ಕೂಳೂರು: ಸರ್ವಿಸ್‌ ರಸ್ತೆ ಹುಡುಕಿ ಕೊಡಿ!


Team Udayavani, Sep 26, 2017, 3:11 PM IST

26Mng-2.jpg

ಕೂಳೂರು : ಮಂಗಳೂರು ಉಡುಪಿ ನಡುವಿನ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 66 ಮಳೆಗಾಲದ ಆರಂಭದಲ್ಲೇ ಹೊಂಡ ಬಿದ್ದರೂ ಇದುವರೆಗೂ ದುರಸ್ತಿ ಆರಂಭವಾಗಿಲ್ಲ. ಇತ್ತ ಕೂಳೂರು ಕಾವೂರು ಸಂಪರ್ಕ ಕೊಂಡಿಯಂತಿರುವ ಸರ್ವಿಸ್‌ ರಸ್ತೆ ಸಂಪೂರ್ಣ ಮಾಯವಾಗಿದೆ.

ಡಾಮರು ಕಾಣದೆ ಮಣ್ಣಿನ ರಸ್ತೆಯಂತೆ ಭಾಸವಾಗುತ್ತಿದೆ. ರಸ್ತೆ ನಿರ್ವಹಣೆ ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಬೇಕಾಗಿರುವುದರಿಂದ ಹೆಜಮಾಡಿ ಬಳಿಕದ ರಾ.ಹೆ. ನಿರ್ವಹಣೆಗೂ ಇತ್ತ ಹೆದ್ದಾರಿ ಇಲಾಖೆ ನಿರ್ಮಿಸಿದ ರಸ್ತೆಗಳ ನಿರ್ವಹಣೆಗೂ ಅಜಗಜಾಂತರ ವ್ಯತ್ಯಾಸ ಎದ್ದು ಕಾಣುತ್ತಿದೆ.

ಕೂಳೂರು -ಕಾವೂರು ತಿರುವಲ್ಲೇ ಗುಂಡಿ!
ಈ ಹಿಂದೆ ಹೆದ್ದಾರಿಯಿಂದ ಕಾವೂರು ಕಡೆ ಹೋಗುವ ರಸ್ತೆಯನ್ನು ಕಾಂಕ್ರೀಟ್‌ ಹಾಕಲಾಗಿತ್ತು. ಆದರೆ ಒಳಚರಂಡಿ ಅವೈಜ್ಞಾನಿಕವಾಗಿ ನಿರ್ಮಿಸಿದ ಕಾರಣ ಈ ವೃತ್ತದಲ್ಲಿ ಮಳೆಗಾಲದಲ್ಲಿ ಕೆರೆಯೇ ನಿರ್ಮಾಣವಾಗುತ್ತಿತ್ತು. ಈ ಸಮಸ್ಯೆ ನಿವಾರಿಸ‌ಲು ಕಾಂಕ್ರೀಟ್‌ ಅಗೆದು ಗುಂಡಿ ತೋಡಲಾಗಿದ್ದು, ಒಂದು ವರ್ಷದಿಂದ ಇದುವರೆಗೂ ಸರಿಪಡಿಸಲಾಗಿಲ್ಲ. ಬೃಹತ್‌ ಗುಂಡಿಗೆ ಸುತ್ತಲೂ ಬ್ಯಾರಿಕೇಡ್‌ ಅಳವಡಿಸಲಾಗಿದ್ದು, ತಾತ್ಕಾಲಿಕ ದುರಸ್ತಿ ಇದೇ ಆಗಿದೆ!

ಕೂಳೂರು ಕಾವೂರು ವೃತ್ತ ಸುತ್ತಮುತ್ತ ಸರ್ವಿಸ್‌ ರಸ್ತೆಯ ಜಾಗವಿದ್ದು, ಕೇಂದ್ರದ ಆಡಳಿತಕ್ಕೊಳಪಟ್ಟ ಹೆದ್ದಾರಿ ಇಲಾಖೆಗೆ ಸಂಬಂಧಿಸಿದ್ದಾಗಿದೆ. ಹೀಗಾಗಿ ಇದನ್ನು ದುರಸ್ತಿ ಪಡಿಸಲು ಮಹಾನಗರ ಪಾಲಿಕೆಗೆ ಯಾವುದೇ ಅಧಿಕಾರವಿಲ್ಲ. ಇದರ ದುರಸ್ತಿಗೆ ಹೆದ್ದಾರಿ ಇಲಾಖೆಯನ್ನೇ ಅವಲಂಬಿಸಬೇಕಾಗಿದೆ.

