ಕಾಮಗಾರಿ ಪೂರ್ಣಗೊಂಡರೂ ತಡೆ ಮುಂದುವರಿಕೆ

ಮಲೆಯಾಳ-ಐನಕಿದು ಹರಿಹರ ರಸ್ತೆಗೆ ಕಾಂಕ್ರೀಟ್‌

Team Udayavani, Jul 29, 2019, 5:56 AM IST

2807SUB2

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಭಾಗದಿಂದ ಸಂಪರ್ಕ ಕಲ್ಪಿಸುವ ಮಲೆಯಾಳ-ಹರಿಹರ ರಸ್ತೆಯ ಕಾಂಕ್ರೀಟ್‌ ಕಾಮಗಾರಿಗಾಗಿ ಕೆಲ ಸಮಯಗಳಿಂದ ಸಂಚಾರ ನಿರ್ಬಂಧಿಸಲಾಗಿದೆ. ಕಾಮಗಾರಿ ಪೂರ್ಣಗೊಂಡು ಅನೇಕ ದಿನಗಳು ಕಳೆದಿದ್ದರೂ ಈ ಮಾರ್ಗವನ್ನು ಇನ್ನೂ ಚತುಷ್ಪಥ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿಲ್ಲ. ಇದರಿಂದ ತೊಂದರೆ ಎದುರಿಸುವಂತಾಗಿದೆ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಲೆಯಾಳ-ಐನಕಿದು ಮಾರ್ಗದಲ್ಲಿ ಮಲೆಯಾಳ ಬಳಿ 300 ಮೀ.ನಷ್ಟು ದೂರ ಮತ್ತು ಕೆದಿಲ ಬಳಿ 60 ಮೀ. ಕಾಂಕ್ರೀಟ್‌ ಕಾಮಗಾರಿ ನಡೆಸಲಾಗಿತ್ತು. ಎರಡು ಕಡೆ ಕಾಂಕ್ರೀಟ್‌ ಕಾಮಗಾರಿ ನಡೆಯುವ ಸಂದರ್ಭದಲ್ಲಿ ವಾಹನಗಳು ಓಡಾಡದಂತೆ ಮಲೆಯಾಳ ಬಳಿ ರಸ್ತೆಯ ಎರಡು ಬದಿಗೆ ಅಡ್ಡಲಾಗಿ ಮಣ್ಣು ಸುರಿದು ನಿರ್ಬಂಧಿಸಲಾಗಿತ್ತು.

ಇನ್ನೂ ಮುಕ್ತಗೊಂಡಿಲ್ಲ
ಕಾಮಗಾರಿ ನಡೆದು ಅನೇಕ ದಿನಗಳಾಗಿವೆ. ರಸ್ತೆಯನ್ನು ಇನ್ನೂ ಸಂಚಾರಕ್ಕೆ ಮುಕ್ತವಾಗಿಸುವ ಆಸಕ್ತಿ ತೋರುತಿಲ್ಲ. ಈ ಮಾರ್ಗದಲ್ಲಿ ಸಾರಿಗೆ ಬಸ್‌ ಸಹಿತ ಚತುಷ್ಪಥ ವಾಹನಗಳು ತೆರಳಲು ಸಾಧ್ಯವಾಗುತಿಲ್ಲ. ಇದರಿಂದ ಬಹಳಷ್ಟು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹರಿಹರ, ಬಾಳುಗೋಡು, ಐನಕಿದು, ಕೊಲ್ಲಮೊಗ್ರು, ಕಲ್ಮಕಾರು ಭಾಗದಿಂದ ಸುಬ್ರಹ್ಮಣ್ಯ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸುತ್ತಿ ಬಳಸಿ ನಡುಗಲ್ಲು ಮಾರ್ಗವಾಗಿ ತೆರಳುತ್ತಿದ್ದಾರೆ. ದೂರದೂರಿಗೆ ತೆರಳುವ ನಾಗರಿಕರು ತೊಂದರೆಗೆ ಒಳಗಾಗುತ್ತಿದ್ದಾರೆ ಎಂದು ಸ್ಥಳೀಯರು ಅಳಲು ತೋಡಿಕೊಳ್ಳುತ್ತಾರೆ.

ಬದಲಿ ರಸ್ತೆ ಇರಲಿಲ್ಲ
ದ್ವಿಚಕ್ರ ವಾಹನಗಳಿಗೆ ತೆರಳಲು ಪರ್ಯಾಯ ದಾರಿ ಮಾಡಿ ಕೊಡದೆ ರಸ್ತೆ ಬಂದ್‌ಗೊಳಿಸಿದ್ದರಿಂದ ಬಹಳಷ್ಟು ತೊಂದರೆ ಅನುಭವಿಸಬೇಕಾಯಿತು. ಬಳಿಕ ತಹಶೀಲ್ದಾರ್‌ ಅವರ ಗಮನಕ್ಕೆ ಸ್ಥಳೀಯರು ತಂದ ಮೇರೆಗೆ ಅಧಿಕಾರಿಗಳಿಗೆ ಸೂಚಿಸಿ ದ್ವಿಚಕ್ರ ವಾಹನ ಮಾತ್ರ ತೆರಳಲು ಅವಕಾಶ ಮಾಡಿಕೊಟ್ಟಿದ್ದರು. ಸ್ಥಳೀಯರು ದ್ವಿಚಕ್ರ ವಾಹನ ತೆರಳುವಷ್ಟು ಜಾಗ ಮಾಡಿಕೊಟ್ಟು ಸಹಕರಿಸಿದ್ದರು.

ಮಣ್ಣು ತೆರವಿಗೆ ಒತ್ತಾಯ
ಈ ರಸ್ತೆಯ ಹಲವೆಡೆ ಹಾಳಾಗಿದ್ದು, ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕಾಮಗಾರಿ ಬಳಿಕ ರಸ್ತೆಯನ್ನು ಸ್ವತ್ಛಗೊಳಿಸದೆ ಹಾಗೆಯೇ ಬಿಡಲಾಗಿದೆ. ಇದರಿಂದ ದ್ವಿಚಕ್ರ ವಾಹನದವರಿಗೂ ಸಮಸ್ಯೆಯಾಗುತ್ತಿದೆ. ರಸ್ತೆಯನ್ನು ಸ್ವತ್ಛಗೊಳಿಸುವುದರ ಜತೆಗೆ ಚತುಷ್ಪಥ ವಾಹನಗಳ ಸಂಚಾರಕ್ಕೆ ಶೀಘ್ರ ಅವಕಾಶ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ರಸ್ತೆ ಕಾಮಗಾರಿ ನಡೆಸುವ ವೇಳೆ ತಡೆಗೆಂದು ಸುರಿದ ಮಣ್ಣನ್ನು ಪೂರ್ಣ ಪ್ರಮಾಣದಲ್ಲಿ ತೆರವುಗೊಳಿಸುವಂತೆಯೂ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.