ಹಾಸ್ಪಾರೆ- ಕಲ್ಲುಗುಡ್ಡೆ  ಸಂಪರ್ಕ ಕಿರುಸೇತುವೆ ಕಾಮಗಾರಿ ಸ್ಥಗಿತ 


Team Udayavani, Apr 7, 2018, 12:33 PM IST

7-April-11.jpg

ಬೆಳ್ಳಾರೆ: ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಾಸ್ಪಾರೆ- ಕಲ್ಲುಗುಡ್ಡೆ ಸಂಪರ್ಕದ ಕಿರುಸೇತುವೆ ಕಾಮಗಾರಿ ಅಪೂರ್ಣಗೊಂಡಿದ್ದು, ಇಲ್ಲಿಯ ಮಲೆಕುಡಿಯ ಜನಾಂಗ ಸಹಿತ ಸ್ಥಳೀಯ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. 

ಹಾಸ್ಪಾರೆ ಮತ್ತು ಕಲ್ಲುಗುಡ್ಡೆ ಪ್ರದೇಶದಲ್ಲಿ ತೋಡೊಂದು ಮಳೆಗಾಲದಲ್ಲಿ ತುಂಬಿ ಹರಿಯುತ್ತದೆ. ಇಲ್ಲಿನ ಮಲೆಕುಡಿಯ ಸಮುದಾಯ ಹಾಗೂ ಸ್ಥಳೀಯರು ಇದೇ ದಾರಿಯನ್ನು ಅವಲಂಬಿಸಿದ್ದು, ಮಳೆಗಾಲದಲ್ಲಿ ಸಂಪರ್ಕಕ್ಕೆ ನರಕಯಾತನೆ ಅನುಭವಿಸಿಕೊಂಡು ಬರುತ್ತಿದ್ದರು. ತೋಡಿಗೆ ಸೇತುವೆ ನಿರ್ಮಾಣ ಮಾಡಿಕೊಡಬೇಕೆಂದು ಈ ಭಾಗದ ಜನರು ಸಂಬಂಧಪಟ್ಟ ಇಲಾಖೆಗೆ ಹಾಗೂ ಜನಪ್ರತಿನಿಧಿಗಳಿಗೆ ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ 2015ರಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಕಿರು ಸೇತುವೆ ನಿರ್ಮಾಣಕ್ಕೆ 6 ಲಕ್ಷ ರೂ. ಮಂಜೂರಾಗಿತ್ತು. ಈ ಅನುದಾನದಲ್ಲಿ ಸೇತುವೆ ನಿರ್ಮಾಣದ ಕೆಲಸಗಳು ಪ್ರಾರಂಭವಾಗಿ, ಬಳಿಕ ಅನುದಾನದ ಕೊರತೆಯಿಂದ  ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು.

ಅನಂತರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ 16 ಲಕ್ಷ ರೂ. ಮಂಜೂರುಗೊಂಡು ಕಾಮಗಾರಿ ಒಟ್ಟು 22 ಲಕ್ಷ ರೂ. ಅನುದಾನದಲ್ಲಿ ಪುನಃ ಪ್ರಾರಂಭಗೊಂಡಿತ್ತು. ಮರುಜೀವ ಪಡೆದಿದ್ದ ಕಾಮಗಾರಿಯು ಅಪೂರ್ಣವಾಗಿ ನಿಂತಿದ್ದು, ಈ ಭಾಗದ ಜನರನ್ನು ಇನ್ನಷ್ಟು ಸಮಸ್ಯೆಗೆ ಒಡ್ಡಿದೆ.