ಪರ್ಯಾಯ ಮಾರ್ಗವೂ ಇಲ್ಲ
ಕಾವೂರು, ಕೂಳೂರು ಮೂಲಕ ಕೊಟ್ಟಾರ ಚೌಕಿ ತಲುಪುವ ಸರ್ವಿಸ್‌ ರಸ್ತೆ ನೋಡಿದರೆ ಯಾವುದೋ ಕುಗ್ರಾಮದ ರಸ್ತೆಯಲ್ಲಿ ಬಸ್ಸುಗಳು ಸಂಚರಿಸುವಂತೆ ಭಾಸವಾಗುತ್ತದೆ. ನೃತ್ಯ ಮಾಡುತ್ತಾ ಬಸ್ಸುಗಳು ಸಂಚರಿಸಿದರೆ ದ್ವಿಚಕ್ರ ಸವಾರರು ಹೊಂಡ ತಪ್ಪಿಸಲು ಹರ ಸಾಹಸ ಪಡುತ್ತಾರೆ. ನಿತ್ಯ ಈ ರಸ್ತೆಯಲ್ಲಿ 40ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಸಂಚರಿಸಿದರೆ ಸಾವಿರಾರು ಖಾಸಗಿ ಬೈಕ್‌, ಕಾರುಗಳು ಸಂಚರಿಸುತ್ತವೆ. ಒಂದೆಡೆ ಮೇಲ್ಸೇತುವೆ ಇರುವುದರಿಂದ ಪರ್ಯಾಯ ಮಾರ್ಗದಲ್ಲೂ ಸಂಚಾರಕ್ಕೆ ಇಲ್ಲಿ ರಸ್ತೆಯಿಲ್ಲ.

10 ಲಕ್ಷ ರೂ. ನಷ್ಟ
ಕೂಳೂರು ಮಂಗಳೂರಿನಿಂದ ಕೆಲವೇ ಕಿ.ಮೀ.ಗಳ ಅಂತರದಲ್ಲಿದೆ. ವಿಮಾನ ನಿಲ್ದಾಣ ರಸ್ತೆಯೂ ಆಗಿದೆ. ಹೀಗಾಗಿ ಈ ಪ್ರಮುಖ ಭಾಗವನ್ನು ಹೆದ್ದಾರಿ ಇಲಾಖೆ ನಿರ್ಲಕ್ಷ್ಯ ಮಾಡಿದೆ. ಒಂದೆರಡು ವರ್ಷಗಳಿಂದ ಸರ್ವಿಸ್‌ ರಸ್ತೆಯನ್ನು ದುರಸ್ತಿ ಮಾಡದೆ ಡಾಮರನ್ನು ಹುಡುಕುವಂತಾಗಿದೆ. ಮಂಗಳೂರು ಪಾಲಿಕೆಗೆ ಕಾವೂರು ತಿರುವು ವೃತ್ತವನ್ನು ಬಿಟ್ಟು ಕೊಡಿ ನಾವು ದುರಸ್ತಿ ಮಾಡುತ್ತೇವೆ ಎಂದು ಹೇಳಿದರೂ ಬಿಟ್ಟು ಕೊಡುತ್ತಿಲ್ಲ. ಸಾರ್ವಜನಿಕರು ಪಾಲಿಕೆಗೆ, ಪಾಲಿಕೆ ಸದಸ್ಯರಿಗೆ ಹಿಡಿ ಶಾಪ ಹಾಕುವಂತೆ ಆಗಿದೆ. ಕೂಳೂರು ಚರ್ಚ್‌ನ ಕೆಳಭಾಗದಲ್ಲಿ ಅಯ್ಯಪ್ಪ ಗುಡಿ ಮುಂಭಾಗ ನಿರ್ಮಿಸಿದ ಒಳಚರಂಡಿ ವ್ಯವಸ್ಥೆಯೂ ವಿಫಲವಾಗಿ ಸುಮಾರು 10 ಲಕ್ಷ ರೂ. ನಷ್ಟವಾಗಿದೆ.
ದಯಾನಂದ ಶೆಟ್ಟಿ, ಪಾಲಿಕೆ ಸದಸ್ಯ,ಪಂಜಿಮೊಗರು-ಕೂಳೂರು ವಾರ್ಡ್‌

ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.