ಶಾಲೆಗೆ ನಿರಂತರ ಗೈರು: ಮಕ್ಕಳ ಮನವೊಲಿಸಿ ಕಳುಹಿಸಿದ ಪೊಲೀಸ್!
Team Udayavani, Nov 6, 2019, 3:45 AM IST
ವಿಟ್ಲ: ಶಾಲೆಗೆ ಸತತ ಗೈರಾಗುತ್ತಿದ್ದ ವಿದ್ಯಾರ್ಥಿಗಳಿಬ್ಬರನ್ನು ಮರಳಿ ಶಾಲೆಗೆ ತೆರಳುವಂತೆ ಮಾಡುವಲ್ಲಿ ವಿಟ್ಲ ಠಾಣೆಯ ಬೀಟ್ ಪೊಲೀಸ್ ಸಿಬಂದಿಯೋರ್ವರು ಯಶಸ್ವಿಯಾಗಿದ್ದಾರೆ. ಇಡ್ಕಿದು ಗ್ರಾಮದ ಕೋಲ್ಪೆಯ ಗೋಪಾಲಕೃಷ್ಣ – ಸುಂದರಿ ದಂಪತಿಯ ಮಕ್ಕಳಾದ ಶ್ರವಣ್ ಕುಮಾರ್ ಮತ್ತು ನಮಿತಾ ಕೋಲ್ಪೆ ಪ್ರಾಥಮಿಕ ಶಾಲೆಯಲ್ಲಿ ಕ್ರಮವಾಗಿ 7 ಮತ್ತು 3ನೇ ತರಗತಿಯ ವಿದ್ಯಾರ್ಥಿಗಳು.
ಅವರೀರ್ವರೂ ಒಂದು ತಿಂಗಳಿಂದ ಶಾಲೆಗೆ ಹಾಜರಾಗಿರಲಿಲ್ಲ. ಕೂಲಿ ಕಾರ್ಮಿಕರಾದ ಹೆತ್ತವರು ಕೂಡ ಮಕ್ಕಳನ್ನು ಶಾಲೆಗೆ ಹೋಗುವಂತೆ ಹುರಿ ದುಂಬಿಸುವ ಮನಸ್ಸು ಮಾಡಿರಲಿಲ್ಲ. ಮಕ್ಕಳನ್ನು ಹೇಗಾ ದರೂ ಶಾಲೆಗೆ ಮರಳಿ ಕರೆತರಬೇಕೆಂದು ಯೋಚಿ ಸಿದ ಶಿಕ್ಷಕರಾದ ಶ್ರೀಪತಿ ನಾಯಕ್ ಮತ್ತು ಪ್ರವೀಣ್ ಕುಮಾರ್ ಅವರು ಬೀಟ್ ಪೊಲೀಸ್ ಬಾಲಕೃಷ್ಣ ಅವರ ನೆರವು ಯಾಚಿಸಿದರು. ಅದರಂತೆ ಮೂವರೂ ಜತೆಗೂಡಿ ಗೋಪಾಲಕೃಷ್ಣ ಅವರ ಮನೆಗೆ ತೆರಳಿ ಮಕ್ಕಳು ಮತ್ತು ಹೆತ್ತವರೊಂದಿಗೆ ಮಾತನಾಡಿದರು. ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ತಿಳಿಹೇಳಿ ಶಾಲೆಗೆ ಬರುವಂತೆ ಮನವೊಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