ರಸ್ತೆ ಬ್ಲಾಕ್‌
ಕಾಮಗಾರಿಯ ಸಂದರ್ಭ ರಸ್ತೆಯ ಎರಡೂ ಬದಿಯನ್ನು ಅಗೆದು ಪಿಲ್ಲರ್‌ಗಳನ್ನು ಸ್ಥಾಪಿಸಲಾಗಿತ್ತು. ಸೇತುವೆಯ ಎರಡೂ ಬದಿಯಿಂದ ಮಣ್ಣು ತೆಗೆದು ಕಲ್ಲಿನಿಂದ ಕಟ್ಟಿಕೊಡದ ಹಿನ್ನೆಲೆಯಲ್ಲಿ ಮೂಲ ಸಂಚಾರಕ್ಕೂ ತೊಡಕಾಗಿದೆ. ಹಾಸ್ಪಾರೆ – ಕಲ್ಲುಗುಡ್ಡೆ ಭಾಗಕ್ಕೆ ಈಗ ವಾಹನ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಎರಡು ದಿನಗಳ ಹಿಂದೆ ಸುರಿದ ಮಳೆಗೆ ಸೇತುವೆಯ ಬದಿಗಳಲ್ಲಿ ಇದ್ದ ಮಣ್ಣು ಕೊಚ್ಚಿಕೊಂಡು ಹೋದ ಪರಿಣಾಮ ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಿದೆ.

ಸಮಸ್ಯೆಗೊಳಗಾದ ಅಂಗವಿಕಲರು
ರಸ್ತೆಯನ್ನು ಗೆದಿರುವ ಪರಿಣಾಮ ಈ ಭಾಗದ ಜನರು ದಿನನಿತ್ಯ ಕೃಷಿ ಉತ್ಪನ್ನಗಳನ್ನು ತಲೆಹೊರೆಯಲ್ಲಿ ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿ ಈಗ ನಿರ್ಮಾಣವಾಗಿದೆ. ಇಲ್ಲಿ ಕೆಲವು ಮನೆಗಳಲ್ಲಿ ಅಂಗವಿಕಲರಿದ್ದು, ಅವರಿಗೆ ತೀರಾ ಸಂಕಷ್ಟ ಎದುರಾಗಿದೆ. ವಯೋವೃದ್ಧರು, ಅಂಗವಿಕಲರನ್ನು ಆಸ್ಪತ್ರೆಗಳಿಗೆ ಎತ್ತಿಕೊಂಡೇ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ. ಉದ್ಭವಿಸಿರುವ ಸಮಸ್ಯೆಯನ್ನು ಅರಿತು ಸಂಬಂಧಪಟ್ಟ ಇಲಾಖೆ ಸೇತುವೆ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಎರಡು ದಿನಗಳಲ್ಲಿ ಆರಂಭ
ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಸೇತುವೆಯ ಬದಿಗೆ ಮಣ್ಣು ಹಾಕಿ ರಸ್ತೆಗೆ ಸಮತಟ್ಟು ಮಾಡಿ ಕೊಡಲು ಬಾಕಿ ಉಳಿದಿದೆ. ಅದನ್ನು ಎರಡು ದಿವಸದಲ್ಲಿ ಗುತ್ತಿಗೆದಾರರು ಕೆಲಸ ಪ್ರಾರಂಭಿಸಲಿದ್ದಾರೆ.
– ಹರೀಶ್‌
ಇಂಜಿನಿಯರ್‌ ನಿರ್ಮಿತಿ ಕೇಂದ್ರ

ಕಾನೂನು ಹೋರಾಟ
ಸ್ಥಳೀಯ ತೋಡಿಗೆ ಸೇತುವೆ ನಿರ್ಮಾಣವಾಗಬೇಕೆಂದು ಅನೇಕ ವರ್ಷಗಳಿಂದ ಶ್ರಮಿಸುತ್ತಿದ್ದೇವೆ. ಅನೇಕ ಬಾರಿ ನಾನು ಕಚೇರಿಗೆ ಅಲೆದಾಡಿದ್ದೇನೆ. ಈಗ ಸೇತುವೆ ಕಾಮಗಾರಿ ಪೂರ್ಣಗೊಂಡರೂ ರಸ್ತೆಯನ್ನು ಅಗೆದು ಸೇತುವೆಯ ಬದಿ ಕಟ್ಟಿಕೊಡದಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಇದರಿಂದ ಈ ಭಾಗದ ಜನರು ಸಹಿತ ಅಂಗವಿಕಲರಿಗೆ ಸಮಸ್ಯೆಯಾಗಿದೆ. ಕಾಮಗಾರಿ ಪೂರ್ಣಗೊಳಿಸದಿದ್ದರೆ ಕಾನೂನು ರೀತಿಯ ಹೋರಾಟ ಅನಿವಾರ್ಯ.
– ಜನಾರ್ದನ
ಸ್ಥಳೀಯರು

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.