ಅಭಿವೃದ್ಧಿಯಲ್ಲಿ ಹಿಂದಿದ್ದರೂ ಮತದಾನದಲ್ಲಿ ಮುಂದು !


, Apr 20, 2019, 8:29 PM IST

Udayavani Kannada Newspaper

ಬೆಳ್ತಂಗಡಿ: ಮೂಲ ಸೌಕರ್ಯಗಳಿಂದ ವಂಚಿತವಾಗಿ ದ.ಕ. ಜಿಲ್ಲೆಯ ಅತ್ಯಂತ ಹಿಂದುಳಿದ ಪ್ರದೇಶವಾಗಿ ಗುರುತಿಸಲ್ಪಟ್ಟಿರುವ ಬೆಳ್ತಂಗಡಿ ತಾ|ನ ಬಂಜಾರು ಪ್ರದೇಶವು ದೇಶದ ಪ್ರಜಾಪ್ರಭುತ್ವ ಹಬ್ಬದಲ್ಲಿ ದೊಡ್ಡ ಸಾಧನೆಯನ್ನೇ ಮಾಡಿದೆ. ಮೂಲ ಸೌಕರ್ಯದಲ್ಲಿ ಇದು ಹಿಂದೆ ಬಿದ್ದರೂ ಚುನಾವಣೆಯಲ್ಲಿ ಇಲ್ಲಿ ಅತಿ ಹೆಚ್ಚಿನ ಮತದಾನವಾಗಿದೆ.

ಎ. 18ರಂದು ನಡೆದ ಲೋಕಸಭಾ ಚುನಾವಣೆ ಮತದಾನದಲ್ಲಿ ಬಂಜಾರು ಮತಗಟ್ಟೆಯಲ್ಲಿ ಕೇವಲ 5 ಮಂದಿ ಮಾತ್ರ ಮತ ಚಲಾಯಿಸಿಲ್ಲ ! ಹೀಗಾಗಿ ಇಲ್ಲಿನ ಮತದಾನ ಪ್ರಮಾಣ ಶೇ. 95.28. ನೆರಿಯ ಗ್ರಾ.ಪಂ. ವ್ಯಾಪ್ತಿಯ ಬಂಜಾರು ಪ್ರದೇಶದ ಮತದಾರರಿಗೆ ಅಲ್ಲಿನ ಸಮುದಾಯ ಭವನದಲ್ಲಿ ಮತಗಟ್ಟೆಯ (ಮತಗಟ್ಟೆ ಸಂಖ್ಯೆ 86) ವ್ಯವಸ್ಥೆ ಮಾಡಲಾಗಿತ್ತು.

ಇಲ್ಲಿ 52 ಪುರುಷರು ಹಾಗೂ 54 ಮಹಿಳೆಯರು ಸಹಿತ ಒಟ್ಟು 106 ಮಂದಿ ಮತದಾರರಿದ್ದಾರೆ. ಇವರಲ್ಲಿ ಒಟ್ಟು 101 ಮಂದಿ ಮತ ಚಲಾಯಿಸಿ ದ್ದಾರೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನವಾದ ಮತಗಟ್ಟೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಈ ಮೂಲಕ ಇಲ್ಲಿನ ಮತದಾರರು ಮಾದರಿಯಾಗಿದ್ದಾರೆ.

ತಮ್ಮೂರಿನ ಸಣ್ಣಪುಟ್ಟ ಸಮಸ್ಯೆ ಗಳನ್ನು ಮುಂದಿಟ್ಟುಕೊಂಡು ಮತದಾನ ಬಹಿಷ್ಕಾರದ ಬೆದರಿಕೆ ಹಾಕುವವರು ಇವರ ಅಭಿಮಾನವನ್ನು ಗಮನಿಸಲೇ ಬೇಕು. ಬಂಜಾರಿನ ಅಭಿವೃದ್ಧಿಯನ್ನು ಗಮನಿಸಿದರೆ ಇವರು ಮತದಾನದಲ್ಲಿ ಪಾಲ್ಗೊಳ್ಳುವುದೇ ವಿಶೇಷ ಎನಿಸ ಬಹುದು. ಅಂದರೆ ರಸ್ತೆ ಸಂಪರ್ಕ, ವಿದ್ಯುತ್‌ ಸಂಪರ್ಕ ಹೀಗೆ ಎಲ್ಲ ಮೂಲ ಸೌಕರ್ಯಗಳಿಂದಲೂ ಈ ಭಾಗದ ಮಂದಿ ವಂಚಿತರಾಗಿದ್ದಾರೆ.

ಸರಕಾರದ ಇಬ್ಬಗೆಯ ನೀತಿಯಿಂ ದಾಗಿ ತಮ್ಮ ಭೂಮಿ ಕಳೆದುಕೊಳ್ಳುವ ಭೀತಿಯೂ ಇವರಿಗಿದೆ. ಆದರೆ ಇವೆಲ್ಲ ವನ್ನೂ ಮೀರಿ ನಿಂತ ಇಲ್ಲಿನ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ 241 ಮತಗಟ್ಟೆಗಳಲ್ಲಿ ಒಟ್ಟು ಶೇ. 80.92 ಮತದಾನವಾಗಿದ್ದು, 3 ಮತಗಟ್ಟೆಗಳು ಶೇ. 90 ಗಡಿ ದಾಟಿದೆ. ಬಂಜಾರು ಸಹಿತ ಬಾರ್ಯ ಪೆರಿಯೊಟ್ಟು ಮತಗಟ್ಟೆ ಸಂಖ್ಯೆ 225 (ಒಟ್ಟು ಶೇ. 91.60), ಇಂದಬೆಟ್ಟು ದೇವನಾರಿ ಮತಗಟ್ಟೆ ಸಂಖ್ಯೆ 31 ( ಶೇ. 90.11)ರಲ್ಲಿ ಮತದಾನ ಪ್ರಮಾಣ ಶೇ. 90 ದಾಟಿದೆ.

ಲೆಕ್ಕಾಚಾರದಲ್ಲಿ ಶೇ. 99.06
ಬಂಜಾರು ಮತಗಟ್ಟೆಯಲ್ಲಿ ಒಟ್ಟು 106 ಮಂದಿ ಮತದಾರರಿದ್ದು, ಒಟ್ಟು 101 ಮಂದಿ ಮತ ಚಲಾಯಿಸಿದ್ದಾರೆ. ಇವರ ಜತೆಗೆ 4 ಮಂದಿ ಚುನಾವಣ ಸಿಬಂದಿಯೂ ಅದೇ ಮತಗಟ್ಟೆಯಲ್ಲಿ ಮತ ಹಾಕಿದ್ದು, ಹೀಗಾಗಿ ಅಲ್ಲಿ ಒಟ್ಟು 105 ಮಂದಿ ಮತಹಾಕಿದ್ದು, ಇದರಿಂದ ಇಲ್ಲಿನ ಮತದಾನ ಶೇ. 99.06ಕ್ಕೇರಿದೆ ಎಂದು ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಎಚ್‌.ಆರ್‌. ನಾಯಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.