೆಡ್‌ ನಿರ್ಮಾಣದ ಕುರಿತು ದ.ಕ.ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್‌ ಅವರ ಜತೆ ಚರ್ಚೆ ನಡೆಸಿದ್ದು, ಅವರು ಎನ್‌ಆರ್‌ಎಲ್‌ಎಂ ಮೂಲಕ ಶೆಡ್‌ ನಿರ್ಮಿಸುವ ಕುರಿತು ಸೂಚಿಸಿದ್ದಾರೆ. ಹೀಗಾಗಿ ಮುಂದೆ ಸೂಕ್ತ ಸ್ಥಳ ನಿಗದಿ ಮಾಡಿ ಶೆಡ್‌ ನಿರ್ಮಿಸುವುದಾಗಿ ರಶ್ಮಿ ಎಸ್‌.ಆರ್‌.ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.