Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

ಕಂಬಳ ಕೂಟಕ್ಕೆ ಸ್ಟಾರ್ ಸ್ಪರ್ಷ

Team Udayavani, Oct 1, 2023, 11:33 AM IST

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

ಮಂಗಳೂರು: ‘ಅಲೆ ಬುಡ್ಯೆರ್ ಎಂಬ ಘೋಷಣೆಯೊಂದಿಗೆ ಕರೆಯಲ್ಲಿ ಜೋಡಿ ಕೋಣಗಳ ವೀರೋಚಿತ ಓಟ, ಜತೆಗೆ ಹಗ್ಗ- ನೇಗಿಲು ಹಿಡಿದು ಓಡುವ ಓಟಗಾರ, ಕೋಣ ಗೆದ್ದ ಖುಷಿಯಲ್ಲಿ ಮೀಸೆ ತಿರುವುತ್ತಾ ಗತ್ತಿನ ಹೆಜ್ಜೆ ಹಾಕುವ ಯಜಮಾನರು, ಸ್ಟಾರ್ ಕೋಣಗಳ ಹಿಂದೆ ಅಭಿಮಾನಿಗಳ ದಂಡು, ಪ್ರೇಕ್ಷಕರ ಕರಾಡತನ…‘ ಇದುವರೆಗೆ ಕರಾವಳಿಗೆ ಸೀಮಿತವಾಗಿದ್ದ ಕಂಬಳ ಕೂಟದ ಈ ದೃಶ್ಯಗಳು ಇದೀಗ ರಾಜಧಾನಿ ಬೆಂಗಳೂರಿಗೂ ಪರಿಚಯವಾಗುತ್ತಿದೆ. ನವೆಂಬರ್ ತಿಂಗಳ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿಯ ಶ್ರೀಮಂತ ಸಂಸ್ಕೃತಿಯ ಅನಾವರಣವಾಗಲಿದೆ.

ಬೆಂಗಳೂರು ಕಂಬಳ ಆಯೋಜನೆಯ ಬಗ್ಗೆ ಮಂಗಳೂರಿನಲ್ಲಿ ಶನಿವಾರ ಕೋಣಗಳ ಯಜಮಾನರು ಮತ್ತು ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು. ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹಲವು ಮಾಹಿತಿ ಹಂಚಿಕೊಂಡರು.

ಬೆಂಗಳೂರು ಕಂಬಳಕ್ಕೆ ಸುಮಾರು 100ರಿಂದ 130ರಷ್ಟು ಜೊತೆ ಕೋಣಗಳು ಭಾಗವಹಿಸಲಿದ್ದು, ಕಂಬಳಕ್ಕೆ ಎರಡು ದಿನಗಳ ಮೊದಲೇ ಕೋಣಗಳು ಬೆಂಗಳೂರಿಗೆ ಬರಲಿದೆ. ಮಂಗಳೂರಿನಿಂದ ರಾಜಧಾನಿಗೆ ಮೆರವಣಿಗೆ ರೂಪದಲ್ಲಿ ಲಾರಿಯಲ್ಲಿ ಕೋಣಗಳು ಸಾಗಲಿದೆ. ಜತೆಗೆ ಪಶು ವೈದ್ಯರು, ಪಶು ಆ್ಯಂಬುಲೆನ್ಸ್ ಗಳು ಸಾಗಲಿದೆ.

ಸ್ಟಾರ್ ಸ್ಪರ್ಷ: ರಾಜಧಾನಿಯಲ್ಲಿ ನಡೆಯಲಿರುವ ಮೊದಲ ಕಂಬಳಕ್ಕೆ ಸಿಎ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ರಾಜಕೀಯ ನೇತಾರರು, ಚಿತ್ರರಂಗದ ಗಣ್ಯರು ಆಗಮಿಸಲಿದ್ದಾರೆ. ಕರಾವಳಿ ಕುವರಿ, ಬಾಲಿವುಡ್ ಸ್ಟಾರ್ ಐಶ್ವರ್ಯ ರೈ ಮತ್ತು ಸೂಪರ್ ಸ್ಟಾರ್ ರಜಿನಿಕಾಂತ್ ಅವರಿಗೂ ಆಹ್ವಾನ ನೀಡಲಾಗಿದೆ. ಗುರುಕಿರಣ್, ರಿಷಬ್ ಶೆಟ್ಟಿ, ಅನುಷ್ಕಾ ಶೆಟ್ಟಿ ಬರಲಿದ್ದಾರೆ ಎಂದು ಅಶೋಕ್ ರೈ ಹೇಳಿದರು.

ಕರಾವಳಿಯ ನೀರು: ಬೆಂಗಳೂರಿನ ಕಂಬಳಕ್ಕೆ ಆಗಮಿಸುವ ಪ್ರತಿ ಕೋಣಕ್ಕೂ ಮತ್ತು ಯಜಮಾನರುಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ. ಕೋಣಗಳಿಗೆ ಬೇಕಾದ ಕುಡಿಯುವ ನೀರು, ಹುರುಳಿ, ಹುಲ್ಲನ್ನು ಕರಾವಳಿಯಿಂದಲೇ ತೆಗೆದುಕೊಂಡು ಹೋಗಲಾಗುತ್ತದೆ.

ಕರಾವಳಿಯ ಕಂಬಳ ಕರೆಯಂತೆ 145 ಮೀಟರ್ ಉದ್ದದ ಟ್ರ್ಯಾಕ್ ನಲ್ಲಿ ಕಂಬಳ ನಡೆಯಲಿದೆ. ನುರಿತ ತಜ್ಞರೇ ಇದರ ಕೆಲಸ ನಿರ್ವಹಿಸಲಿದ್ದಾರೆ. ಕಂಬಳದ ಕರೆಗಳ ಹೆಸರನ್ನು ಇದುವರೆಗೂ ಅಂತಿಮಗೊಳಿಸಲಾಗಿಲ್ಲ.

ಬೃಹತ್ ಜನಸ್ತೋಮದ ನಿರೀಕ್ಷೆ: ಇತ್ತೀಚಿನ ವರ್ಷಗಳಲ್ಲಿ ಕಂಬಳ ಅಂತಾರಾಷ್ಟ್ರೀಯ ಮನ್ನಣೆ ಪಡೆಯುತ್ತಿದೆ. ಇದುವರೆಗೆ ವಿಡಿಯೋಗಳಲ್ಲಿ ಕೋಣಗಳ ಓಟ ಕಂಡಿದ್ದ ಬೆಂಗಳೂರಿನ ಜನತೆ ಭಾರೀ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. 7ರಿಂದ 9 ಲಕ್ಷ ಜನ ಸೇರುವ ಅಂದಾಜಿದ್ದು, ಎರಡು ಸಾವಿರದಷ್ಟು ವಿಐಪಿ ವ್ಯವಸ್ಥೆ, 15 ಸಾವಿರ ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗುತ್ತದೆ. ಆರು ಸಾವಿರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅಶೋಕ್ ಕುಮಾರ್ ರೈ ಹೇಳಿದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.