ಕಂಟೈನರ್‌ ಲಾರಿ ತಡೆದು ಲಕ್ಷಾಂತರ ರೂ. ದರೋಡೆ


Team Udayavani, Apr 7, 2017, 11:32 AM IST

07-REPORTER-6.jpg

ಉಪ್ಪಿನಂಗಡಿ: ಮೀನು ಸಾಗಾಟದ ಕಂಟೈನರ್‌ ಲಾರಿಯೊಂದನ್ನು ಅಡ್ಡಗಟ್ಟಿದ ದರೋಡೆಕೋರರ ತಂಡವೊಂದು ಲಾರಿಯಲ್ಲಿದ್ದವರನ್ನು ಬೆದರಿಸಿ ಅವರಿಂದ ಮೊಬೈಲ್‌ ಹಾಗೂ ಲಕ್ಷಾಂತರ ರೂಪಾಯಿ ದರೋಡೆಗೈದು ಪರಾರಿಯಾದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗಡಿ ಬಳಿ ಗುರುವಾರ ನಸುಕಿನಲ್ಲಿ ನಡೆದಿದೆ.

ಲಾರಿ ಚಲಾಯಿಸುತ್ತಲೇ ದರೋಡೆಗೈದರು
ಗಂಗೊಳ್ಳಿಯಿಂದ ಚೆನ್ನೈಗೆ ಮೀನು ತೆಗೆದುಕೊಂಡು ಹೋಗಿದ್ದ ಕಂಟೈನರ್‌ ಲಾರಿಯೊಂದು ಮೀನನ್ನು ಇಳಿಸಿ ಗಂಗೊಳ್ಳಿಗೆ ವಾಪಸಾಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಶಿರಾಡಿ ಘಾಟಿಯಿಂದಲೇ ಕಪ್ಪು ಇನ್ನೋವಾ ವಾಹನವೊಂದು ಇವರ ಲಾರಿಯನ್ನು ಬೆನ್ನತ್ತಿ ಬಂದಿದ್ದು, ನಸುಕಿನ ಜಾವ ಸುಮಾರು 2ರಿಂದ 2:30ರ ಸುಮಾರಿಗೆ ಶಿರಾಡಿ ಗಡಿಯಿಂದ  ಸುಮಾರು ಮೂರು ಕಿ.ಮೀ. ನಿರ್ಜನ ಪ್ರದೇಶದಲ್ಲಿ ಲಾರಿಗೆ ಅಡ್ಡವಾಗಿ ನಿಂತುಕೊಂಡಿದೆ. ಕೂಡಲೇ ಇನ್ನೋವಾದಿಂದ ಚಾಕು ಹಾಗೂ ಪಿಸ್ತೂಲ್‌ ಹಿಡಿದ ಮೂವರು ಕೆಳಗಿಳಿದು ಲಾರಿಗೆ ಹತ್ತಿದ್ದು, ಅವರಲ್ಲಿ ಒಬ್ಟಾತ ಚಾಲಕ ವಿಘ್ನೇಶ್‌ನನ್ನು ಎಳೆದು ಡ್ರೈವಿಂಗ್‌ ಸೀಟ್‌ನಲ್ಲಿ ಕುಳಿತುಕೊಂಡಿದ್ದಾನೆ. ಇನ್ನಿಬ್ಬರು ಚಾಕು ಹಾಗೂ ಪಿಸ್ತೂಲ್‌ ಹಿಡಿದು ಲಾರಿಯಲ್ಲಿದ್ದ ಚಾಲಕ ವಿಘ್ನೇಶ್‌, ಕ್ಲೀನರ್‌ ತಬ್ರಾಝ್, ಲೈನರ್‌ಗಳಾದ ಚೇತನ್‌, ಅರುಣ್‌ ಅವರನ್ನು ಬೆದರಿಸಿ, ಹಣಕ್ಕಾಗಿ ಪೀಡಿಸತೊಡಗಿದ್ದಾರೆ. ಆ ಸಂದರ್ಭ ಲಾರಿ ಚಾಲಕ ವಿಘ್ನೇಶ್‌ ತನ್ನ ಕಿಸೆಯಲ್ಲಿದ್ದ 15 ಸಾವಿರ ರೂಪಾಯಿಯನ್ನು ಅವರಿಗೆ ನೀಡಿದ್ದು, ಇನ್ನು ನಮ್ಮ ಬಳಿ ಹಣವಿಲ್ಲವೆಂದು ತಿಳಿಸಿದ್ದಾರೆ. ಆದರೆ ಅದನ್ನೊಪ್ಪದ ದರೋಡೆಕೋರರು ಇವರನ್ನು ಕೊಲ್ಲುವುದಾಗಿ ಬೆದರಿಸಿ, ಇನ್ನಷ್ಟು ಹಣಕ್ಕೆ ಪೀಡಿಸಿದ್ದು, ಆಗ  ಲಾರಿಯ ಡ್ಯಾಷ್‌ ಬೋರ್ಡ್‌ ನಲ್ಲಿಡಲಾಗಿದ್ದ ಮೀನು ವ್ಯವಹಾರದ ಹಣವಾದ ಸುಮಾರು 5 ರಿಂದ 6ಲಕ್ಷ ರೂಪಾಯಿಯ ಹಣದ ಕಟ್ಟನ್ನು ಲಾರಿಯಲ್ಲಿದ್ದವರು ನೀಡಿದ್ದು, ಅದನ್ನು ತೆಗೆದುಕೊಂಡ ದರೋಡೆಕೋರರು ಲಾರಿಯಲ್ಲಿದ್ದ ವರ ನಾಲ್ಕು ಮೊಬೈಲ್‌ಗ‌ಳನ್ನು ಕಿತ್ತುಕೊಂಡಿದ್ದಾರೆ. ಶಿರಾಡಿ ಗಡಿ ಹಾಗೂ ಗುಂಡ್ಯದ ನಡುವೆ ಸುಮಾರು ಅರ್ಧ ಗಂಟೆ ತನಕ ದರೋಡೆ ಕೋರರೇ ಲಾರಿ ಚಲಾಯಿಸಿದ್ದು, ಹಣ, ಸೊತ್ತು ಸಿಕ್ಕಿದ ಬಳಿಕವಷ್ಟೇ ಲಾರಿ ಹಿಂಬದಿ ಬರುತ್ತಿದ್ದ ಇನ್ನೋವಾ ಕಾರಿನಲ್ಲಿ ಹತ್ತಿ ಪರಾರಿಯಾಗಿದ್ದಾರೆ. ದರೋಡೆಕೋರರು ಬೆಂಗಳೂರು ಕನ್ನಡ, ತುಳು ಹಾಗೂ ಮುಸ್ಲಿಂ ಭಾಷೆ ಮಾತನಾಡುತ್ತಿದ್ದರೆನ್ನಲಾಗಿದೆ. ದರೋಡೆಕೋರರಿದ್ದ ಇನ್ನೋವಾ ವಾಹನದ ನಂಬರನ್ನು ಲಾರಿಯಲ್ಲಿ ದ್ದವರು ದಾಖಲಿಸಿ ಕೊಂಡಿದ್ದು, ಅದನ್ನು ಪೊಲೀಸರಿಗೆ ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ವಿಳಂಬವಾಗಿ ಪೊಲೀಸರಿಗೆ ಮಾಹಿತಿ
ಘಟನೆ ನಸುಕಿನ ಜಾವ 2ರಿಂದ 2:30ರ ಅವಧಿಯಲ್ಲಿ ನಡೆದಿದ್ದರೂ ಪೊಲೀಸರಿಗೆ ಮಾತ್ರ ಈ ವಿಷಯ ಗೊತ್ತಾಗುವಾಗ ಬೆಳಗ್ಗಿನ ಜಾವ ಸುಮಾರು 4 ಗಂಟೆ ಯಾಗಿತ್ತು. ದರೋಡೆ ನಡೆದ ಸ್ಥಳ ನಿರ್ಜನ ಪ್ರದೇಶವಾಗಿದ್ದರೂ ಬಳಿಕ ಸಿಗುವ ಗುಂಡ್ಯದಲ್ಲಿ ಚೆಕ್‌ಪೋಸ್ಟ್‌, ಅಂಗಡಿ, ಹೊಟೇಲ್‌ಗ‌ಳಿವೆ. ಆದರೆ ದರೋಡೆ ನಡೆದ ಬಳಿಕ ಗೊಂದಲಕ್ಕೀಡಾದ ಲಾರಿಯವರು ಲಾರಿಯನ್ನು ಎಲ್ಲಿಯೂ ನಿಲ್ಲಿಸದೇ ಪೆರಿಯಶಾಂತಿಯ ಮೂಲಕ ಕೊಕ್ಕಡಕ್ಕೆ ತೆರಳಿ, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದರೋಡೆ ನಡೆದ ವಿಷಯ ತಿಳಿಸಿದ್ದಾರೆ. ದರೋಡೆ ಬಗ್ಗೆ ಬಳಿಕ ಮಾಹಿತಿ ಪಡೆದ ಪೊಲೀಸರು ತತ್‌ಕ್ಷಣವೇ ಉಪ್ಪಿನಂಗಡಿ ಠಾಣೆಗೆ ಮಾಹಿತಿ ನೀಡಿದ್ದು, ಅದು ದರೋಡೆ ನಡೆದ ಸ್ಥಳ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಾಗಿರುವುದರಿಂದ ದರೋಡೆಗೊಳಗಾದವರನ್ನು ಲಾರಿ ಸಮೇತ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.